- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪದವಿನಂಗಡಿ : ಕಾರು ಅಪಘಾತ ಅಪಾಯದಿಂದ ಪಾರಾದ ತುಳು ಅಕಾಡೆಮಿ ಅಧ್ಯಕ್ಷ ಉಮಾನಾಥ ಕೋಟ್ಯಾನ್‌

Umesh Kotian injured in car mishap [1]ಮಂಗಳೂರು : ಸೋಮವಾರ ಮಧ್ಯಾಹ್ನ ಪದವಿನಂಗಡಿ ಬಳಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮಾನಾಥ ಕೋಟ್ಯಾನ್‌  ರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ನಡೆದಿದೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಏರ್ ಕಾರ್ಗೋ ಸೇವೆಯ ಉದ್ಘಾಟನ ಸಮಾರಂಭಕ್ಕೆಅಕಾಡಮಿಯ ಕಾರಿನಲ್ಲಿ  ತೆರಳುತ್ತಿದ್ದ ವೇಳೆ ಪದವಿನಂಗಡಿಯಲ್ಲಿ ನಿಯಂತ್ರಣ ತಪ್ಪಿ ಕಾರು ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದಿದ ಪರಿಣಾಮ ಕಾರು  ಡಿವೈಡರ್‌ನ ಮೇಲೇರಿ, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು , ಕೋಟ್ಯಾನ್‌ ರು  ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.