ಗಾಂಜಾ ಸಾಗಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ

Monday, December 13th, 2021
Ganja students

ಮಂಗಳೂರು : ತೊಕ್ಕೊಟ್ಟು ಸಮೀಪದ ಬಗಂಬಿಲ ಎಂಬಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಉಳ್ಳಾಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ಕೇರಳ ತ್ರಿಶ್ಶೂರ್‌ನ ಆದರ್ಶ್ ಜ್ಯೋತಿ (22) ಮತ್ತು ಕೊಟ್ಟಾಯಂನ ಯೋಯಲ್ ಜೋಯ್ಸ್ (22) ಎಂದು ಗುರುತಿಸಲಾಗಿದೆ. ಆದರ್ಶ್ ಬಿಡಿಎಸ್ ಮತ್ತು ಯೋಯಲ್ ನರ್ಸಿಂಗ್ ವಿದ್ಯಾರ್ಥಿಗಳು ಎಂದು ಪ್ರಕರಣ ದಾಖಲಿಸಿರುವ ಪೊಲೀಸರು ತಿಳಿಸಿದ್ದಾರೆ. ಸೋಮವಾರ ಬಗಂಬಿಲ ಪರಿಸರದಲ್ಲಿ ಇವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದರು. ಈ ವೇಳೆ ಸುಮಾರು 220 ಗ್ರಾಂ ತೂಕದ ಗಾಂಜಾ ಇವರ […]

ಉಳ್ಳಾಲ : ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿದ ದುಷ್ಕರ್ಮಿಗಳು

Sunday, August 29th, 2021
buffalo

ಉಳ್ಳಾಲ : ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿರುವ ಅಮಾನವೀಯ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ ಬಲ್ಯ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಹಿಂದೂ ಸಂಘಟನೆ ಕಾರ್ಯಕರ್ತರು ತೋಟದ ಮಾಲೀಕನೇ ಕೋಣವನ್ನು ಬೇರೆಯವರ ಮೂಲಕ ಹತ್ಯೆ ನಡೆಸಿರುವುದಾಗಿ ಆರೋಪಿಸಿದ್ದಾರೆ. ಬಲ್ಯ ಎಂಬಲ್ಲಿರುವ ಜಯರಾಮ ಶೆಟ್ಟಿ ಎಂಬವರ ತೋಟದ ಬಳಿ ಕೃತ್ಯ ನಡೆದಿದೆ. ಕೋಣದ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಕಡಿದ ಸ್ಥಿತಿಯಲ್ಲಿದ್ದು, ರಕ್ತಸ್ರಾವ ಆಗಿ ಕೋಣ ಸತ್ತು ಬಿದ್ದಿದೆ. ಈ ಬಗ್ಗೆ ಸ್ಥಳೀಯರು […]

ಉಳ್ಳಾಲದ ಕೊಡಿ ಎಂಬಲ್ಲಿ ಮೀನುಗಾರಿಕಾ ದೋಣಿ ಅಫಘಾತ, 10 ಮಂದಿ ರಕ್ಷಣೆ

Sunday, May 23rd, 2021
Fishing Boat

ಮಂಗಳೂರು : ಉಳ್ಳಾಲ ಕೋಟೆಪುರ ದ ವ್ಯಕ್ತಿಯೊಬ್ಬರಿಗೆ ಸೇರಿದ ಮೀನುಗಾರಿಕಾ ದೋಣಿಯೊಂದು  ಉಳ್ಳಾಲದ  ಕೊಡಿ ಎಂಬಲ್ಲಿ ಅಪಘಾತಕ್ಕೀಡಾಗಿದ್ದು, ದೋಣಿಯಲ್ಲಿದ್ದ 10 ಮಂದಿಯನ್ನು ರಕ್ಷಿಸಲಾಗಿದೆ. ಬೊಟ್ ಶನಿವಾರ ತಡರಾತ್ರಿ ಮಂಗಳೂರಿನ ಧಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ಹೊರಟಿದ್ದು ಮೇ 23ರ ರವಿವಾರ ಮುಂಜಾನೆ ಇಲ್ಲಿನ ಕೋಡಿಯಲ್ಲಿ ಮೀನುಗಾರಿಕಾ ದೋಣಿ ಅಪಘಾತಕ್ಕೀಡಾಗಿದೆ. ಉಳ್ಳಾಲ ಮೂಲದ ಅಶ್ರಫ್‌‌ ಅವರಿಗೆ ಸೇರಿದ್ದ ಅಜಾನ್‌ ಎಂಬ ಮೀನುಗಾರಿಕಾ ದೋಣಿ ರವಿವಾರ ಮುಂಜಾನೆ 1.30ರ ವೇಳೆಗೆ ದಡದಿಂದ ಹೊರಟಿತ್ತು. ಕನ್ಯಾಕುಮಾರಿಯ ಐವರು ಮೀನುಗಾರರು ಮದ್ಯದ ಅಮಲಿನಲ್ಲಿದ್ದರು ಎಂದು ತಿಳಿದುಬಂದಿದೆ. ದೋಣಿ ನಡೆಸಲು […]

ಹಿಂದೂ ದೇವರುಗಳ ನಿಂದಿಸಿದ ತೊಕ್ಕೊಟ್ಟು ನಿವಾಸಿ, ಉದ್ಯಮಿಯ ಬಂಧನ

Saturday, May 15th, 2021
Iqbal

ಉಳ್ಳಾಲ : ರಾಮ ಕೃಷ್ಣ, ಬಸವಣ್ಣ ರಾಮ ದೇವರು ಅಲ್ಲ ಅವರೆಲ್ಲ ಮಾನವರಂತೆ. ನಾವು ಯಾತಕ್ಕೆ ಹಿಂದೂ ಹಬ್ಬಗಳಿಗೆ ಶುಭ ಕೋರಬೇಕು ಎಂದೆಲ್ಲಾ ಹೇಳಿ  ಹಿಂದೂ ದೇವರುಗಳ ನಿಂದಿಸಿದ ತೊಕ್ಕೊಟ್ಟು ನಿವಾಸಿ, ಉದ್ಯಮಿಯನ್ನು ಉಳ್ಳಾಲ ಪೊಲೀಸರು ಮೇ. 15 ರ ಶನಿವಾರ ಬಂಧಿಸಿದ್ದಾರೆ. ಬಂಧಿತನನ್ನು ತೊಕ್ಕೊಟ್ಟು ಸ್ಮಾರ್ಟ್ ಸಿಟಿ ವಸತಿ ಸಂಕೀರ್ಣದಲ್ಲಿ ಇರುವ ಅಂಗಡಿ ಹೊಂದಿರುವ ಉದ್ಯಮಿ ಸ್ವಾಲಿಝ್ ಇಕ್ಬಾಲ್ (45) ಎಂದು ಗುರುತಿಸಲಾಗಿದೆ. ಆರೋಪಿ ಹಿಂದೂ ದೇವರುಗಳ ವಿರುದ್ಧ ನಿಂದನೆಯ ಮಾತುಗಳನ್ನು ಆಡಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ […]

ತೊಕ್ಕೊಟ್ಟು ಕೊರಗಜ್ಜನ ಕೋಲದಲ್ಲಿ ಕಲ್ಲೆಸೆದು ಗಲಭೆ ಸೃಷ್ಟಿಸಲು ಯತ್ನ, ಓರ್ವನ ಬಂಧನ

Tuesday, April 13th, 2021
Hafiz

ಮಂಗಳೂರು  : ತೊಕ್ಕೊಟ್ಟು ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದ ಪಕ್ಕದ ಕಟ್ಟಡದ ಮೇಲಿಂದ ಕಲ್ಲೆಸೆದು ಗಲಭೆ ಸೃಷ್ಟಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಪೊಲೀಸರೊಂದಿಗೆ ಸ್ಥಳೀಯರು ಸೇರಿ ಆರೋಪಿ ಮಹಮ್ಮದ್ ಹಫೀಝ್  ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಡಿ ನಿವಾಸಿ ಮಹಮ್ಮದ್ ಹಫೀಝ್ ತೊಕ್ಕೊಟ್ಟು ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದು ಅಲ್ಲೇ ಇರುವ ವಾಣಿಜ್ಯ ಸಂಕೀರ್ಣ ದ ಮೇಲಿನಿಂದ ಕಲ್ಲೆಸೆದಿದ್ದು ಈ ಸಂದರ್ಭದಲ್ಲಿ‌ಪೊಲೀಸರು ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರು ಆರೋಪಿಯನ್ಬು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. […]

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಎಸ್‌ಡಿಪಿಐ ಮುಖಂಡನ ಬಂಧನ

Sunday, January 24th, 2021
sdpi

ಉಳ್ಳಾಲ : ಅಪ್ರಾಪ್ತ ಬಾಲಕಿಯ ಮೇಲೆ  ಅತ್ಯಾಚಾರ ಯತ್ನ ನಡೆಸಿದ್ದಕ್ಕಾಗಿ ಉಳ್ಳಾಲ ವಲಯದ  ಎಸ್‌ಡಿಪಿಐ ಅಧ್ಯಕ್ಷ ನೊಬ್ಬನನ್ನು ಪೋಕ್ಸೊ ಕಾಯಿದೆಯಡಿ ಉಳ್ಳಾಲ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪ್ರಕರಣ ದಾಖಲಾಗಿ ತಲೆಮರೆಸಿಕೊಂಡಿದ್ದ ಎಸ್‌ಡಿಪಿಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಸಿದ್ದೀಖ್ ಉಳ್ಳಾಲ್ (43)  ಬಂಧಿತ ಆರೋಪಿ. ಸಹಾಯದ ನೆಪದಲ್ಲಿ ಮಹಿಳೆಯ  ಮನೆಗೆ ಭೇಟಿ ನೀಡುತ್ತಿದ್ದ ಸಿದ್ದೀಖ್ 15ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದ. ಮಹಿಳೆಯ ಪತಿ ತೊರೆದಿದ್ದು, ಆಕೆಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಈ ಬಗ್ಗೆ ಮಹಿಳೆ ಜ.19 ರಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ […]

ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿ ವಿಫಲವಾದ ಮಹಿಳೆ, ಸಮುದ್ರಕ್ಕೆ ಹಾರಿ ಆತ್ಮಹತ್ಯೆ

Friday, October 30th, 2020
Usha

ಮಂಗಳೂರು : ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರು ಶುಕ್ರವಾರ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಚ್ಚಿಲದಲ್ಲಿ‌ ನಡೆದಿದೆ. ಇಲ್ಲಿನ ಸಂಕೊಳಿಗೆ ನಿವಾಸಿಯಾಗಿರುವ ಉಷಾ (60) ಎಂಬಾಕೆಯ ಮೃತದೇಹ ಉಚ್ಚಿಲ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮಾನಸಿಕವಾಗಿ ನೊಂದಿದ್ದ ಮಹಿಳೆ ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ರಮವಾಗಿ ಕರುಗಳನ್ನು ಸಾಗಾಟ : ಆರೋಪಿಗಳಿಬ್ಬರು ಪರಾರಿ

Thursday, September 24th, 2020
calf

ಮಂಗಳೂರು  : ಅಕ್ರಮವಾಗಿ  ಕರುಗಳನ್ನು ಸಾಗಾಟ ನಡೆಸುತ್ತಿದ್ದ ಕಾರನ್ನು ಉಳ್ಳಾಲ ಪೊಲೀಸರು ಕಲ್ಲಾಪು ಸಮೀಪ ಅಡ್ಡ ಗಟ್ಟಿ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ವೇಳೆ ಆರೋಪಿಗಳಿಬ್ಬರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಜಾನುವಾರು ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕಲ್ಲಾಪು ಸಮೀಪ ಅಡ್ಡಗಟ್ಟಿದ್ದರು. ಈ ಸಂದರ್ಭ ಕಾರಿನಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ‌. ಕಾರನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಸಂಪೂರ್ಣ ಲಾಕ್‌ಡೌನ್ ಮಂಗಳೂರಲ್ಲಿ ಬಂದೂಕು ಹಿಡಿದ ಪೊಲೀಸರು

Monday, May 25th, 2020
police-gun

ಮಂಗಳೂರು  : ಲಾಕ್ ಡೌನ್ ಹಂತ ಹಂತವಾಗಿ ಸಡಿಲವಾಗುತ್ತಿದ್ದಂತೆ ಜನ ಬೇಕಾಬಿಟ್ಟಿ ಜಾಲಿ ರೇಡ್ ಹೋರಡುತ್ತಿದ್ದರು,  ಭಾನುವಾರ  ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಂಗಳೂರು  ಸ್ತಬ್ದವಾಗಿತ್ತು. ದಿನಾ ಲಾಠಿ ಹಿಡಿಯುತ್ತಿದ್ದ ಪೊಲೀಸರು ನಿನ್ನೆ ಮಾತ್ರ ತೊಕ್ಕೊಟ್ಟು, ಉಳ್ಳಾಲ ಬಳಿ ಸುಖಾಸುಮ್ಮನೆ ಓಡಾಡುತ್ತಿದ್ದ ವಾಹನಗಳನ್ನು ಬಂದೂಕು ಹಿಡಿದು ತಡೆದು ಎಚ್ಚರಿಕೆ ನೀಡಿ ವಾಪಸ್ಸು ಕಳುಹಿಸುತ್ತಿದ್ದರು. ಈ ಬಾರಿ ಸೂಕ್ಷ್ಮ ದೇಶವಾಗಿರುವ ಉಳ್ಳಾಲದಲ್ಲಿ ಬಂದೋಬಸ್ತ್ ನಿರತರಾಗಿದ್ದ ಪೊಲೀಸರ ಕೈಗೆ ಬಂದೂಕು ನೀಡಲಾಗಿತ್ತು. ಇಷ್ಟುದಿನ ಪೊಲೀಸರು ಕೈಯ್ಯಲ್ಲಿ ಲಾಠಿ ಹಿಡಿದು ಲಾಕ್‌ಡೌನ್‌ ನಿಯಮ ಪಾಲನೆಯ ಪಾಠ ಮಾಡಿದ್ದರು […]

ಹೆದ್ದಾರಿ ಬದಿ ದರೋಡೆಗೆ ಯತ್ನ: ಐವರ ಬಂಧನ

Monday, October 23rd, 2017
robbery plot

ಮಂಗಳೂರು: ಮಂಗಳೂರಿನ ಉಳ್ಳಾಲ ಪೊಲೀಸರು  ಹೆದ್ದಾರಿಯಲ್ಲಿ ಸಾಗುವ ವಾಹನಗಳನ್ನು ತಡೆದು ದರೋಡೆ ನಡೆಸುತ್ತಿದ್ದ 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ . ಬಂಧಿತರನ್ನು ಪುತ್ತೂರಿನ ರವಿಕುಮಾರ್, ಕೇರಳದ ಮಂಜೇಶ್ವರ ಕುಂಜತ್ತೂರು ನಿವಾಸಿಗಳಾದ ಖಲೀಲ್, ರಾಜೇಶ್ ಕೆ, ಅಝೀಮ್, ಜಾಬೀರ್ ಅಬ್ಬಾಸ್ ಎಂದು ಗುರುತಿಸಲಾಗಿದೆ . ಬಂಧಿತರಿಂದ ಮಾರಕಾಸ್ತ್ರಗಳು , ಕಬ್ಬಿಣದ ರಾಡು, ಮೆಣಸಿನ ಪುಡಿ , ಚೂರಿ ಹಾಗೂ ಮಾರುತಿ ಸಿಫ್ಟ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ಮಂಗಳೂರು ಹೊರವಲಯದ ಕಲ್ಲಾಪು ಎಂಬಲ್ಲಿ ಕೇರಳದಿಂದ ಮಂಗಳೂರು ಹೋಗುವ […]