Blog Archive

ಅ.28ರಂದು ಜಿಲ್ಲೆಯ 16 ಬ್ಲಾಕ್ ಗಳಲ್ಲಿ ಕಾಂಗ್ರೆಸ್ ಸದಸ್ಯರ ನೋಂದಾವಣೆ ಅಭಿಯಾನಕ್ಕೆ ಚಾಲನೆ

Monday, October 20th, 2014
Kodijal

ಮಂಗಳೂರು : ಮಹಾರಾಷ್ಟ್ರ ಮತ್ತು ಹರಿಯಾಣದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಿನಾಯ ಸೋಲು ಅನುಭವಿಸಿದ ನ್ತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಅ.28ರಂದು ಜಿಲ್ಲೆಯ 16 ಬ್ಲಾಕ್ ಗಳಲ್ಲಿ ಕಾಂಗ್ರೆಸ್ ಸದಸ್ಯರ ನೋಂದಾವಣೆ ಅಭಿಯಾನಕ್ಕೆ ಚಾಲನೆ ನೀಡಲಿದೆ. ದ.ಕ. ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಈ ಬಗ್ಗೆ ಸೋಮವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಮಾತನಾಡಿದ .ಕ. ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ , […]

ಸಿಪಿಎಂ ಕಾರ್ಯಕರ್ತನ ಹತ್ಯೆ ಮುಖ್ಯ ಆರೋಪಿ ನ್ಯಾಯಾಲಯದ ಮುಂದೆ ಶರಣು

Friday, September 20th, 2013
prajith

ಕಾಸರಗೋಡು : ಸಿಪಿಎಂ ಕಾರ್ಯಕರ್ತ ಮಾಂಙಾಡ್ ನಿವಾಸಿ ಎಂ.ಬಿ.ಬಾಲಕೃಷ್ಣನ್(45) ನನ್ನು ಮಾರಕಾಯುಧಗಳಿಂದ ಇರಿದು ಕೊಲೆಗೈದ  ಪ್ರಕರಣದಲ್ಲಿ ಮುಖ್ಯ ಆರೋಪಿ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಉದುಮ ಆರ್ಯಡ್ಕ ಕಾಲನಿ ನಿವಾಸಿ ಪ್ರಜಿತ್ ಯಾನೆ ಕುಟ್ಟಾಪಿ(25) ಎಂಬಾತನೇ ಹೊಸದುರ್ಗ ಪ್ರಥಮ ದರ್ಜೆ ನ್ಯಾಯಾಲಯ ಮುಂದೆ ಶರಣಾದಾತ.ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಪ್ರಜಿತ್ ನಿನ್ನೆ ಬೆಳಿಗ್ಗೆ 10.30ರ ವೇಳೆಗೆ ದಿಢೀರ್  ನ್ಯಾಯವಾದಿಯೊಬ್ಬರ ಜೊತೆಗೆ ಕೋರ್ಟಿನಲ್ಲಿ ಪ್ರತ್ಯಕ್ಷನಾಗಿದ್ದ. ಆರೋಪಿಗೆ ನ್ಯಾಯಾಲಯ ಎರಡು ವಾರಗಳ ರಿಮಾಂಡ್ ವಿಧಿಸಿದೆ. ಪ್ರಕರಣದಲ್ಲಿ ಒಟ್ಟು ಮೂವರು ಆರೋಪಿಗಳಿದ್ದು, ಇತರ ಇಬ್ಬರು […]

ಬಿಬಿಎಂಪಿಯ ನೂತನ ಮೇಯರ್ ಆಗಿ ಕಟ್ಟೆ ಸತ್ಯನಾರಾಯಣ, ಉಪ ಮೇಯರ್ ಆಗಿ ಇಂದಿರಾ ಅವಿರೋಧ ಆಯ್ಕೆ

Wednesday, September 4th, 2013
satyanarayan

ಬೆಂಗಳೂರು:  ಬಿಬಿಎಂಪಿಯ ನೂತನ ಮೇಯರ್ ಆಗಿ ಬಸವನಗುಡಿ ವಾರ್ಡ್ ಸದಸ್ಯ ಕಟ್ಟೆ ಸತ್ಯನಾರಾಯಣ, ಉಪಮೇಯರ್ ಆಗಿ  ಬ್ಯಾಟರಾಯನಪುರ ವಾರ್ಡ್ ನ  ಎನ್. ಇಂದಿರಾ ಅವಿರೋಧವಾಗಿ  ಬುಧವಾರ ನಡೆದ ಚುನಾವಣೆಯಲ್ಲಿ  ಆಯ್ಕೆಯಾಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಸ್ಥಾನಗಳನ್ನು ಹಂಚಿಕೊಂಡವು. ಬಿಬಿಎಂಪಿಯಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ. ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಮೇಯರ್ ಸ್ಥಾನಕ್ಕೆ ಬಸವನಗುಡಿ ವಾರ್ಡ್ ಸದಸ್ಯ ಕಟ್ಟೆ ಸತ್ಯನಾರಾಯಣ್ ಅವರ ಹೆಸರನ್ನು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಘೋಷಿಸಿದರು. ಬೇರೆ  ಅಭ್ಯರ್ಥಿಗಳು ಸ್ಪರ್ಧಿಸದ ಕಾರಣ ಅವರು ಮೇಯರ್ […]

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಡವರಿಗೆ ಕೆ.ಜಿ.ಗೆ 1 ರೂ.ಗೆ ಅಕ್ಕಿ : ಜನಾರ್ದನ ಪೂಜಾರಿ

Friday, March 15th, 2013
Bantwal Congress victory procession

ಬಂಟ್ವಾಳ : ಪುರಸಭಾ-ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿರುವ ಹಿನ್ನಲೆಯಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾರ್ಚ್ ೧೪  ಗುರುವಾರ ಸಂಜೆ ಬಿ.ಸಿ. ರೋಡಿನ ಪೂಂಜಾ ಮೈದಾನದಲ್ಲಿ ನೂತನ ಕಾಂಗ್ರೆಸ್ ಸದಸ್ಯರ ಅಭಿನಂದನೆ ಮತ್ತು ಮತದಾರರಿಗೆ ಕೃತಜ್ಞತಾ ಸಭೆಯನ್ನು ಆಯೋಗಿಸಲಾಗಿತ್ತು. ಸಮಾರಂಭಕ್ಕೂ ಮೊದಲು ನೂತನ ಸದಸ್ಯರನ್ನು ಬಿ.ಸಿ.ರೋಡಿನ ಮುಖ್ಯ ವೃತ್ತದ ಬಳಿಯಿಂದ ಮೈದಾನದವರೆಗೆ ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಕರೆತರಲಾಯಿತು. ಸಭೆಯನ್ನು  ಕೇಂದ್ರದ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ಉದ್ಘಾಟಿಸಿದರು. ಸ್ಥಳೀಯ […]

ಕಾಂಗ್ರೆಸ್ ನಲ್ಲಿ ಬಿರುಸುಗೊಂಡ ಜಾತಿ ರಾಜಕಾರಣ !

Friday, December 28th, 2012
Mangalore Politics

ಮಂಗಳೂರು : ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಯ ವಿಷಯ ಬಂದಾಗ ಯಾವ ಜಾತಿಗೆ ಎಲ್ಲಿ ಅದ್ಯತೆ ಎಂಬ ಪ್ರಶ್ನೆ ಎಲ್ಲ ರಾಜಕೀಯ ಪಕ್ಷಗಳಲ್ಲೂ ಏಳುತ್ತದೆ. ಜಾತಿ ರಾಜಕಾರಣ ಹುಟ್ಟು ಹಾಕಿದ್ದೇ ಕಾಂಗ್ರೆಸ್ ಎಂದು ಹೇಳಬಹುದು. ಸಾಮಾಜಿಕ ನ್ಯಾಯದ ನೆಪ ದಲ್ಲಿ ಜಾತಿವಾರು ಲೆಕ್ಕಾಚಾರ ನಡೆಸಿ ಮತಗಳ ಮೇಲೆ ಲಗ್ಗೆ ಇಡಲು ಎಲ್ಲ ರಾಜಕೀಯ ಪಕ್ಷಗಳೂ ಈಗ ಯೋಜನೆ ರೂಪಿಸುತ್ತಿವೆ. ಇಂತಹದ್ದೇ ಲೆಕ್ಕಾಚಾರದ ವರದಿಯೊಂದು ಕಾಂಗ್ರೆಸ್ ನಿಂದ ಹೊರಬಿದ್ದಿದೆ. ದ.ಕ. ಜಿಲ್ಲೆಯ ಕಾಂಗ್ರೆಸ್ ನಲ್ಲಿ ಯಾರು ಯಾವ ಕ್ಷೇತ್ರದ ಅಭ್ಯರ್ಥಿ, […]