[1]ಮಂಗಳೂರು: ನಗರದ ಪೊಲೀಸ್ ಪ್ರಧಾನ ಕಛೇರಿಯಲ್ಲಿ ಇಂದು ಬೆಳಿಗ್ಗೆ ಇಲಾಖೆಯ ತುಪಾಕಿಗಳಿಗೆ ಮತ್ತು ವಾಹನಗಳಿಗೆ ಆಯುಧ ಪೂಜೆಯನ್ನು ಮಾಡಲಾಯಿತು.
ಐಜಿಪಿ ಅಲೋಕ್ ಮೋಹನ್, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಎಸ್.ಪಿ ಸುಬ್ರಹ್ಮಣ್ಯೇಶ್ವರ ರಾವ್ ಆಯುಧ ಪೂಜೆಯಲ್ಲಿ ಭಾಗವಹಿಸಿದ್ದರು.
ಎಡಬಿಡದೆ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ವಾಹನಗಳು, ಪೊಲೀಸರ ಹೆಗಲೇರುತ್ತಿದ್ದ ತುಪಾಕಿಗಳು ಇಂದು ಸ್ವಚ್ಚವಾಗಿ ಸುಂದರವಾಗಿ ಅಲಂಕರಿಸಲ್ಪಟ್ಟಿದ್ದವು ಪೂಜೆಯಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.