ನಿಡ್ಡೋಡಿ ಉಷ್ಣ ವಿದ್ಯುತ್ ಸ್ಥಾವರ ವಿರುದ್ಧ ದ ಹೋರಾಟಕ್ಕೆ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಬೆಂಬಲ

5:52 PM, Saturday, March 2nd, 2013
Share
1 Star2 Stars3 Stars4 Stars5 Stars
(No Ratings Yet)
Loading...

Sri Vishwesha Theertha Swamiji ಉಡುಪಿ : ಮೂಡುಬಿದಿರೆ ಸಮೀಪದ ನಿಡ್ಡೋಡಿಯಲ್ಲಿ ಸರ್ಕಾರ ಸ್ಥಾಪಿಸಲುದ್ದೇಶಿಸಿರುವ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಗೆ ಸ್ಥಳೀಯರಿಂದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿಯೇ ಶುಕ್ರವಾರ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ  ಸ್ಥಳೀಯ ಜನರ ಹೋರಾಟಕ್ಕೆ ತಾವು  ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ಶುಕ್ರವಾರ ಪೇಜಾವರ ಮಠದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಸ್ಥಾಪನೆಯಾದ ವಿಶೇಷ ಆರ್ಥಿಕ ವಲಯದ ವಿರುದ್ಧ ಕೂಡ ನಾನು ದನಿಯೆತ್ತಿದ್ದೆ ಇದಕ್ಕೆ ಪ್ರತಿಯಾಗಿ ಕೆಲವು ರಾಜಕೀಯ ನಾಯಕರು ನನ್ನನ್ನು ಟೀಕಿಸಿದ್ದರು ಆದರೆ ನಾನು ಇವು ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳಲಿಲ್ಲ ಎಂದ ಅವರು ಇದೀಗ ನಿಡ್ಡೋಡಿ ಸ್ಥಾವರದ ವಿರುದ್ದ ಕೂಡ ಹೋರಾಡಲು ತಯಾರಿರುವುದಾಗಿ ಮತ್ತು ಇದಕ್ಕೆ ಎಲ್ಲರೂ ಒಟ್ಟಾಗಿ ಹೋರಾಡುವ ಅಗತ್ಯವಿದೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English