ಅಕ್ರಮ ಗಾಂಜಾ ಸಾಗಾಟ ನಾಲ್ವರು ಆರೋಪಿಗಳ ಸೆರೆ

12:24 PM, Saturday, March 2nd, 2013
Share
1 Star2 Stars3 Stars4 Stars5 Stars
(No Ratings Yet)
Loading...

ganja seized at Sulliaಸುಳ್ಯ : ಶುಕ್ರವಾರ ಸಂಪಾಜೆ ಗ್ರಾಮದ ಕಲ್ಲುಗುಂಡಿ ಕೂಲಿ ಶೆಡ್ಡ್ ಬಳಿ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಜಾಲವನ್ನು ಜಿಲ್ಲಾ ಅಪರಾಧ ಪತ್ತೆ ದಳ ಮತ್ತು ಸುಳ್ಯ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರನ್ನು ಬಂಧಿಸಿ ಅವರ ಬಳಿಯಲ್ಲಿದ್ದ 1.100 ಕೆ.ಜಿ. ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ನಗರದ ಆಸುಪಾಸಿನ ಅವಿನಾಶ್‌(29), ಅರುಣ್‌ ಶೆಟ್ಟಿ(38), ನೆಲ್ಸನ್‌ ಡಿಸೋಜ(29) ಮತ್ತು ಪ್ರಥ್ವಿ ಆಳ್ವ(38) ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ರೂಪಾಯಿ  35049 ನಗದು, 6 ಮೊಬೈಲ್‌, 1 ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಂಗಳೂರಿನಲ್ಲಿ ನಡೆದ ಬಿಜೈ ರಾಜನ ಕೊಲೆ ಪ್ರಕರಣದ ಆರೋಪಿ ಪ್ರದೀಪ್ ಮೆಂಡನ್ ಮಡಿಕೇರಿ ಕಾರಾಗೃಹದಲ್ಲಿದ್ದು ಆತನಿಗೆ ಪೂರೈಕೆ ಮಾಡಲು ಈ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಜಿಲ್ಲಾ ಅಪರಾಧ ಪತ್ತೆ ದಳದ ಇನ್ಸ್‌ಪೆಕ್ಟರ್‌ ವಿನಯ ನಾಯಕ್‌, ಎಎಸ್‌ಐ ಸಂಜೀವ ಪುರುಷ, ಉದಯ ರೈ, ಚಂದ್ರು , ಇಕ್ಬಾಲ್‌, ಸುಳ್ಯ ವೃತ್ತ ನಿರೀಕ್ಷಕ ಎಚ್‌.ವಿ.ಸುದರ್ಶನ್‌, ಅಪರಾಧ ಪತ್ತೆ ದಳ ವಿಭಾಗದ ಎಎಸ್‌ಐ ಎಂ.ಎನ್‌.ರಾವ್‌, ತಾರಾನಾಥ, ತೀರ್ಥಪ್ರಸಾದ್‌ ಮೊದಲಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English