ಸಾಕ್ಷ್ಯಾಧಾರ ಕೊರತೆ : ತಾಯಿ ಮತ್ತು ಅಪ್ರಾಪ್ತ ಬಾಲಕಿ ಅತ್ಯಾಚಾರದ ಆರೋಪಿ ಬಿಡುಗಡೆ

Tuesday, January 30th, 2024
Ullal-Rape

ಮಂಗಳೂರು : ಉಳ್ಳಾಲದಲ್ಲಿ ಠಾಣೆಯಲ್ಲಿ ತಾಯಿ ಹಾಗೂ ಆಕೆಯ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿಯನ್ನು ಸಾಕ್ಷ್ಯಾಧಾರ ಕೊರತೆಯ ಕಾರಣದಿಂದ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಬಿಡುಗಡೆಗೊಳಿಸಿದೆ. 2021ರಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಬೂಬಕ್ಕರ್ ಸಿದ್ದಿಕ್ ಯಾನೆ ಸಿದ್ದಿಕ್ ಉಳ್ಳಾಲ್ ಎಂಬವವನನ್ನು ಆರೋಪ ಮುಕ್ತಗೊಳಿಸಿ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ನೀಡಿದೆ . ಆರೋಪಿಯು ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಆಕೆಯ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ […]

ಪುತ್ತೂರಿನ ಬಸ್‌ ನಿಲ್ದಾಣದಲ್ಲಿ ಮಹಿಳೆಗೆ ಮದ್ಯ ಮಿಶ್ರಣ ಮಾಡಿ ಕುಡಿಸಿ ಅತ್ಯಾಚಾರ, ಹಲವರು ಭಾಗಿಯಾಗಿರುವ ಶಂಕೆ

Wednesday, November 29th, 2023
puttur-bus-stand

ಪುತ್ತೂರು : ಪುತ್ತೂರಿನ ಬಸ್‌ ನಿಲ್ದಾಣದಲ್ಲಿ ಮಹಿಳೆಗೆ ನೀರಿನ ಬಾಟಲಿಯಲ್ಲಿ ಮದ್ಯ ಮಿಶ್ರಣ ಮಾಡಿ ಕುಡಿಸಿ ಅರೆ ಪ್ರಜ್ಞಾವಸ್ಥೆ ಸ್ಥಿತಿಗೆ ತಲುಪಿದ ನಂತರ ಅತ್ಯಾಚಾರ ಮಾಡಿದ ಘಟನೆಯಲ್ಲಿ ಹಲವರು ಭಾಗಿಯಾಗಿರುವ ಶಂಕೆಯನ್ನು ಬಜರಂಗದಳ ವ್ಯಕ್ತಪಡಿಸಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪುತ್ತೂರಿನ ಭಜರಂಗದಳ ಇದೊಂದು ಜಿಹಾದಿ ಮಾನಸಿಕತೆಯ ಕೃತ್ಯ, ಇದು ಒಬ್ಬರಿಂದ ಅಸಾಧ್ಯ. ಇದು ಒಂದು ಗುಂಪಿನ ಕೆಲಸ ಎಂದು ಸಾಮೂಹಿಕ ಅತ್ಯಾಚಾರದ ಶಂಕೆಯನ್ನು ವ್ಯಕ್ತಪಸಿದ್ದು, ಪೋಲೀಸ್ ಇಲಾಖೆ ಈ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ‌. […]

ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ, ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ

Tuesday, September 12th, 2023
ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ, ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ

ವಿಟ್ಲ : ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಕೆ.ಪಿ. ರವರು ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ ವೆಸಗಿದ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ರಾಜೇಶ್ ರೈ (33 ) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. 2015ರ ಅ.1ರಂದು ತನ್ನದೇ ಊರಿನ 19 ವರ್ಷ ಪ್ರಾಯದ ಎಂಡೋಸಲ್ಫಾನ್ ಪೀಡಿತೆಯನ್ನು ಆರೋಪಿ ರಾಜೇಶ್ ಅತ್ಯಾಚಾರವೆಸಗಿದ್ದನೆಂದು ಆರೋಪಿಸಿ ಪ್ರಕರಣ […]

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿ ಮಾಡಿದ ಆರೋಪಿಗೆ 10 ವರ್ಷ ಜೈಲು

Friday, April 1st, 2022
Pregnant

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪಿಗೆ 10 ವರ್ಷ ಜೈಲು ಮತ್ತು 30,000 ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಸುರತ್ಕಲ್‌ ಸಮೀಪದ ಸಸಿಹಿತ್ಲು ನಿವಾಸಿ ವಾಮನ ಪೂಜಾರಿ (59) ಶಿಕ್ಷೆಗೊಳಗಾದ  ಆರೋಪಿ. 2016ರ ಸೆಪ್ಟಂಬರ್‌ ತಿಂಗಳಲ್ಲಿ  ಹಗಲು ಹೊತ್ತಿನಲ್ಲಿ 16 ವರ್ಷ ಪ್ರಾಯದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ […]

ಪುತ್ತೂರು : ಮಗನಿಂದಲೇ ತಾಯಿಯ ಮೇಲೆ ಎರಡು ಬಾರಿ ಅತ್ಯಾಚಾರ

Friday, January 14th, 2022
rape

ಪುತ್ತೂರು : ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಬುಧವಾರ  ತಡರಾತ್ರಿ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ತಾಯಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 376(2)(N)506ರಂತೆ ಪ್ರಕರಣ ದಾಖಲಾಗಿದೆ.  ಮಗನ ಈ ದುಷ್ಕೃತ್ಯದಿಂದ ತಾಯಿಯೂ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಯಿ ಮತ್ತು ಮಗ ಒಂದೇ ಮನೆಯಲ್ಲಿ ವಾಸಿಸುತ್ತಿದ್ದು, ಜ.12ರಂದು ಎಂದಿನಂತೆ […]

ಬಾಲಕಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ ರೌಡಿಶೀಟರ್

Monday, November 8th, 2021
ಬಾಲಕಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ ರೌಡಿಶೀಟರ್

ಮಂಗಳೂರು : ಬಾಲಕಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾವೆಸಗಿರುವ ಆರೋಪದ ಮೇಲೆ ರೌಡಿಶೀಟರ್ನನ್ನು ನಗರದ ಪಾಂಡೇಶ್ವರ ಮಹಿಳಾ ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೆಯ ರೌಡಿಶೀಟರ್ ನವೀನ್ ಸಿಕ್ವೇರ (34) ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನವೀನ್ ಸಿಕ್ವೇರ ಸಂತ್ರಸ್ತ ಬಾಲಕಿಯ ಸಹೋದರನೊಂದಿಗೆ ಗೆಳೆತನವಿತ್ತು. ಈ ಹಿನ್ನೆಲೆ ಆರೋಪಿ ಬಾಲಕಿಯ ಮನೆಗೆ ಕೆಲವೊಮ್ಮೆ ಬಂದು ಹೋಗುತ್ತಿದ್ದ. ಇತ್ತೀಚೆಗೆ ಆರೋಪಿ ಬಾಲಕಿಯ ಮನೆಗೆ ಯಾರೂ ಇಲ್ಲದ ಸಂದರ್ಭ ಬಂದಿದ್ದು, ಈ ಸಂದರ್ಭ ಜ್ಯೂಸ್‌ನಲ್ಲಿ ಅಮಲು ಪದಾರ್ಥ […]

ತೋಟದ ಕೆಲಸಕ್ಕೆ ಬಂದ ದಲಿತ ಬಾಲಕಿಯ ಅತ್ಯಾಚಾರ, ಬಂಧನಕ್ಕೊಳಗಾದ ಆರೋಪಿ ಆಸ್ಪತ್ರೆಗೆ ದಾಖಲು

Thursday, October 28th, 2021
Kudkadi Narayana Rai

ಪುತ್ತೂರು : ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದ ಆರೋಪಿ  ಕುದ್ಕಾಡಿ ನಾರಾಯಣ ರೈ ಬಂಧನದ ಬೆನ್ನಲ್ಲೇ  ಅನಾರೋಗ್ಯ ಕಾರಣ ನೀಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೋಟದ ಕೆಲಸಕ್ಕೆ ಹೋಗುತ್ತಿದ್ದಾಗ ಅತ್ಯಾಚಾರ ನಡೆಸಿದ್ದಾರೆ ಎಂದು ಬಾಲಕಿ ಆರೋಪಿಸಿರುವ ನಾರಾಯಣ ರೈ ಅವರನ್ನು ಎರಡು ದಿನ ಪೊಲೀಸರ ವಶಕ್ಕೆ ಒಪ್ಪಿಸಿ ಪುತ್ತೂರು ಸೆಷನ್ಸ್ ನ್ಯಾಯಾಲಯ ಆದೇಶಿಸಿತ್ತು. ಆದೇಶದ ಬೆನ್ನಲ್ಲೇ ಅನಾರೋಗ್ಯದ ಹಿನ್ನೆಲೆ ನ್ಯಾಯಾಲಯದ ಅನುಮತಿಯೊಂದಿಗೆ ನಾರಾಯಣ ರೈ ಪುತ್ತೂರು ಸರ್ಕಾರಿ ಆಸ್ಪತ್ರೆಗೆ […]

ದಲಿತ ಬಾಲಕಿಯ ಅತ್ಯಾಚಾರ, ಆರೋಪ ಸಾಬೀತು

Sunday, October 24th, 2021
judgement

ಮಂಗಳೂರು : ಅಪ್ರಾಪ್ತೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿ ಆಕೆ ಮಗುವಿಗೆ  ಜನ್ಮ  ನೀಡಲು  ಕಾರಣನಾದ ವ್ಯಕ್ತಿಯ ಮೇಲಿನ ಅಪರಾಧ ಕೃತ್ಯ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೊಕ್ಸೊ) ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ನಿವಾಸಿ ಪಿ.ಜೆ. ಜೇಕಬ್ ಯಾನೆ ಚಾಕೋಚ‌ ಅತ್ಯಾಚಾರ ಎಸಗಿದ ಅಪರಾಧಿ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದಲಿತ ಬಾಲಕಿ ಶಾಲೆಯಿಂದ ಮನೆಗೆ ಹೋಗುತ್ತಿದ್ದಳು. ಈ ವೇಳೆ, ಆರೋಪಿ ಆಕೆಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದನು. […]

ಅಂಗಡಿಯೊಳಗೆ ಕರೆದು ಬಾಲಕಿ ಅತ್ಯಾಚಾರ, ಮಾಲೀಕನ ಪುತ್ರನ ಬಂಧನ

Sunday, October 10th, 2021
Konaje Rape

ಮಂಗಳೂರು  : ಅಂಗಡಿಗೆ ಖರೀದಿಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ  ಮಾಡಿದ ಆರೋಪದಲ್ಲಿ ಕೊಣಾಜೆ ಪೊಲೀಸರು ಅಂಗಡಿ ಮಾಲೀಕನ ಪುತ್ರನನ್ನು  ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಕೊಣಾಜೆ ಸೂಪರ್ ಸ್ಟೋರ್ಸ್ ಮತ್ತು ಸ್ವೀಟ್ಸ್ ಮಾಲೀಕನ ಪುತ್ರ ಉಸ್ಮಾನ್(35) ಬಂಧಿತ ಆರೋಪಿ. ಭಾನುವಾರ ಸಂಜೆ 13 ವರ್ಷದ ಬಾಲಕಿ ಖರೀದಿಗೆಂದು ಅಂಗಡಿಗೆ ಬಂದಿದ್ದು, ಈ ಸಂದರ್ಭ ಆರೋಪಿ ಆಕೆಯನ್ನು ಪುಸಲಾಯಿಸಿ ಒಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಇದರಿಂದ ಬೆದರಿದ ಬಾಲಕಿ ಅಲ್ಲಿಂದ ಓಡಿ […]

ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ಬೆಂಗಳೂರಿನಲ್ಲಿ ಆರೋಪಿ ವಶಕ್ಕೆ

Thursday, September 23rd, 2021
Rape-Accused

ಮಂಗಳೂರು : ಮೈಸೂರಿನ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಆತನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ಯುವತಿ ತನಗೆ ಮೋಸ ಆಗಿದೆ ಎಂದು ಮಂಗಳೂರಿನ ಮುಡಿಪುವಿನಲ್ಲಿರುವ ಯುವಕನ ಮನೆಗೆ ಬಂದಿದ್ದಾಳೆ. ಈ ವೇಳೆ ಯುವಕನ ಮನೆಯಲ್ಲಿ ಯುವತಿಗೆ ಕಪಾಳಮೋಕ್ಷ ಮಾಡಿ ಮನೆಯಿಂದ ಹೊರ ಕಳುಹಿಸಿದ್ದಾರೆ. ಇದರಿಂದ ಬೇಸರಗೊಂಡ ಯುವತಿ ಬಸ್ ತಂಗುದಾಣದಲ್ಲಿ ಅಳುತ್ತಾ ಕುಳಿತಿದ್ದಳು. ಪೊಲೀಸರಿಗೆ ಮಾಹಿತಿ ಸಿಕ್ಕಿ […]