ಮುರುಡೇಶ್ವರ ಶಿವನ ವಿಗ್ರಹ ದ ಶಿರವನ್ನು ಕತ್ತರಿಸಿದ ಫೋಟೊ ವೈರಲ್, ದೇವಸ್ಥಾನದ ಭದ್ರತೆ ಇನ್ನಷ್ಟು ಬಿಗಿ

Tuesday, November 23rd, 2021
Murudeshwara-Shiva-Statue

ಭಟ್ಕಳ  : ಅತ್ಯಂತ ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ ದ ಬೃಹತ್ ಈಶ್ವರ ಪ್ರತಿಮೆ ಚಿತ್ರ  ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿ ಸಂಚು ಎಂದು ಹೇಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಶಿವನ ವಿಗ್ರಹ ದ ಶಿರವನ್ನು ಕತ್ತರಿಸಿದಂತೆ ಎಡಿಟ್ ಮಾಡಲಾದ ಫೋಟೊವನ್ನು ಉಗ್ರ ಸಂಘಟನೆ ‘ಐಸಿಸ್’(ISIS)ನ ಪತ್ರಿಕೆಯಲ್ಲಿ ಪ್ರಕಟಿಸಲಾಗಿದ್ದು, ಈ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ […]

ಮೊಬೈಲ್ ನಲ್ಲಿ ಮಾತನಾಡ ಬೇಡ ಎಂದಿದ್ದಕ್ಕೆ ಪತ್ನಿಯಿಂದ ಪತಿಯನ್ನುಕೊಲ್ಲಲು 30 ಸಾವಿರಕ್ಕೆ ಸುಪಾರಿ

Sunday, June 13th, 2021
saraswati

ಕಾರವಾರ :  ಮೊಬೈಲ್ ನಲ್ಲಿ ಮಾತನಾಡ ಬೇಡ ಎಂದು ಪತ್ನಿಯಲ್ಲಿ ಹೇಳಿದಕ್ಕೆ  ಪತಿಯನ್ನೇ ಕೊಲ್ಲಲು 30 ಸಾವಿರ ಸುಪಾರಿ ನೀಡಿ ಹತ್ಯೆಗೆ   ಯತ್ನ ನಡೆಸಿದ ಘಟನೆ  ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ. ದಾಂಡೇಲಿಯ ಅಂಕುಷ ರಾಮಾ ಪತ್ನಿ ಸುತಾರ ಸರಸ್ವತಿಗೆ ಮೊಬೈಲ್ ನಲ್ಲಿ ಮಾತನಾದ ಬೇಡ ಎಂದು ಬುದ್ದಿವಾದ ಹೇಳಿದ್ದಾನೆ.  ಆಕೆ ಸಮಯ ಕಳೆಯಲು ನೆಂಟರು ಹಾಗೂ ಪರಿಚಯಸ್ಥರೊಂದಿಗೆ ಮೊಬೈಲ್ ನಲ್ಲಿ ಕಾಲಹರಣ ಮಾಡುತ್ತಿದ್ದಳು. ಅಂಕುಷ ರಾಮಾ ಆರು ವರ್ಷದ ಹಿಂದೆ ಸುತಾರ ಸರಸ್ವತಿಯನ್ನು ಮದುವೆಯಾಗಿದ್ದು, […]

ದ.ಕ. ಜಿಲ್ಲೆಯಲ್ಲಿ4 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆ

Saturday, June 5th, 2021
black fungus

ಮಂಗಳೂರು : ಕೊರೋನಾ ಸೋಂಕು ಸಕ್ರಿಯವಾಗಿರುವಾಗಲೇ ಮತ್ತೊಂದು ಅಪಾಯಕಾರಿ ರೋಗ ಬ್ಲ್ಯಾಕ್ ಫಂಗಸ್ ಜನರನ್ನು ಕಾಡುತ್ತಿದೆ.  ಗುರುವಾರ ದ.ಕ. ಜಿಲ್ಲೆಯಲ್ಲಿ4 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ. ದ.ಕ. ಜಿಲ್ಲೆಯ ಒಬ್ಬರು, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆ ಹಾಗೂ ಕೇರಳದ ತಲಾ ಒಬ್ಬರಿಗೆ ಈ ರೋಗ ತಗುಲಿದೆ. ಪ್ರಸ್ತುತ ದ.ಕ.ಜಿಲ್ಲೆಯಲ್ಲಿ ಸದ್ಯ 43 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಇದೆ. ಇದರಲ್ಲಿ 9 ದ.ಕ.ಜಿಲ್ಲೆಗೆ ಮತ್ತು 34 ಪ್ರಕರಣಗಳು ಹೊರಜಿಲ್ಲೆಗೆ ಸಂಬಂಧಿಸಿ ದ್ದಾಗಿದೆ. ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. […]

ಕರಾವಳಿಯಲ್ಲಿ ಮೊದಲ ಬಾರಿಗೆ ಸಿಕ್ಕಿದ ಬೆಲೆ ಬಾಳುವ ಗ್ರೇ ಆ್ಯಂಬರ್

Monday, April 26th, 2021
Grey Amber

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಕಡಲ ತೀರದಲ್ಲಿ ಸಿಕ್ಕಿದ ಗಟ್ಟಿಯಾದ ವಸ್ತುವಿನ ತುಂಡು ಸಮುದ್ರ ಜೀವಶಾಸ್ತ್ರ ತಜ್ಞರನ್ನು ಪರಿಶೀಲಿಸಿದ್ದು.  ಅದನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಇದು  ವೀರ್ಯ ತಿಮಿಂಗಿಲ ವಾಂತಿ ಮಾಡಿದ ವಸ್ತು ಎಂದು ಭಾವಿಸಲಾಗಿದೆ. ಈ ವಸ್ತುವನ್ನು ಬೂದು ಬಣ್ಣದ ಶಿಲಾರಾಳ ಪಳೆಯುಳಿಕೆ, ಗ್ರೇ ಆ್ಯಂಬರ್ (Grey Amber) ಎಂದು ಹೇಳಲಾಗುತ್ತಿದೆ. ಮುರುಡೇಶ್ವರ ಕಡಲ ತೀರದಲ್ಲಿ ಮೀನುಗಾರರೊಬ್ಬರಿಗೆ ತೀವ್ರ ವಾಸನೆ ಬಂದು ಹೋಗಿ ನೋಡಿದಾಗ ಈ ವಸ್ತು ಸಿಕ್ಕಿತು. ಇದೊಂದು ಅಪರೂಪದ ವಸ್ತುವೆಂದು ಅವರಿಗೆ […]

ಹೆಂಡತಿಯೊಂದಿಗೆ ಕಾಲ ಕಳೆಯದ ಗಂಡ, ನೊಂದು ಆತ್ಮಹತ್ಯೆ

Wednesday, January 27th, 2021
Pallavi

ಕಾರವಾರ: ಗೆಳೆಯರೊಂದಿಗೆ ಕಾಲ ಕಳೆಯುತ್ತಿದ್ದ ಗಂಡನಿಂದ ಬೇಸತ್ತ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಇಂದಿರಾ ನಗರದಲ್ಲಿ ನಡೆದಿದೆ. ಮೂಲತಃ ಶಿರಸಿ ತಾಲೂಕಿನ ಗಿಡಮಾವಿನಕಟ್ಟೆಯ ನಿವಾಸಿಯಾಗಿದ್ದ ಪಲ್ಲವಿ ವಿಜಯ ದೇವಾಡಿಗ (27) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಎರಡು ವರ್ಷಗಳಿಂದ ಪತಿಯೊಂದಿಗೆ ಇಂದಿರಾ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಪತಿ ತನ್ನ ಜೊತೆ ಹೆಚ್ಚಿನ ಸಮಯ ಕಳೆಯುವುದಿಲ್ಲ ಎಂದು ಕೊರಗುತ್ತಿದ್ದರು. ಇಂದು ಪತಿ ಗೆಳೆಯರೊಂದಿಗೆ ಕ್ರಿಕೆಟ್ ನೋಡಲು ತೆರಳಿದ್ದರಿಂದ ಪಲ್ಲವಿ ಸಿಟ್ಟಾಗಿದ್ದರು. […]

ಮುಖ್ಯಮಂತ್ರಿಯಾಗ ಬೇಕು ಎಂದು ಗೆಳೆಯರಲ್ಲಿ ಹೇಳಿಕೊಂಡಿದ್ದ ಯುವಕ, ಆತ್ಮಹತ್ಯೆಗೆ ಶರಣು

Thursday, October 8th, 2020
Youth Hangs

ಬೆಂಗಳೂರು : ಮುಖ್ಯಮಂತ್ರಿಯಾಗ ಬೇಕು ಎಂದು ಗೆಳೆಯರಲ್ಲಿ ಹೇಳಿಕೊಂಡಿದ್ದ ಯುವಕನೊರ್ವ ಕನಸು ಈಡೇರುವುದಿಲ್ಲ ಎಂದು ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಯನಗರದ 4ನೇ ಹಂತದಲ್ಲಿ ಬುಧವಾರ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಶಾಂಕ್‌ (22) ಮೃತ ದುರ್ದೈವಿ. ತನ್ನ ಬಾಡಿಗೆ ಕೊಠಡಿಯಲ್ಲಿ ಬೆಳಗ್ಗೆ ಶಶಾಂಕ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನ ಬಳಿಕ ಆತನ ಸ್ನೇಹಿತರು ಕೊಠಡಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೂವರೆ ತಿಂಗಳ ಹಿಂದೆ ತನ್ನೂರಿನಿಂದ ಉದ್ಯೋಗ […]

ಸ್ಕೂಟರ್ ಮತ್ತು ಟ್ಯಾಂಕರ್ ಡಿಕ್ಕಿ- ತಂದೆ ಮಗಳು ಸಾವು

Tuesday, September 29th, 2020
Karawar Accident

ಕಾರವಾರ: ಸ್ಕೂಟರ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಮಂಗಳವಾರ  ನಡೆದಿದೆ. ಯಲ್ಲಾಪುರದ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ನಡೆದಿದೆ. ವಿನೋದ್ ಕಿಂದಳಕರ್ (56) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (12) ಮೃತ ದುರ್ದೈವಿಗಳು. ವಿನೋದ್ ಕಿಂದಳಕರ್ ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಗಳನ್ನು ಯಲ್ಲಾಪುರದಿಂದ ತಮ್ಮ […]

ತಾಯಿಯನ್ನು ನೋಡಿಕೊಳ್ಳಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Friday, July 17th, 2020
Raviteja

ಶಿರಸಿ  : ತಾಯಿ ಮತ್ತು ಮಗ ಇಬ್ಬರೇ ಇದ್ದು ಮನೆಯಲ್ಲಿನ ಕಷ್ಟ ನೋಡಲಾಗದೇ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ‌ನೀರ್ನಳ್ಳಿಯಲ್ಲಿ‌ ನಡೆದಿದೆ. ನಿರ್ನಳ್ಳಿಯ ರವಿತೇಜ ಗಣಪತಿ ಭಟ್ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮನೆಯಲ್ಲಿ ತಾಯಿ ಮತ್ತು ಮಗ ಇಬ್ಬರೇ ಇದ್ದು ಮನೆಯ ನಿರ್ವಹಣೆ ಕಷ್ಟ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮೊದಲು ತಿಮಿಟ್ ಸೇವಿಸಿ ನಂತರ ‌ನೇಣು‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ […]

ತುಳುನಾಡಿನ ದೈವ ದೇವರ ನಿಂದನೆ, ಉತ್ತರ ಕನ್ನಡದ ವ್ಯಕ್ತಿಯ ಬಂಧನ

Tuesday, October 29th, 2019
Mudduraj

ಮಂಗಳೂರು: ತುಳುನಾಡಿನ ದೈವ ದೇವರು ಮತ್ತು ಇತರ ಪವಿತ್ರ ಸಂಪ್ರದಾಯಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಸೈಬರ್ ಅಪರಾಧ ಪೊಲೀಸರು ಭಾನುವಾರ ಉತ್ತರ ಕನ್ನಡದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಿದ್ದಾಪುರ ನಿವಾಸಿ ದೇಸಾಯಿ ಗೌಡರ ಮಗ ಮುದುರಾಜ್ ಕನ್ನಡಿಗ  ಎಂದು ಗುರುತಿಸಲಾಗಿದೆ. ಈ ಆರೋಪದ ವಿರುದ್ಧ ಅರ್ನಾಲ್ಡ್ ತುಲುವೆ (29)  ದೂರು ದಾಖಲಿಸಿದ್ದು, ‘ಟ್ರೋಲ್ ಕನ್ನಡಿಗ’, ಫೇಸ್‌ಬುಕ್‌ ಪುಟದ ನಿರ್ವಾಹಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಲಾಗಿದೆ.  ದೈವರದೇನ ಬಗ್ಗೆ ಅಗೌರವದ ಮಾತುಗಳನ್ನು ರವಾನಿಸಿ, ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ದೂರಲಾಗಿದೆ. […]

ರಾಜ್ಯದಲ್ಲಿ ಭಾರಿ ಮಳೆ…13 ವರ್ಷಗಳ ಹಿಂದಿನ ದಾಖಲೆ ಮುರಿದ ವರುಣ

Monday, June 18th, 2018
heavy-rain

ಬೆಂಗಳೂರು: ರಾಜ್ಯದೆಲ್ಲೆಡೆ ಮುಂಗಾರು ಚುರುಕಾಗಿದ್ದು, ಕಳೆದ ಹತ್ತು ದಿನದಲ್ಲಿ ಸುರಿದ ಮಳೆ ಕಳೆದ 13 ವರ್ಷಗಳಲ್ಲೇ ಇದು ಅತ್ಯಧಿಕ ಪ್ರಮಾಣದ್ದಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್‌ಡಿಎಂಸಿ) ಮಾಹಿತಿ ನೀಡಿದೆ. ಕೆಎಸ್ಎನ್‌ಡಿಎಂಸಿ ಪ್ರಕಟಿಸಿದ ಮುಂಗಾರು ಅವಧಿಯ ಮೊದಲ 10 ದಿನಗಳ ಮಳೆಯ ವರದಿಯಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ. ವರದಿ ಪ್ರಕಾರ ಜೂ.1ರಿಂದ ಜೂ.10ರವರೆಗೆ ವಾಡಿಕೆಯಂತೆ ರಾಜ್ಯಾದ್ಯಂತ ಸರಾಸರಿ 51 ಮಿ.ಮೀ. ಮಳೆ ದಾಖಲಾಗಬೇಕು. ಆದರೆ ಈ ವರ್ಷ 92 ಮಿ.ಮೀ. ದಾಖಲಾಗಿದ್ದು, 2004ರ ನಂತರದಲ್ಲಿ […]