Blog Archive

ಸಂತ ಫಿಲೋಮಿನ ಕಾಲೇಜಿನ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Tuesday, October 10th, 2023
veekshith

ಮಂಗಳೂರು : ಪುತ್ತೂರಿನ ಸಂತ ಫಿಲೋಮಿನಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ದಾಖಲಾಗಿದೆ. ಪುತ್ತೂರಿನ ಸಂತ ಫಿಲೋಮಿನಾಸ್ ಕಾಲೇಜಿನ ದ್ವಿತೀಯ ಪಿಯುಸಿ ಓದುತ್ತಿದ್ದ ವೀಕ್ಷಿತ್ (17) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುತ್ತೂರಿನ ಕುರಿಯ ಎಂಬಲ್ಲಿನ ನಿವಾಸಿಯಾಗಿರುವ ವೀಕ್ಷಿತ್ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕದ್ರಿ ಕಂಬಳದಲ್ಲಿ ಇಬ್ಬರು ಸಹೋದರಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ

Tuesday, October 3rd, 2023
sisters-suicide

ಮಂಗಳೂರು : ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ವಾಸವಾಗಿದ್ದ ಲತಾ ಭಂಡಾರಿ (70) ಮತ್ತು ಸುಂದರಿ ಶೆಟ್ಟಿ (80) ಎಂಬ ಸಹೋದರಿಯರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 78ರ ಹರೆಯದ ಜಗನ್ನಾಥ್ ಭಂಡಾರಿ ಮತ್ತವರ ಪತ್ನಿ ಲತಾ ಭಂಡಾರಿ ಹಾಗೂ ಲತಾ ಭಂಡಾರಿಯ ಅಕ್ಕ ಸುಂದರಿ ಶೆಟ್ಟಿ ಎಂಬವರು ಈ ಮನೆಯಲ್ಲಿ ವಾಸಿಸುತ್ತಿದ್ದರು. ಎಂದಿನಂತೆ ಜಗನ್ನಾಥ್ ಭಂಡಾರಿ ಮಂಗಳೂರಿನ ಯಶ್ ರಾಜ್ ಬಾರಿಗೆ ಕೆಲಸಕ್ಕೆ ಹೋದವರು ಸಂಜೆ 4:30ರ ವೇಳೆಗೆ ಮನೆಗೆ […]

ಮಹೇಶ್ ಮೋಟಾರ್ಸ್ ಮಾಲೀಕ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ

Sunday, October 1st, 2023
Mahesh-Shekha

ಮಂಗಳೂರು : ಖಾಸಗಿ ಬಸ್ ಮಾಲಕರೊಬ್ಬರು ತಮ್ಮ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಕ್ಟೋಬರ್ 1 ರ ಭಾನುವಾರ ನಡೆದಿದೆ. ಮಹೇಶ್ ಮೋಟಾರ್ಸ್ ಮಾಲೀಕ ಪ್ರಕಾಶ್ ಶೇಕ (40) ಮೃತ ವ್ಯಕ್ತಿ. ಕದ್ರಿ ಕಂಬಳ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹೇಶ್ ಮೋಟಾರ್ಸ್‌ಗೆ ಸೇರಿದ ಅನೇಕ ಸಿಟಿ ಬಸ್‌ಗಳು ಪ್ರತಿದಿನ ಸಂಚರಿಸುತ್ತಿದ್ದು, ಪ್ರಯಾಣಿಕರಲ್ಲಿ ಜನಪ್ರಿಯವಾಗಿದೆ. ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಯುವ ಜನರು ಬದುಕು ತ್ಯಜಿಸುವ ಮುನ್ನ ಒಂದು ಕ್ಷಣ ಯೋಚಿಸಿ : ಡಾ. ಸುದರ್ಶನ್

Saturday, September 16th, 2023
suicide

ಮಂಗಳೂರು : ಯುವ ಜನರು ವ್ಯಸನದಿಂದ ದೂರ ಉಳಿದು ಸದೃಢ ಮನಸ್ಸನ್ನು ಹೊಂದಿದರೆ ಮಾತ್ರ ಆತ್ಮಹತ್ಯೆಯಂತಹ ಹೇಯ ಕೃತ್ಯಗಳಿಂದ ದೂರ ಉಳಿಯಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುದರ್ಶನ್ ತಿಳಿಸಿದರು. ಅವರು ಸೆ.16ರ ಶನಿವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿ […]

ಕರಾವಳಿ ಕಾಲೇಜಿನ ಲೆಕ್ಚರರ್ ಅವಹೇಳನಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ

Wednesday, March 16th, 2022
Bharath

ಮಂಗಳೂರು : ನಗರದ ಕರಾವಳಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಇದರ  ವಿದ್ಯಾರ್ಥಿ, ಬೆಂಗಳೂರು ಕುಮಾರಸ್ವಾಮಿ ಬಡಾವಣೆಯ ನಿವಾಸಿ ಭರತ್ (20) ಎಂಬಾತ ಅದೇ ಕಾಲೇಜಿನ ಲೆಕ್ಚರರ್ ಅವಹೇಳನಕ್ಕೆ ಬೇಸತ್ತು ಮಂಗಳವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ನಗರದ ಕರಾವಳಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್  ಕಾಲೇಜಿನಲ್ಲಿ ಓದುತ್ತಿದ್ದ ಭರತ್ ತಾನು ವಾಸವಿದ್ದ ಪಿ.ಜಿ.ಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಮುನ್ನ ತಾಯಿಗೆ ಕರೆ ಮಾಡಿದ್ದಾರೆ. ಆ ವೇಳೆ ಕರೆ ಸ್ವೀಕರಿಸಲು ತಾಯಿಗೆ ಸಾಧ್ಯವಾಗಿರಲಿಲ್ಲ ಎಂದು ತಿಳಿದುಬಂದಿದೆ. […]

ಆತ್ಮಹತ್ಯೆ ಮಾಡಿಕೊಂಡ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮೊಮ್ಮಗಳು

Friday, January 28th, 2022
Soundarya

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡು ದುರಂತ ಅಂತ್ಯ ಕಂಡಿದ್ದಾರೆ. ಸೌಂದರ್ಯರನ್ನು ಉಳಿಸಿಕೊಳ್ಳಲು ಕೊನೇ ಕ್ಷಣದಲ್ಲಿ ಕುಟುಂಬಸ್ಥರು ಮತ್ತು ವೈದ್ಯರು ಯತ್ನಿಸಿದ್ದರಾದರೂ ಫಲಿಸಲಿಲ್ಲ ಎಂಬ ವಿಚಾರ ತಿಳಿದುಬಂದಿದೆ. ಬಿಎಸ್ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ವೈದ್ಯೆಯಾಗಿದ್ದರು. 3 ವರ್ಷದ ಹಿಂದಷ್ಟೇ ಅಂದ್ರೆ 2018ರಲ್ಲಿ ಅಬ್ಬಿಗೆರೆಯ ಪದ್ಮ ಮತ್ತು ಶಿವಕುಮಾರ್ ದಂಪತಿ ಪುತ್ರ ಡಾ.ನೀರಜ್ ಎಂಬುವರ ಜತೆ ಸೌಂದರ್ಯ ಮದ್ವೆ ಅದ್ದೂರಿಯಾಗಿ ನೆರವೇರಿತ್ತು. ಡಾ.ನೀರಜ್ 7 ವರ್ಷದಿಂದ ರೇಡಿಯಾಲಜಿಸ್ಟ್ ಆಗಿ ಕೆಲಸ […]

ಕೊರೋನ ಭೀತಿಯಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

Friday, January 21st, 2022
flame

ಕಾರ್ಕಳ :  ಕೊರೋನ ಭೀತಿಯಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರ್ಗಾನ ಗ್ರಾಮದ ಹೊಸ್ಮಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹೊಸ್ಮಾರು ನಿವಾಸಿ ಲಕ್ಷ್ಮೀ(65) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಕೊರೋನ ಪಾಸಿಟಿವ್ ಅಲ್ಲದಿದ್ದರೂ ಕೊರೋನ ಭೀತಿಯಲ್ಲಿ ಪತ್ರ ಬರೆದಿಟ್ಟು, ಮನೆಯ ಹಿಂಬದಿಯಲ್ಲಿ ಮೈಮೇಲೆ ಡಿಸೇಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆನ್‌ಲೈನ್ ಸಾಲದ ಫೋನ್ ಕಿರಿಕಿರಿ – ಕಚೇರಿಯಲ್ಲಿ ಯುವಕ ಆತ್ಮಹತ್ಯೆ

Monday, January 10th, 2022
Sushath

ಮಂಗಳೂರು :  ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ  ಯುವಕನೊಬ್ಬ ಆನ್‌ಲೈನ್ ಸಾಲದ ಫೋನ್ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು  ಕಿನ್ನಿಗೋಳಿ ಪಕ್ಷಿಕೆರೆ ಮೂಲದ ಸುಶಾಂತ್(26) ಎಂದು ಗುರುತಿಸಲಾಗಿದೆ. ಸೋಮವಾರ ತಾನು ಕೆಲಸ ಮಾಡಿಕೊಂಡಿದ್ದ ಸುರತ್ಕಲ್‌ನ ಕುಳಾಯಿಯ ಕಚೇರಿಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸಾವಿನ ಕುರಿತಂತೆ ತುಳುವಿನಲ್ಲಿ ಡೆತ್‌ನೋಟ್ ಬರೆದಿದ್ದಾರೆ. ‘ಸಾರಿ ಮಾತೆರೆಗ್ಲಾ. ಎಂಕ್ ಏರ‌್ನಲಾ ನಂಬಿಕೆ ಒರಿಪಾರೆ ಆಯಿಜಿ. ಕಾಸ್‌ದ ವಿಷಯೊಡ್ ತೊಂದರೆ ಆಂಡ್. ಸಾರಿ, ಆನ್‌ಲೈನ್ ಲೋನ್‌ದಕುಲ್ ಕಾಲ್ ಮಲ್ತೆರ್‌ಡ ಡೆತ್ ಆತೆ ಪನ್ಲೆ. […]

ಎಸ್ಎಸ್ಎಲ್ ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Tuesday, January 4th, 2022
sandeep

ಪುತ್ತೂರು:  ಕೋವಿಡ್ ನಿಯಮಗಳಿಂದ ಬೇಸರಗೊಂಡ  ಎಸ್ ಎಸ್ ಎಲ್ ಸಿ ಓದುತ್ತಿರುವ ವಿದ್ಯಾರ್ಥಿಯೊರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಸಮೀಪದ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ಜ . 4 ರಂದು ನಡೆದಿದೆ. ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿ ಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(15) ಮೃತಪಟ್ಟ ಅಪ್ರಾಪ್ತ ಬಾಲಕ. ಸೋಮವಾರ ರಾತ್ರಿ ತನ್ನ ಕೋಣೆಯಲ್ಲಿ ಮಲಗಿದ್ದ ಈತ ಬೆಳಿಗ್ಗೆ ಎಷ್ಟು ಹೊತ್ತಾದರೂ ಎದ್ದಿರಲಿಲ್ಲ. ಹೀಗಾಗಿ ಮನೆಯವರು ಕೋಣೆಯೊಳಗೆ ಹೋಗಿ ನೋಡಿದಾಗ ಮೃತದೇಹ […]

ಸಾಲದ ಭಯ : ಡೆತ್ ನೋಟ್ ಬರೆದಿಟ್ಟು ಯುವಕ ನೇಣು ಬಿಗಿದು ಆತ್ಮಹತ್ಯೆ

Thursday, December 30th, 2021
Vignesh

ಕುಂದಾಪುರ : ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕುಂದಾಪುರದ ಹೆಮ್ಮಾಡಿಯ ವಿಘ್ನೇಶ್ ಎಂದು ಗುರುತಿಸಲಾಗಿದೆ. ಎಂಎನ್ ಸಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿಘ್ನೇಶ್ ಸ್ನೇಹಿತರೊಂದಿಗೆ ಬಿಸಿನೆಸ್ ಆರಂಭಿಸಲು ಮೊಬೈಲ್ ಆಪ್ ಮೂಲಕ ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡಲಾಗದೇ ಮನೆಯ ಮುಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್ ನೋಟ್ ನಲ್ಲಿ ತಾನು ಸಾಲ ಮಾಡಿಕೊಂಡಿದ್ದಾಗಿ ಬರೆದಿರುವ ವಿಘ್ನೇಷ್ […]