ಆಳ್ವಾಸ್​ ಶಿಕ್ಷಣ ಸಂಸ್ಥೆಯ ಹಾಸ್ಟೆಲ್​ನಲ್ಲಿ ಕೋಲಾರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ, ಒಕ್ಕೂಟದಿಂದ ಪ್ರತಿಭಟನೆ

7:56 PM, Thursday, March 14th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮೂಡಬಿದ್ರೆ : ಆಳ್ವಾಸ್​ ಶಿಕ್ಷಣ ಸಂಸ್ಥೆಯ ಹಾಸ್ಟೆಲ್​ನಲ್ಲಿ ಕೋಲಾರ ಮೂಲದ ಸಂಜಯ್ ಭುವನ್ (16) ಎಂಬ ವಿದ್ಯಾರ್ಥಿ ಮಾ.12 ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಕಾಲೇಜಿಗೆ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ (NSUI) ನ ಜಿಲ್ಲಾಧ್ಯಕ್ಷ ಸುಹಾನ್ ನೇತೃತ್ವದಲ್ಲಿ ಮುತ್ತಿಗೆ‌ ಹಾಕಲಾಗಿದೆ. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರಿಂದ ಕಾಲೇಜು ಬಳಿ ಭದ್ರತೆ ಒದಗಿಸಲಾಗಿದೆ.

ಸಂಜಯ್ ಭುವನ್ ಚಿಲ್ಲರೆ ಹಣ ತೆಗೆದು ಆಡಳಿತ ಮಂಡಳಿಗೆ ತಿಳಿದು ಅವಮಾನಗೊಂಡು ಈ ನಿರ್ಧಾರಕೈ ಗೊಂಡಿದ್ದಾಗಿ ಪ್ರತಿಭಟನಾಗಾರರು ಹೇಳಿದ್ದಾರೆ. ವಿದ್ಯಾರ್ಥಿ ಆತ್ಮಹತ್ಯೆ ಕುರಿತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಿಷ್ಪಕ್ಷಪಾತ ತನಿಖೆಗೆ ವಿದ್ಯಾರ್ಥಿ ಸಂಘಟನೆ ಪೊಲೀಸರಿಗೆ ಆಗ್ರಹ ಮಾಡಿದೆ.

ಕಳೆದ 2023 ಡಿಸೆಂಬರ್ 24 ರಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದ ಮಲ್ಲಪ್ಪನವರ ಎಂಬುವವರ ಪುತ್ರ ಮನೋಜ್ ಎಂಬಾತ ಜಿಲ್ಲೆಯ ಮೂಡಬಿದ್ರೆಯಲ್ಲಿರುವ ಆಳ್ವಾಸ್​ ಶಿಕ್ಷಣ ಸಂಸ್ಥೆಯ ಹಾಸ್ಟೇಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English