[1]ಉಡುಪಿ : ಉಡುಪಿ-ಮಣಿಪಾಲ ಪರಿಸರದ ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಗಾಂಜಾವನ್ನು ಮಾರಲು ಯತ್ನಿಸುತ್ತಿದ್ದ ಯುವಕನನ್ನು ಡಿಸಿಐಬಿ ಇನ್ಸ್ಪೆಕ್ಟರ್ ಪ್ರವೀಣ್ ನಾಯಕ್ ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ. ಮಂಗಳೂರು ತಾಲೂಕು ಕೋಡಿ ಉಳ್ಳಾಲ ನಿವಾಸಿ ಮೊಹ ಮ್ಮದ್ ಇಕ್ಬಾಲ್ ಬಂಧಿತ. ಈತನಿಂದ ನಗದು 420 ರೂಪಾಯಿ ಮತ್ತು 580 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ವಶಪಡಿಸಿಕೊಂಡ ಗಾಂಜಾ ಮೌಲ್ಯ 16 ಸಾವಿರ ಎಂದು ಅಂದಾಜಿಸಲಾಗಿದೆ.
ಮಂಗಳವಾರ ಖಚಿತ ಮಾಹಿತಿ ಪಡೆದ ಡಿಸಿಐಬಿ ಇನ್ಸ್ಪೆಕ್ಟರ್ ಪ್ರವೀಣ್ ಎಚ್. ನಾಯಕ್ ನೇತೃತ್ವದ ತಂಡ ದಾಳಿ ನಡೆಸಿ ಗಾಂಜಾ ಹಿಡಿದುಕೊಂಡು ನಿಂತಿದ್ದ ಆರೋಪಿತನನ್ನು ಬಂಧಿಸಿದೆ. ಈತ ಉಪ್ಪಳದಿಂದ ಗಾಂಜಾವನ್ನು ತಂದು ಹಲವು ಸಮಯಗಳಿಂದ ಬೇರೆ ಬೇರೆ ಸ್ಥಳಗಳಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಇತರೇ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.