ಆಹಾರದಲ್ಲಿ ವಿಷಹಾಕಿದ ದುಷ್ಕರ್ಮಿಗಳು, 10ಕ್ಕಿಂತ ಅಧಿಕ ನಾಯಿಗಳ ಸಾವು

5:52 PM, Sunday, March 31st, 2024
Share
1 Star2 Stars3 Stars4 Stars5 Stars
(4 rating, 1 votes)
Loading...

ಬೆಳ್ತಂಗಡಿ : ದುಷ್ಕರ್ಮಿಗಳು ಆಹಾರದಲ್ಲಿ ವಿಷಹಾಕಿದ ಪರಿಣಾಮ ಸಾಕುನಾಯಿಗಳು ಸೇರಿದಂತೆ 10ಕ್ಕಿಂತ ಅಧಿಕ ನಾಯಿಗಳು ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ನಡೆದಿದೆ.

ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾರೋ ಯಾವುದು ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ. ಅವುಗಳನ್ನು ತಿಂದಿರುವ ನಾಯಿಗಳು ಅಲ್ಲಲ್ಲಿ ಸತ್ತು ಬಿದ್ದಿವೆ ಎಂದು ತಿಳಿದುಬಂದಿದೆ.

ಈಸ್ಟರ್ ಹಬ್ಬದಿಂದ ವಾಪಸ್ಸು ಬರುತ್ತಿದ್ದ ಜನರು ಇದನ್ನು ಗಮನಿಸಿ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಅವರ ಗಮನಕ್ಕೆ ತಂದಿದ್ದಾರೆ. ಪರಿಶೀಲನೆ ನಡೆಸಿದಾಗ ಕೆಲವು ಮನೆಗಳ ಅಂಗಳದಲ್ಲೂ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English