ಮಂಗಳೂರು : ಕಾಂತಾರ ಸಿನೆಮಾ ನಟಿ ಸಪ್ತಮಿಗೌಡ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಇವರನ್ನು ದೇವಳದ ವತಿಯಿಂದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಪ್ತಮಿ ಗೌಡ ಕಾಂತಾರ ಯಶಸಿಸ್ಸಿನ ಬಗ್ಗೆ ಹೆಮ್ಮೆ ಇದೆ, ತುಳುನಾಡಿನ ದೈವಾರಾಧನೆ ಬಗ್ಗೆ ನನಗೆ ಮೊದಲು ತಿಳಿದಿರಲಿಲ್ಲ, ಕಾಂತಾರಾ ಚಿತ್ರದ ನಂತರ ತಿಳಿದುಕೊಂಡೆ, ಕಾಂತಾರ ಚಿತ್ರದ ಬಳಿಕ ಬೇರೆ ಬೇರೆ ನಿನಿಮಾಗಳ ಮಾತುಕತೆ ನಡೆಯುತ್ತಿದೆ, ತುಳುವಲ್ಲಿ ಅವಕಾಶ ಸಿಕ್ಕಿದರೆ ಖಂಡಿತ ನಟಿಸುಸುವ ಆಶಯ ವ್ಯಕ್ತಪಡಿಸಿದರು.
ಬಳಿಕ ಕಲ್ಲಾಪು ಬುರ್ದುಗೋಳಿ ಕೊರಗಜ್ಜನ ಉದ್ಭವಶಿಲೆಯ ಆದಿತಳಕ್ಕೆ ಹಾಗೂ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ ನೀಡಿದರು.
Click this button or press Ctrl+G to toggle between Kannada and English