ವಿಟ್ಲ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕನ್ಯಾನದ ಅಶ್ವಿನಿ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ ಯೋಗಿಶ (34) ಎಂಬಾತ ಆತ್ಮಹತ್ಯೆಗೆ ಶರಣಾದ ಯುವಕ.
ಕನ್ಯಾನ ಬಂಡಿತ್ತಡ್ಕ ನಿವಾಸಿ ಯೋಗಿಶ ಅವರು ಅವಿವಾಹಿತರಾಗಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Click this button or press Ctrl+G to toggle between Kannada and English