Blog Archive

ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಪ್ರಮೋದ್ ಬೆಂಬಲಿಗರು ಮೌನ ಪ್ರತಿಭಟನೆ

Monday, November 30th, 2020
Udupi Convention

ಉಡುಪಿ : ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮತ್ತು ಕಾಂಗ್ರೆಸ್ ಭವನದಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೈರು ಹಾಜರಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ರವಿವಾರ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಪ್ರಮೋದ್ ಬೆಂಬಲಿಗರು ಮೌನ ಪ್ರತಿಭಟನೆ ನಡೆಸಿದ್ದರು. ಸಮಾವೇಶ ವನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್  ನಾವು ಮೊದಲು ಪಕ್ಷವನ್ನು ಸರಿಪಡಿಸಬೇಕಾಗಿದೆ. ಭಿನ್ನಾಭಿಪ್ರಾಯ ಎಂಬುದು ಎಲ್ಲ ಕಡೆಗಳಲ್ಲಿ ಇರುತ್ತದೆ. ಯಾವುದೇ ಸಮಸ್ಯೆ ಇದ್ದರೆ ನಮ್ಮಲ್ಲಿ ಹೇಳಿಕೊಂಡರೆ ಅದನ್ನು […]

ಆತನಿಗೆ ಮದುವೆಯಾಗಿತ್ತು, ಪ್ರಿಯತಮೆ ಆ ವಿಚಾರ ತಿಳಿದ ತಕ್ಷಣ ಆತ್ಮ ಹತ್ಯೆ ಮಾಡಿಕೊಂಡಳು

Tuesday, October 27th, 2020
Rakshitha

ಉಡುಪಿ : ಅಂಬಾಗಿಲಿನಲ್ಲಿರುವ ಬಾಡಿಗೆ ರೂಮಿ ನಲ್ಲಿ ಅ.24ರಂದು ಸಂಶಯಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಪ್ರಿಯಕರನನ್ನು ಉಡುಪಿ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕುಕ್ಕೆಹಳ್ಳಿಯ ಪ್ರಭಾಕರ ನಾಯಕ್ ಎಂಬವರ ಮಗಳು ರಕ್ಷಿತಾ ನಾಯಕ್(19) ಬಾಡಿಗೆ ರೂಮಿ ನಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟ ಪಟ್ಟಿದ್ದಳು. ರಕ್ಷಿತಾ ಮಂಗಳೂರಿನ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದು, ವಾರಕ್ಕೊಮ್ಮೆ ಮನೆಗೆ ಬಂದು ಹೋಗುತ್ತಿದ್ದರು. ಅ.22ರಂದು ಉಡುಪಿಗೆ ಬಂದಿದ್ದ ಆಕೆ ಮಂಗಳೂರಿಗೆ ತೆರಳಿದ್ದಳು. ಅ.24 ರಂದು ಪ್ರಶಾಂತ್ ಎಂಬಾತ ಕರೆ ಮಾಡಿ, ರಕ್ಷಿತಾಳನ್ನು ಉಡುಪಿ ಖಾಸಗಿ ಅಸ್ಪತ್ರೆಗೆ […]

ಕೊರೋನ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ- 303, ನಾಲ್ಕು ಸಾವು, ಉಡುಪಿ – 319, ಕಾಸರಗೋಡು – 295

Monday, October 12th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 303 ಮಂದಿಗೆ ಕೊರೋನ ಸೋಂಕು ತಗುಲಿದ್ದು4 ಮಂದಿ ಮೃತಪಟ್ಟಿದ್ದಾರೆ. 194 ಮಂದಿ ಗುಣಮುಖ ರಾಗಿದ್ದಾರೆ. ಉಡುಪಿಯಲ್ಲಿ ಮತ್ತೆ 319 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈವರೆಗಿನ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 1,99,759 ಮಂದಿಯ ಪರೀಕ್ಷೆ ಮಾಡಿಸಲಾಗಿದೆ. ಆ ಪೈಕಿ 1,72,927 ಮಂದಿಯ ವರದಿ ನೆಗೆಟಿವ್ ಮತ್ತು 26,832 ಮಂದಿಯ ವರದಿ ಪಾಸಿಟಿವ್ ಬಂದಿದೆ. ಅಲ್ಲದೆ ಒಟ್ಟು 609 ಮಂದಿ ಸಾವಿಗೀಡಾಗಿದ್ದಾರೆ. 21,938 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 4,285 ಸಕ್ರಿಯ ಪ್ರಕರಣಗಳಿವೆ. […]

ಕೊರೋನಾ ಸೋಂಕು : ದಕ್ಷಿಣ ಕನ್ನಡ – 447, ಸಾವು 7 ಮಂದಿ, ಉಡುಪಿ – 207

Wednesday, October 7th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬುಧವಾರ 447 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ, 7 ಮಂದಿ ಸಾವನ್ನಪ್ಪಿದ್ದಾರೆ.  ಉಡುಪಿ ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 207 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ ಜಿಲ್ಲೆಯಲ್ಲಿ 588ಕ್ಕೆ ತಲುಪಿದೆ. ಈ ನಡುವೆ ಗುಣಮುಖರಾದವರ ಸಂಖ್ಯೆ ಉತ್ತಮವಾಗಿದ್ದು, ಬುಧವಾರ ಒಂದೇ ದಿನ 1,214 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ಗುಣಮುಖರಾದವರ ಸಂಖ್ಯೆ 20 ಸಾವಿರಕ್ಕೇರಿದೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ […]

ಕೊರೋನ ಸೋಂಕು ಸೆ. 29 : ದಕ್ಷಿಣ ಕನ್ನಡ -362, ಒಂಬತ್ತು ಸಾವು, ಉಡುಪಿ – 319, ಎರಡು ಸಾವು

Tuesday, September 29th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 362 ಮಂದಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೋನ ಸೋಂಕಿನಿಂದಾಗಿ ಮತ್ತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 232 ಮಂದಿ ಗುಣಮುಖರಾಗಿದ್ದಾರೆ.  ಕೊರೋನದಿಂದ 9 ಮಂದಿ ಮೃತಪಟ್ಟಿದ್ದು, 190 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಸಿಬ್ಬಂದಿಯು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಈಗಾಗಲೇ ಒಂದು ವಾರ ಪೂರೈಸಿದೆ. ಇದರಿಂದ ಮಂಗಳವಾರವೂ ದ.ಕ. ಜಿಲ್ಲೆಯ ಕೋವಿಡ್ ಬುಲೆಟಿನ್ ಪ್ರಕಟವಾಗಿಲ್ಲ. ಉಡುಪಿ ಜಿಲ್ಲೆಯಲ್ಲಿ […]

ಉಡುಪಿಯಲ್ಲಿ ಬಸ್ ಸಂಚಾರವನ್ನು ತಡೆಹಿಡಿದ ಪ್ರತಿಭಟನಾಕಾರರು, ಪೊಲೀಸರಿಂದ ಬಂಧನ

Monday, September 28th, 2020
udupi bundh

ಉಡುಪಿ : ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ವಿವಿಧ ಸಂಘಟನೆಗಳು ರಸ್ತೆ ತಡೆ ನಡೆಸಿ ಬಸ್ ಸಂಚಾರವನ್ನು ತಡೆಹಿಡಿದರು.  ಈ ಸಂದರ್ಭ ಅಲ್ಲಿಗೆ ಬಂದ ಪೊಲೀಸರು ಪ್ರತಿಭಟನಾಕಾರರನ್ನುಬಂಧಿಸಿದ್ದಾರೆ. ಬಂದ್ ಬೆಂಬಲ ಕೊಟ್ಟ ವಿವಿಧ ಸಂಘಟನೆಯವರು ಬಂದ್ ಕರೆ ಕೊಟ್ಟರೂ ಸರ್ವಿಸ್ ಮತ್ತು ಸಿಟಿ ಬಸ್ಸುಗಳು ಬೆಳಗ್ಗೆ ನಿಲ್ದಾಣಕ್ಕೆ ಆಗಮಿಸಿರುವುದರಿಂದ ಬಸ್ ಸಂಚಾರ ನಡೆಸದಂತೆ ಪ್ರತಿಭಟನಾಕಾರರು ಮನವಿ ಮಾಡಿದರೆನ್ನಲಾಗಿದೆ. ಬಸ್ ಸಂಚಾರ ಮುಂದುವರಿಸುವುದಾಗಿ ಪಟ್ಟು ಹಿಡಿದ ಚಾಲಕರ ಹಾಗೂ ನಿರ್ವಾಹಕರ ಧೋರಣೆ ವಿರೋಧಿಸಿ ಪ್ರತಿಭಟನಾಕಾರರು […]

ಕೊರೋನಾ ಸೋಂಕು : ದಕ್ಷಿಣ ಕನ್ನಡ – 380, ಉಡುಪಿ – 293, ಕಾಸರಗೋಡು – 208

Sunday, September 20th, 2020
Corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ರವಿವಾರದಂದು 380 ಏರಿಕೆಯಾಗಿದೆ . ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 20 ಸಾವಿರ ದಾಟಿದೆ. ರವಿವಾರದಂದು ದ.ಕ. ಜಿಲ್ಲೆಯಲ್ಲಿ 127 ಮಂದಿಯಲ್ಲಿ ಪ್ರಾಥಮಿಕ  ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 139 ಮಂದಿಯಲ್ಲಿ ಐಎಲ್ ಐ ಕೇಸ್ ದೃಢಪಟ್ಟಿದೆ. 8 ಮಂದಿಯಲ್ಲಿ ಸಾರಿ ಕೇಸ್ ಪತ್ತೆಯಾಗಿದ್ದು, 106 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ರವಿವಾರ ಉಡುಪಿ ಜಿಲ್ಲೆಯಲ್ಲಿ ಒಟ್ಟು 293 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ […]

ಉಕ್ಕಿ ಹರಿದ ಸ್ವರ್ಣ ನದಿ, ಉಡುಪಿಯ ಹಲವು ಪ್ರದೇಶಗಳು ಜಲಾವೃತ

Sunday, September 20th, 2020
Udupi Rain

ಉಡುಪಿ: ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಸ್ವರ್ಣ ನದಿಯು ಉಕ್ಕಿ ಹರಿಯುತ್ತಿದ್ದು, ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿ ಹಾಗೂ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ಶನಿವಾರ ಸಂಜೆ ಆರಂಭವಾದ ಮಳೆ ಬಿರುಸುಗೊಂಡಿತ್ತು. ರಾತ್ರಿ ಮೂರು ಘಂಟೆ ಸುಮಾರಿಗೆ ಸ್ವರ್ಣ ನದಿಯಲ್ಲಿ ಪ್ರವಾಹ ಅಧಿಕವಾಗಿದ್ದು, ಇಂದು ಬೆಳಿಗ್ಗೆಯೂ ಮುಂದುವರಿದ ಕಾರಣ ಅನಿರೀಕ್ಷಿತ ಪರಿಸ್ಥಿತಿ ಸಂಭವಿಸಿದೆ. ಉಪ್ಪೂರಿನ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ತಮ್ಮನ್ನು ರಕ್ಷಿಸಲು ದೋಣಿ ಕಳುಹಿಸುವಂತೆ ಕೇಳಿಕೊಂಡರೂ ಯಾರೂ ಬಂದಿಲ್ಲ ಮನೆಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. […]

ಕೊರೊನಾ ಸೋಂಕು : ದಕ್ಷಿಣ ಕನ್ನಡ – 456, ಸಾವು 1, ಉಡುಪಿ ನಾಲ್ಕು ದಿನಗಳಲ್ಲಿ 845

Friday, September 18th, 2020
corona

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾ ಸೋಂಕಿತರ ಸಂಖ್ಯೆ 456 ಕ್ಕೆ ಏರಿಕೆಯಾಗಿದೆ. 11 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಕೊರೊನಾದಿಂದ ಸಾವನ್ನಪ್ಪಿದ 11 ಮಂದಿಯಲ್ಲಿ 6 ಮಂದಿ ಮಂಗಳೂರು ತಾಲೂಕಿನವರಾದರೆ, ತಲಾ ಒಬ್ಬರು ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಮತ್ತು ಇಬ್ಬರು ಹೊರಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 472 ಕ್ಕೆ ಏರಿಕೆಯಾಗಿದೆ. 456 ಮಂದಿ ಕೊರೊನಾ ಸೋಂಕಿತರಲ್ಲಿ 242 ಮಂದಿ ಮಂಗಳೂರು ತಾಲೂಕು, 86 ಬಂಟ್ವಾಳ ತಾಲೂಕು, 27 ಪುತ್ತೂರು ತಾಲೂಕು, 26 ಸುಳ್ಯ ತಾಲೂಕು, 40 ಬೆಳ್ತಂಗಡಿ ತಾಲೂಕು […]

ಉಡುಪಿಯಲ್ಲಿ ಅರ್ಧ ಕುಸಿದ ರಾಯಲ್ ಮಹಲ್‌ ಕಟ್ಟಡ, ಓರ್ವ ಮಹಿಳೆ ಗಾಯ

Friday, September 18th, 2020
Royal Mahal

ಉಡುಪಿ:  ಚಿತ್ತರಂಜನ್ ಸರ್ಕಲ್ ನಲ್ಲಿರುವ ಹಳೆಯ ಬಹು ಮಹಡಿ ಕಟ್ಟಡದ ಭಾಗವೊಂದು ಧರೆಗುರುಳಿ ಬಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಮಹಿಳೆಯೋರ್ವರು ಗಾಯಗೊಂಡಿದ್ದಾರೆ. ಚಿತ್ತರಂಜನ್ ಸರ್ಕಲ್ ನಲ್ಲಿರುವ ರಾಯಲ್ ಮಹಲ್‌ ಕಟ್ಟಡವಾಗಿದ್ದು, ಇದು ಉಡುಪಿ ನಗರದ ಹಳೇಯ ಕಟ್ಟಡಗಳಲ್ಲಿ ಒಂದಾಗಿದೆ. ಈ ಹಳೆಯ ಕಟ್ಟಡದಲ್ಲಿ ಹೋಟೆಲ್, ಬೇಕರಿ, ಭಾರತೀಯ ಜನೌಷಧಿ ಕೇಂದ್ರ, ಚಿಪ್ಸ್ ಅಂಗಡಿ ಸೇರಿದಂತೆ ಐದಾರು ಅಂಗಡಿಗಳಿದ್ದವು. ಕಟ್ಟಡದ ಒಂದು ಪಾರ್ಶ್ವ ಕುಸಿಯುತ್ತಿದ್ದಂತೆ ಜನರು ಕಟ್ಟಡದಿಂದ ದೂರ ಓಡಿದ್ದಾರೆ. ಈ ವೇಳೆ ಓರ್ವ ಮಹಿಳೆ […]