ದ.ಕ. ಜಿಲ್ಲಾ ವಕ್ಫ್ ಬೋರ್ಡ್ ನ ನೂತನ ಅಧ್ಯಕ್ಷರಾಗಿ ಹಾಜಿ ಎಸ್. ಎಚ್ ಉಸ್ಮಾನ್ ಅಧಿಕಾರ ಸ್ವೀಕಾರ.

3:10 PM, Monday, October 11th, 2010
Share
1 Star2 Stars3 Stars4 Stars5 Stars
(No Ratings Yet)
Loading...

ದ.ಕ. ಜಿಲ್ಲಾ ವಕ್ಫ್ ಬೋರ್ಡ್ ನ ನೂತನ ಅಧ್ಯಕ್ಷರಾಗಿ ಹಾಜಿ ಎಸ್. ಎಚ್ ಉಸ್ಮಾನ್ಮಂಗಳೂರು: 1962 ರಲ್ಲಿ ಸ್ಥಾಪನೆಯಾದ ದ.ಕ. ಜಿಲ್ಲಾ ವಕ್ಫ್ ಬೋರ್ಡ್ ಇದರ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಎಸ್.ಎಚ್. ಉಸ್ಮಾನ್ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು.

ದ.ಕ. ಜಿಲ್ಲಾ ವಕ್ಫ್ ಬೋರ್ಡ್ ನ ನೂತನ ಅಧ್ಯಕ್ಷರಾಗಿ ಹಾಜಿ ಎಸ್. ಎಚ್ ಉಸ್ಮಾನ್
ಕಳೆದ ಮೂರು ಬಾರಿಯ ಅವಧಿಯಲ್ಲಿ ವೈ. ಮೊಹಮ್ಮದ್ ಕುಂಞ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಸರಕಾರದ ವತಿಯಿಂದ ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುವ ಈ ಸಂಸ್ಥೆಯಲ್ಲಿ, ಸರಕಾರದ ವಿವಿಧ ಯೋಜನೆಗಳು, ಜಿಲ್ಲೆಯ ಮಸೀದಿ ಮೊದಲಾದ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗಾಗಿ ಸರಕಾರ ಬಿಡುಗಡೆ ಮಾಡುವ ಯೋಜನೆಗಳನ್ನು ತಲುಪಿಸುವುದಾಗಿದೆ ಎಂದು ನೂತನ ಅಧ್ಯಕ್ಷ ಎಸ್.ಎಚ್. ಉಸ್ಮಾನ್ ಹೇಳಿದರು.

ದ.ಕ. ಜಿಲ್ಲಾ ವಕ್ಫ್ ಬೋರ್ಡ್ ನ ನೂತನ ಅಧ್ಯಕ್ಷರಾಗಿ ಹಾಜಿ ಎಸ್. ಎಚ್ ಉಸ್ಮಾನ್
ವಕ್ಫ್ ಬೋರ್ಡ್ ಸದಸ್ಯರಾದ ರಹೀಂ ಉಚ್ಚಿಲ್, ಅಬ್ದುಲ್ ಕುಂಞ ನೆಲ್ಯಾಡ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ, ಮೋನಪ್ಪ ಭಂಡಾರಿ, ಬಿಜೆಪಿ ಅಲ್ಪ ಸಂಖ್ಯಾತ ಸದಸ್ಯ ಅಬ್ದುಲ್ ಅಜೀಜ್, ಖಲೀಲ್ ಬಿಸಿರೋಡ್, ಜಾಕೀರ್ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
ಹಾಜಿ ಅಶ್ರಫ್ ತಂಞಲ್ ಪ್ರಾರ್ಥನೆ ನಡೆಸಿದರು.

ದ.ಕ. ಜಿಲ್ಲಾ ವಕ್ಫ್ ಬೋರ್ಡ್ ನ ನೂತನ ಅಧ್ಯಕ್ಷರಾಗಿ ಹಾಜಿ ಎಸ್. ಎಚ್ ಉಸ್ಮಾನ್

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English