ಸುಳ್ಯ : ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ಮಹಿಳೆಯ ಎದೆಗೆ ಕತ್ತಿ ಇರಿದು ಗಂಭೀರ ಗಾಯಗೊಂಡು ಮೃತಪಟ್ಟ ದಾರುಣ ಘಟನೆ ಎಡಮಂಗಲ ಗ್ರಾಮದ ಬಳಕ್ಕಬೆ ಎಂಬಲ್ಲಿ ನಡೆದಿದೆ.
ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾರವರು ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮುಗಿಸಿ ಸುಮಾರು 7 ಗಂಟೆ ಹೊತ್ತಿಗೆ ಮನೆಗೆ ವಾಪಾಸಾಗುತ್ತಿದ್ದರು. ಈ ವೇಳೆ ಎಡವಿ ಬಿದ್ದರೆನ್ನಲಾಗಿದೆ. ಈ ಸಂದರ್ಭ ಹರಿತವಾದ ಕತ್ತಿ ಎದೆಯೊಳಗೆ ಹೊಕ್ಕು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪತಿ ಪೊಲೀಸ್ ದೂರು ನೀಡಿದ್ದು, ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Click this button or press Ctrl+G to toggle between Kannada and English