[1]ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಚ್.ಡಿ.ಕೆ. ಯುವಸೇನೆಯನ್ನು ಸ್ಥಾಪಿಸಲಾಗಿದ್ದು, ಇದರ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ತನ್ನನ್ನು ಎಚ್.ಡಿ.ಕುಮಾರ ಸ್ವಾಮಿಯವರ ಶಿಫಾರಸ್ಸಿನಂತೆ , ಸೇನೆಯ ರಾಜ್ಯಾಧ್ಯಕ್ಷ ಶರಣ್ ಗೌಡರವರು ಆಯ್ಕೆ ಮಾಡಿರುವುದಾಗಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಪ್ರದೀಪ್ ಪ್ರಭಾಕರ್ ರವರು ತಿಳಿಸಿದರು.
ನಗರದಲ್ಲಿ ಇಂದು ಈ ವಿಚಾರ ವಾಗಿ ನಡೆದ ಪತ್ರಿಕಾ ಘೋಷ್ಠಿ ಯಲ್ಲಿ ಈ ಕುರಿತು ಮಾತನಾಡಿದ ಅವರು ಎಚ್.ಡಿ. ಕುಮಾರಸ್ವಾಮಿಯವರ ಆದರ್ಶ, ತತ್ವ ನಿಲುವು, ಬಡವರ ಪರ ಕಾಳಜಿ ಇವೆಲ್ಲವನ್ನು ಯುವಕರಲ್ಲಿ ಮೈಗೂಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಚ್.ಡಿ.ಕೆ. ಯುವಸೇನೆಯನ್ನು ಸ್ಥಾಪಿಸಲಾಗಿದ್ದು, ಕೋಮು ಗಲಭೆಗಳ ವಿರುದ್ಧ ಹೋರಾಡುವ, ಮತ್ತು ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳುವಂತಹ, ನಾಯಕತ್ವದ ಗುಣವುಳ್ಳ ಯುವಕರ ನಿರ್ಮಾಣ ವನ್ನು ಸೇನೆಯು ಮಾಡುವುದಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಸೇನೆ ಒಂದು ಪ್ರಬಲ ಸಂಘಟನೆಯಾಗಿ ಹೊರಹೊಮ್ಮಲಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಾತ್ಯಾತೀತ ಜನತಾದಳದ ಕೋರ್ ಕಮಿಟಿ ಅಧ್ಯಕ್ಷ ಸದಾನಂದ ಶೆಟ್ಟಿ, ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ವಸಂತ ಪೂಜಾರಿ, ಜೆಡಿಎಸ್ ವಲಯಾಧ್ಯಕ್ಷ ಗೋಪಾಲಕೃಷ್ಣ ಅತ್ತಾವರ್, ಮಂಗಳೂರು ನಗರಾಧ್ಯಕ್ಷ ಅಝೀಝ್ ಕುದ್ರೋಳಿ, ಯುವಜನತಾದಳದ ಕಾರ್ಯಾಧ್ಯಕ್ಷ ಶ್ರೀನಾಥ್ ರೈ, ಎಚ್.ಡಿ.ಕೆ. ಯುವಸೇನೆಯ ಮಂಗಳೂರು ವಲಯಾಧ್ಯಕ್ಷ ಸಂದೀಪ್ ಸಾಲ್ಯಾನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.