- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಭಟ್ಕಳ ಸಮೀಪದ ಮುಗ್ಳಿಹೊಂಡದಲ್ಲಿ ಭೀಕರ ಅಪಘಾತ ಬೈಕ್ ಸವಾರರಿಬ್ಬರ ಸಾವು

Bhatkal bike accsident [1]ಕುಂದಾಪುರ : ಭಟ್ಕಳದ ಹೊಟೇಲ್ ವೊಂದರಲ್ಲಿ ಪಾರ್ಟಿ ಮುಗಿಸಿ ಶಿರೂರಿನ ತಮ್ಮ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಬೈಕ್ ಸವಾರರಿಬ್ಬರು ಭಟ್ಕಳ ಸಮೀಪದ ಮುಗ್ಳಿಹೊಂಡ ಎಂಬಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.

ಬೈಂದೂರು ಸಮೀಪದ ಶಿರೂರಿನ ಮಾರ್ಕೆಟ್ ರಸ್ತೆ ನಿವಾಸಿಗಳಾದ ಹುರೈಸ್(೧೮) ಹಾಗೂ ತನೀರ್ ಅಧಮ್(೧೮) ಮೃತ ಬೈಕ್ ಸವಾರರಾಗಿದ್ದಾರೆ.

ಹುರೈಸ್ ಹಾಗೂ ತನೀರ್ ಅಧಮ್ ಭಟ್ಕಳದ ಹೊಟೇಲ್ ವೊಂದರಲ್ಲಿ ಪಾರ್ಟಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮುಗ್ಳಿಹೊಂಡ ಎಂಬಲ್ಲಿ ಎದುರಿನಿಂದ ಬಂದ ಟ್ರಕ್ ಮುಖಾಮುಖಿಯಾಗಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಈ ಸಂದರ್ಭದಲ್ಲಿ ಇಬ್ಬರೂ ರಸ್ತೆಗೆ ಉರುಳಿ ಗಂಬೀರ ಗಾಯಗೊಂಡಿದ್ದಾರೆ.  ಕೂಡಲೇ ಅವರನ್ನು ಭಟ್ಕಳದ ಆಸ್ಪತ್ರೆಗೆ ಸಾಗಿಸಲಾದರು ಹುರೈಸ್ ಮಾರ್ಗಮದ್ಯೆ ಸಾವನ್ನಪಿದ್ದರೆ. ತೀವೃ ಗಾಯಗೊಂಡಿದ್ದ ತನೀರ್ ಅಧಮ್ ಆಸ್ಪತ್ರೆಯಲ್ಲಿ ತಡರಾತ್ರಿ ಸಾವನ್ನಪ್ಪಿದ್ದಾರೆ.

ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.