ಖಜಾನೆ ಖಾಲಿಯಾಗಿರುವ ಸಂಕೇತವೇ ಪೆಟ್ರೋಲ್ ದರ ಏರಿಕೆ

9:28 PM, Saturday, June 15th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಕಾವೂರು: ಪೆಟ್ರೋಲ್ ಬೆಲೆ ಕಳೆದ ಎರಡು ವರೆ ತಿಂಗಳಿನಿಂದ ಲೀಟರ್ 99 ರೂಪಾಯಿ ಸಿಗುತ್ತಿದ್ದರೆ ಶನಿವಾರ ರಾಜ್ಯ ಸರಕಾರ ಏಕಾಏಕಿ 3.20 ರೂ.ದರ ಏರಿಕೆ ಮಾಡಿದ್ದು 102 ದಾಟಿದೆ.ಇದು ರಾಜ್ಯದ ಖಜಾನೆ ಖಾಲಿಯಾಗಿರುವ ಸಂಕೇತ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.

ಬಡ ಜನರಿಗೆ ಉಚಿತ ಗ್ಯಾರಂಟಿಯೊಂದಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯ ಗ್ಯಾರಂಟಿ ಸಿಗಲಿದೆ. ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲೇ ಬೆಲೆ ಏರಿಕೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರೆ ಜನ ತಮ್ಮ ತಮ್ಮ ಬಜೆಟ್ ಹೊಂದಾಣಿಕೆ ಮಾಡಿಕೊಂಡು ಸಿದ್ದವಾಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ಈಗಾಗಲೇ ಆಸ್ತಿ ತೆರಿಗೆ, ಸ್ಟಾಂಪ್ ಡ್ಯೂಟಿ, ಬ್ಯಾಂಕಿನಲ್ಲಿ ಚಿನ್ನ ಅಡವಿ ಬೇಕಾದರೆ 2 ಸಾವಿರ ರೂ ಸ್ಟ್ಯಾಂಪ್ ಖರೀದಿ ಮಾಡಲೇ ಬೇಕಾದ ಒಪ್ಪಂದ, ಸಹಿತ ದಿನ ಬಳಕೆಯ ವಸ್ತುಗಳ ಬೆಲೆ ಸದ್ದಿಲ್ಲದೆ ಏರಿಕೆಯಾಗಿದ್ದು ಜನತೆ ಇದಕ್ಕೆ ಮುಂದಿನ ಸ್ಥಳೀಯ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಎಚ್ಚರಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English