ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ

9:46 PM, Thursday, April 18th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದಲ್ಲಿ ರಾಮನವಮಿಯ ಉತ್ಸವ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ, ಗುದ್ದಾಟ ನಡೆದ ಘಟನೆ ಗುರುವಾರ ಅಪರಾಹ್ನ ನಡೆದಿದೆ.

ಸಾಯಿಬಾಬಾ ಮಂದಿರದ ಬಳಿ ಬಿಜೆಪಿ ಕಾರ್ಯಕರ್ತರು ಚುನಾವಣಾ ಪ್ರಚಾರ ಮಾಡುತ್ತಿದ್ದಾಗ ಕಾಂಗ್ರೆಸ್ಸಿಗರು ಪ್ರಚಾರ ನಡೆಸದಂತೆ ಸೂಚಿಸಿದರು ಎನ್ನಲಾಗಿದೆ.

ಈ ಸಂದರ್ಭ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ, ಹೊಯ್‌ಕೈ ನಡೆಯಿತು ಎನ್ನಲಾಗಿದೆ. ಅಷ್ಟರಲ್ಲಿ ಶಾಸಕ ವೇದವ್ಯಾಸ ಕಾಮತ್ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಧ್ಯಪ್ರವೇಶಿಸಿ ಆಯಾ ಪಕ್ಷದ ಕಾರ್ಯಕರ್ತರನ್ನು ಸಮಾಧಾನ ಪಡಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮಾಹಿತಿ ತಿಳಿದ ಪೊಲೀಸರುತಕ್ಷಣ ಸ್ಥಳಕ್ಕೆ ತೆರಳಿ ಇತ್ತಂಡದ ಗುಂಪುಗಳನ್ನು ಚದುರಿಸಿದರು ಎಂದು ತಿಳಿದು ಬಂದಿದೆ.

ರಾಮನವಮಿಯ ಹಿನ್ನೆಲೆಯಲ್ಲಿ ಚಿಲಿಂಬಿಯ ಸಾಯಿ ಮಂದಿರದ ಬಳಿ ಭಾರೀ ಸಂಖ್ಯೆಯ ಭಕ್ತರು ಸೇರಿದ್ದರು. ಈ ವೇಳೆ ಬಿಜೆಪಿಗರು ಇಲ್ಲೇ ಚುನಾವಣೆ ಪ್ರಚಾರಕ್ಕೆ ಮುಂದಾಗಿದ್ದರು.ಮಂದಿರದ ಬಳಿ ಪ್ರಚಾರ ನಡೆಸುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದಾಗ ವಾಗ್ವಾದ, ಮಾತಿನ ಚಕಮಕಿ, ಹೊಯ್‌ಕೈ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English