- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಭಾಮಿನಿ ಮಾಸ ಪತ್ರಿಕೆ ಬಿಡುಗಡೆ

ಭಾಮಿನಿ ಮಾಸ ಪತ್ರಿಕೆ ಬಿಡುಗಡೆ [1]ಮಂಗಳೂರು : ಭಾಮಿನಿ ಮಾಸ ಪತ್ರಿಕೆಯ ಬಿಡುಗಡೆ ಸಮಾರಂಭ ಇಂದು ಸಂಜೆ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಸುಮಂತ್ ಎಸ್. ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.

ಭಾಮಿನಿ ಮಾಸ ಪತ್ರಿಕೆ ಬಿಡುಗಡೆ [2]
ಭಾಮಿನಿ ಪತ್ರಿಕೆಯ ಬಿಡುಗಡೆಯನ್ನು ಆಳ್ವಾಸ ಎಜುಕೇಶನ್ ಫೌಂಡೇಶನ್ ಇದರ ಅಧ್ಯಕ್ಷ ಎಂ. ಮೋಹನ ಆಳ್ವಾ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಭಾಮಿನಿ ಮಾಸ ಪತ್ರಿಕೆ ಸುಸಂಸ್ಕೃತವಾಗಿ ಹೊರಬರಲಿ, ಓದುಗರ ಮನದಲ್ಲಿ ಭಾವೈಕ್ಯತೆ ಮೂಡಿಸಲಿ ಎಂದು ಹಾರೈಸಿದರು.

ಭಾಮಿನಿ ಮಾಸ ಪತ್ರಿಕೆ ಬಿಡುಗಡೆ [3]
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರಿಕೃಷ್ಣ ಪುನರೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಂಎಸ್ಇಝಡ್ ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಎ ಜೆ. ಪೈ ಉಪಸ್ಥಿತರಿದ್ದರು. ಮಂಜೇಶ್ವರ ವಿಧಾನ ಸಭಾ ಶಾಸಕ ಸಿ. ಎಚ್. ಕುಂಞಂಬು ಮತ್ತು ಯಕ್ಷಗಾನ ಕಲಾವಿದರಾದ ಬಲಿಪ ನಾರಾಯಣ ಭಾಗವತರು ಉಪಸ್ಥಿತರಿದ್ದರು.
ಸಂಪಾದಕ ಮುರಳಿ ಶೇಣಿ ಸ್ವಾಗತಿಸಿದರು.

ಭಾಮಿನಿ ಮಾಸ ಪತ್ರಿಕೆ ಬಿಡುಗಡೆ [4]

ಭಾಮಿನಿ ಮಾಸ ಪತ್ರಿಕೆ ಬಿಡುಗಡೆ [5]

ಭಾಮಿನಿ ಮಾಸ ಪತ್ರಿಕೆ ಬಿಡುಗಡೆ [6]

ಭಾಮಿನಿ ಮಾಸ ಪತ್ರಿಕೆ ಬಿಡುಗಡೆ [6]