- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರಿನಲ್ಲಿ ಮತ್ತೆ ನೈತಿಕ ಪೋಲೀಸ್ ಗಿರಿ, ಮಹಿಳೆಯೊಂದಿಗಿದ್ದ ಅನ್ಯ ಕೋಮಿನ ವ್ಯಕ್ತಿ ಮೇಲೆ ಹಲ್ಲೆ

Bhajrangdal activists [1]ಮಂಗಳೂರು : ನಗರದ ಪಂಪ್ ವೆಲ್ ಬಳಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ  ಯುವತಿ ಹಾಗು ಅದೇ ಅಂಗಡಿಯ ಮಾಲಕನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಹಿಡಿದು ಥಳಿಸಿ  ಪೊಲೀಸರಿಗೆ ಒಪ್ಪಿಸಿದ  ಘಟನೆ ಗುರುವಾರ ಸಂಜೆ ನಡೆದಿದೆ.

ಯುವತಿಗೆ 6 ತಿಂಗಳ ಹಿಂದೆ ಮದುವೆಯಾಗಿದ್ದರು ತನ್ನ ಅಂಗಡಿ ಮಾಲಕನ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಲಾಗಿದೆ. ನಿನ್ನೆ ಸಂಜೆ ಉದ್ಯೋಗ ಮುಗಿಸಿ ಕಾರಿನಲ್ಲಿ ಜತಯಾಗಿ ಪ್ರಯಾಣಿಸುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು  ಇವರಿಬ್ಬರನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿದರು ಎನ್ನಲಾಗಿದೆ. ಕದ್ರಿ ಪೊಲಿಸರು ಇಬ್ಬರ ವಿಚಾರಣೆ ನಡೆಸಿದ್ದಾರೆ.