ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದ ಕಾಡಿನಲ್ಲಿ ತಲೆಬುರುಡೆ ಹಾಗೂ ಚೀಲ ಪತ್ತೆ

4:04 PM, Sunday, April 21st, 2024
Share
1 Star2 Stars3 Stars4 Stars5 Stars
(5 rating, 1 votes)
Loading...

ಸುಳ್ಯ : ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏ. 19 ರಂದು ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಕಾಡಿನಿಂದ ಕಟ್ಟಿಗೆ ತರಲು ಹೋಗುತ್ತಿದ್ದರು. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಮೀಸಲು ಅರಣ್ಯದ ಕಡೆಗೆ ಹೋಗುತ್ತಿದ್ದಾಗ ದಾರಿ ಬದಿಯಲ್ಲಿ ಕೊಳೆತ ತಲೆಬುರುಡೆ ಮತ್ತು ಚೀಲ ಪತ್ತೆಯಾಗಿದೆ.

ಸ್ವಲ್ಪ ದೂರದಲ್ಲಿ ಮರದ ಕೊಂಬೆಗೆ ಬಟ್ಟೆ ನೇತಾಡುತ್ತಿತ್ತು. ದೂರಿನಲ್ಲಿ ತಲೆಬುರುಡೆ ಕಾಡಿನಲ್ಲಿ ಪತ್ತೆಯಾಗಿರುವ ವ್ಯಕ್ತಿಯ ಸಾವಿನ ಬಗ್ಗೆ ದೂರುದಾರರು ಅನುಮಾನ ವ್ಯಕ್ತಪಡಿಸಿದ್ದಾರೆ.ಕಡಬ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English