ತಂದೆ ಹಾಗೂ ಮಗಳ ಮುಂದೆಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
Wednesday, April 17th, 2024ಬಂಟ್ವಾಳ : ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ನದಿಗೆ ಹಾರುವುದನ್ನು ಪುತ್ರಿ ಹಾಗೂ ಮಹಿಳೆಯ ತಂದೆ ತಡೆಯಲು ಯತ್ನಿಸಿದರೂ ಅವರಿಂದ ತಪ್ಪಿಸಿಕೊಂಡು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ ಯಶೋಧಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಘಟನೆಯ ಕುರಿತು ಆಕೆಯ ಪುತ್ರಿ ಸಂಪ್ರೀತಾ ನೀಡಿದ ದೂರಿನಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಶೋಧ ಅವರು ಮೂರ್ಛೆ ರೋಗದಿಂದ […]