[1]ಮಂಗಳೂರು : ನಗರದ ಬೆಸೆಂಟ್ ಮಹಿಳಾ ಕಾಲೇಜಿನ ಆವರಣದ ಬಳಿ ಇರುವ ಪಾನ್ ಸ್ಟಾಲ್ ನಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದ ಪಾಲಿಕೆ ಅಧಿಕಾರಿಗಳು ಇಂದು ಪಾನ್ ಸ್ಟಾಲ್ ಮೇಲೆ ದಾಳಿ ಮಾಡಿ ಮಾರಾಟ ಮಾಡುತ್ತಿದ್ದ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡು ಇನ್ನು ಮುಂದೆ ಇಂತಹ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು.
ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ನಗರದ ಬೆಸೆಂಟ್ ಮಹಿಳಾ ಕಾಲೇಜಿನ ಆವರಣದ ಬಳಿಯಿದ್ದ ಪಾನ್ ಸ್ಟಾಲ್ ನವರು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದುದರ ಬಗ್ಗೆ ಅರಿತ ಅಧಿಕಾರಿಗಳು ಇಂದು ದಾಳಿ ನಡೆಸಿ ಅಂಗಡಿಯವರಲ್ಲಿ ಈ ಬಗ್ಗೆ ವಿಚಾರಿಸಿದಾಗ ತಾವು ಅಂತಹ ಉತ್ಪನ್ನಗಳನ್ನು ಮಾರಾಟ ಮಾಡುತ್ತಿಲ್ಲ ಎಂಬುದಾಗಿ ತಿಳಿಸಿದ್ದಾನೆ. ಆದರೆ ಅಧಿಕಾರಿಗಳು ಅಂಗಡಿಯ ಸುತ್ತಮುತ್ತ ಪರಿಶೀಲಿಸಿದಾಗ ಎರಡು ಪ್ಲಾಸ್ಟಿಕ್ ಚೀಲಗಳಲ್ಲಿ ಸಿಗರೇಟು, ಗುಟ್ಕಾ ಹಾಗೂ ಇನ್ನಿತರ ಉತ್ಪನ್ನಗಳು ಅಧಿಕಾರಿಗಳಿಗೆ ದೊರೆತವು. ಭರತ್, ಸುಶಾಂತ್ ಹಾಗೂ ಇನ್ನಿತರರ ಪಾಲಿಕೆ ಅಧಿಕಾರಿಗಳು ದಾಳಿಯ ಮುಂದಾಳತ್ವ ವಹಿಸಿದ್ದರು.