ವಿಟ್ಲ : ಅಸ್ತಿ ವಿಚಾರವಾಗಿ ಸಹೋದರರ ನಡುವಿನ ಜಗಳ ಕೊಲೆಯ ಮೂಲಕ ಅಂತ್ಯ ಕಂಡ ಘಟನೆ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಬನಾರಿಯಲ್ಲಿ ನಡೆದಿದೆ.
ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದು, ಸಹೋದರ ಪದ್ಮನಾಭ (49) ಕೊಲೆಗೈದ ಆರೋಪಿಯಾಗಿದ್ದಾನೆ.
ಜಾಗದ ವಿಚಾರವಾಗಿ ಹಾಗೂ ಕುಡಿದು ಮನೆಯಲ್ಲಿ ಆಗಾಗ ಗಲಾಟೆ ಸಂಭವಿಸುತ್ತಿದ್ದು, ಒಂದು ತಿಂಗಳ ಹಿಂದೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಮಂಗಳವಾರ ರಾತ್ರಿಯೂ ಗಲಾಟೆ ನಡೆದಿದೆ ಎನ್ನಲಾಗಿದ್ದು, ಬುಧವಾರ ಕೊಲೆ ಕುರಿತು ವಿಟ್ಲ ಠಾಣೆಗೆ ದೂರು ನೀಡಲಾಗಿತ್ತು.
Click this button or press Ctrl+G to toggle between Kannada and English