ಗ್ಯಾರೇಜ್ ನಲ್ಲಿ ನಿಂತಿದ್ದ ಮಾಲಕ ಮೇಲೆ ಬಸ್ ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ಸಾವು

12:51 PM, Thursday, March 14th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಉಡುಪಿ : ಬಸ್ ಮಾಲಕನೋರ್ವ ತನ್ನ ಸ್ವಂತ ಬಸ್ ಡಿಕ್ಕಿ ಹೊಡೆದು ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದಯಾನಂದ ಶೆಟ್ಟಿ ಮೃತಪಟ್ಟ ದುರ್ದೈವಿಯಾಗಿದ್ದಾರೆ.

ದಯಾನಂದ ಶೆಟ್ಟಿ ಅವರ ಬಸ್ ಅನ್ನು ರಿಪೇರಿಗಾಗಿ ಅತ್ರಾಡಿಯ ಗ್ಯಾರೇಜ್​ಗೆ ಕೊಂಡೊಯ್ಯಲಾಗಿತ್ತು. ಹೀಗಾಗಿ ತಮ್ಮ ಬಸ್​ನ ದುರಸ್ತಿ ಕಾರ್ಯ ನೋಡಿಕೊಳ್ಳಲು ಸ್ವತಃ ದಯಾನಂದ ಅವರೇ ಗ್ಯಾರೇಜ್​ಗೆ ಹೋಗಿದ್ದರು. ಅದರಂತೆ ಬಸ್ ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ, ಗ್ಯಾರೇಜ್​ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದ ಬಸ್ ಮುಂದಕ್ಕೆ ಚಲಿಸಿದೆ.

ಬಸ್ ಮುಂದಕ್ಕೆ ಚಲಿಸುತ್ತಿದ್ದಂತೆ ದಯಾನಂದ ಅವರು ಬಸ್ ಅಡಿ ಬಿದ್ದು ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ದಯಾನಂದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English