ಬೆಂಗಳೂರು : ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಹಾಗೂ ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಕುಮಾರಸ್ವಾಮಿ ಅವರೊಂದಿಗೆ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಡಿಕೆಶಿ ಅವರು ಜೆಪಿ ಹೆಗ್ಡೆ, ಸುಕುಮಾರ್ ಶೆಟ್ಟಿ ಹಾಗೂ ಕುಮಾರಸ್ವಾಮಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ.
ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಜಯಪ್ರಕಾಶ್ ಹೆಗ್ಡೆ ಅವರು, ಹಿಂದಿನ ಕೆಲ ಕಹಿ ಘಟನೆಗಳನ್ನು ಮರೆತು ಸಿಹಿ ಘಟನೆಗಳೊಂದಿಗೆ ಮುಂದುವರೆಯಬೇಕು. ಅದಕ್ಕಾಗಿ ನಾನು ಬಂದಿದ್ದೇನೆ. ಸರ್ಕಾರದ ಗ್ಯಾರಂಟಿ ಯೋಜನೆಗಳನ್ನ ಮನೆ ಮನೆಗೆ ಹೋಗಿ ನೆನಪು ಮಾಡಿಕೊಡಬೇಕು. ಈ ಹಿಂದೆ ಮೀನುಗಾರರಿಗೆ ಸಬ್ಸಿಡಿ ನಾನು ಕೊಡಿಸಿದ್ದೆ. ಅದನ್ನು ಪುನಃ ನೆನಪು ಮಾಡಿಕೊಡಬೇಕು ಎಂದು ಹೇಳಿದರು.
ಈ ಸಂದರ್ಭ ಸಚಿವೆ ಲಕ್ಷೀ ಹೆಬ್ಬಾಳ್ಕರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಂಶುಮಂತ್ ಗೌಡ, ಗೃಹ ಸಚಿವ ಜಿ ಪರಮೇಶ್ವರ್, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಾಸಿರ್ ಅಹಮದ್, ಸಚಿವರು ಹಾಗೂ ಉಡುಪಿ ಜಿಲ್ಲಾ ಮುಖಂಡರಾದ ಪ್ರಸಾದರಾಜ್ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English