ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್.ಪ್ರಕಾಶ್ ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ

4:17 PM, Thursday, February 21st, 2013
Share
1 Star2 Stars3 Stars4 Stars5 Stars
(No Ratings Yet)
Loading...

MCC administratorಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್.ಪ್ರಕಾಶ್ ರವರು ಇಂದು ಪಾಲಿಕೆಯ ಆಯುಕ್ತರಾಗಿರುವ ಹರೀಶ್ ಕುಮಾರ್ ಹಾಗೂ ಇತರ ಅಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರ ವಹಿಸಿಕೊಂಡರು. ಮಾರ್ಚ್ 7ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು  ನಡೆಸಲು ಚುನಾವಣಾ ಆಯೋಗವು ನಿರ್ಧರಿಸಿರುವುದರಿಂದ, ಹಾಗು ಈಗಾಗಲೇ ಪಾಲಿಕೆಯಲ್ಲಿ ಅಧಿಕಾರದಲ್ಲಿದ್ದ ಪಕ್ಷಗಳ ಅಧಿಕಾರ ವ್ಯಾಪ್ತಿಯು ಮುಗಿದಿರುವುದರಿಂದ ಜಿಲ್ಲಾಧಿಕಾರಿ ಎನ್.ಪ್ರಕಾಶ್ ರವರು ಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.

ಬಳಿಕ ಮಾತನಾಡಿದ ಅವರು ಈಗಾಗಲೇ ಪ್ರಾರಂಭವಾಗಿರುವ ಎಲ್ಲಾ ಕಾಮಗಾರಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುವುದು ಹಾಗೂ ಪ್ರತಿ ವರ್ಷದಂತೆ ಈ ವರ್ಷವೂ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆ ಇರುವುದರಿಂದ ಈ ಬಗ್ಗೆ ಹೆಚ್ಚು ಗಮನಹರಿಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English