ಕೆಪಿಸಿಸಿ ರಾಜ್ಯ ವಕ್ತಾರರಾಗಿ ಎಂ ಜಿ ಹೆಗಡೆ ನೇಮಕ

Wednesday, March 13th, 2024
MG-Hegde

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ರಾಜ್ಯ ವಕ್ತಾರರಾಗಿ ಎಂ ಜಿ ಹೆಗಡೆ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದಾರೆ. ಈ ಸಂಬಂಧ ಮಾರ್ಚ್ 13ರಂದು ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಜಾಲತಾಣಗಳ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅಧಿಸೂಚನೆ ಹೊರಡಿಸಿದ್ದಾರೆ. ಹೆಗ್ಗಡೆಯವರು ತಮ್ಮ ತೀಕ್ಷ್ಣವಾದ ಬುದ್ಧಿ ಮತ್ತು ನಿರರ್ಗಳ ಮಾತುಗಾರಿಕೆಗೆ ಹೆಸರಾದವರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಜಿಲ್ಲಾ ವಕ್ತಾರರಾಗಿ […]

ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Monday, September 13th, 2021
ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು  : ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ. ನಮ್ಮ ಹಿರಿಯ ನಾಯಕರಾದ, ಹಾಲಿ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫರ್ನಾಂಡಿಸ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಕೆಪಿಸಿಸಿ  ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಉಡುಪಿ ಪಾಲಿಕೆ ಸದಸ್ಯರಾಗಿ ರಾಜಕಾರಣ ಪ್ರಾರಂಭಿಸಿ ಸತತ ನಾಲ್ಕು ಬಾರಿ ಸಂಸತ್ ಸದಸ್ಯರಾಗಿ, ಕೇಂದ್ರದ ಮಂತ್ರಿಯಾಗಿ, ನಂತರ ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರು ಸಸ್ಯಹಾರಿಗಳು. ನಿತ್ಯ ಕನಿಷ್ಠ ಒಂದೂವರೆ ಗಂಟೆ ಯೋಗ ಮಾಡುತ್ತಿದ್ದರು. ಆರೋಗ್ಯದ ಮೇಲೆ ಅಷ್ಟು ಕಾಳಜಿ […]

ತಮಿಳುನಾಡು ಸರಕಾರಕ್ಕೆ ಹೆದರಿ ಮೇಕೆದಾಟು ಯೋಜನೆಯನ್ನು ವಿಳಂಬ ಮಾಡುವ ಅಗತ್ಯ ಇಲ್ಲ : ಡಿ.ಕೆ.ಶಿವಕುಮಾರ್

Monday, July 5th, 2021
DK Shivakumar

ಮಂಗಳೂರು : ದ.ಕ ಜಿಲ್ಲೆಗೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪತ್ರಕರ್ತರೊಂದಿಗೆ ಮಾಡನಾಡಿ ತಮಿಳುನಾಡು ಸರಕಾರಕ್ಕೆ ಹೆದರಿ   ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಮೇಕೆದಾಟು ಯೋಜನೆಯನ್ನು ವಿಳಂಬ ಮಾಡುವ ಅಗತ್ಯ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮೇಕೆದಾಟು ಯೋಜನೆಯನ್ನು ರಾಜ್ಯ ಸರಕಾರ ಕೈಗೆತ್ತಿಕೊಂಡು ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು. ಈ ಬಗ್ಗೆ ಯಡಿಯೂರಪ್ಪ ತಕ್ಷಣ ಕ್ರಮ ಕೈಗೊಳ್ಳ ಬೇಕು. ತಮಿಳುನಾಡು ಸರಕಾರದ ಮುಂದೆ ಭಿಕ್ಷೆ ಬೇಡ ಬೇಕಾಗಿಲ್ಲ ಎಂದು ಹೇಳಿದರು. ಸುಪ್ರೀಂ ಕೋರ್ಟ್ ನೀಡಿರುವ […]

ಕೋವಿಡ್ ಹೆಸರಿನಲ್ಲಿ ರಾಜ್ಯ ಸರಕಾರ ನಡೆಸಿರುವ ಭ್ರಷ್ಟಾಚಾರ ತಿಳಿಸಲು ಕಾಂಗ್ರೆಸ್ನಿಂದ ಲೆಕ್ಕಕೊಡಿ ಅಭಿಯಾನ

Sunday, September 13th, 2020
saleem

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಲೆಕ್ಕಕೊಡಿ ಅಭಿಯಾನದೊಂದಿಗೆ ರಾಜ್ಯ ಸರಕಾರ ಕೋವಿಡ್ ಹೆಸರಿನಲ್ಲಿ ನಡೆಸಿರುವ ಭ್ರಷ್ಟಾಚಾರ ವನ್ನು ಜನರಿಗೆ ತಿಳಿಸುವ ಅಭಿಯಾನ ವನ್ನು ಹಮ್ಮಿಕೊಂಡಿದೆ  ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ. ರಾಜ್ಯಕ್ಕೆ ಜಿ.ಎಸ್ ಟಿ ಮೂಲಕ ಬರಬೇಕಾದ ಪಾಲು ಬಂದಿಲ್ಲ, ನೆರೆ ಪರಿಹಾರ ವಾಗಿ ಕಳೆದ ವರ್ಷ ಬರಬೇಕಾದ 50 ಸಾವಿರ ಕೋಟಿ ರೂ ನಷ್ಟ ಆಗಿತ್ತು. ಕೇಂದ್ರ ಸರಕಾರದಿಂದ ಕೇವಲ 1800 ಕೋಟಿ ನೆರವು ಮಾತ್ರ ಬಂದಿದೆ. ಈ ಬಾರಿ 10 ಸಾವಿರ […]

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಆಯ್ಕೆ

Wednesday, March 11th, 2020
dk-shivkumar

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅವರನ್ನು ಹೈಕಮಾಂಡ್‌ ನೇಮಕ ಮಾಡಿದೆ. ಬುಧವಾರ ಈ ಮಹತ್ವದ ಘೋಷಣೆ ಮಾಡಿದ್ದು, ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಕಾರ್ಯಾಧ್ಯಕ್ಷರಾಗಿ ಲಿಂಗಾಯತ ಸಮುದಾಯದ ಈಶ್ವರ್ ಖಂಡ್ರೆ, ಅಲ್ಪಸಂಖ್ಯಾತ ಸಮುದಾಯ ಸಲೀಮ್ ಅಹಮ್ಮದ್ ಹಾಗೂ ವಾಲ್ಮೀಕಿ ಸಮುದಾಯದ ಸತೀಶ್ ಜಾರಕಿಹೊಳಿಯನ್ನು ನೇಮಕ ಮಾಡಲಾಗಿದೆ. ಈ ಮೂವರು ಸಿದ್ದರಾಮಯ್ಯ ಆಪ್ತರಾಗಿದ್ದಾರೆ. ಡಿಕೆ ಶಿವಕುಮಾರ್‌ಗೆ ಅಧ್ಯಕ್ಷ ಸ್ಥಾನ ನೀಡುದಕ್ಕೆ ಸಿದ್ದರಾಮಯ್ಯ ಬಣದ ಆಕ್ಷೇಪವಿತ್ತು. ಒಂದು ವೇಳೆ ಅಧ್ಯಕ್ಷ ಸ್ಥಾನ ನೀಡುವುದಾದರೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ […]

ಕೆಪಿಸಿಸಿ ಪಟ್ಟಕ್ಕಾಗಿ ಡಿ.ಕೆ ಶಿವಕುಮಾರ್ ಹಾಗೂ ಎಂ.ಬಿ ಪಾಟೀಲ್ ನಡುವೆ ತೀವ್ರ ಪೈಪೋಟಿ

Wednesday, January 22nd, 2020
KPCC

ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಯಾರಿಗೆ ಕೊಡಬೇಕು ಎಂಬ ಬಗ್ಗೆ ಮಹತ್ವದ ನಿರ್ಧಾರಕ್ಕೆ ಬರಲು ಹೈಕಮಾಂಡ್ ಪರದಾಡುತ್ತಿದೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಎಂ.ಬಿ ಪಾಟೀಲ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದ್ದು, ಯಾರಿಗೆ ಪಕ್ಷದ ಹೊಣೆಗಾರಿಕೆ ವಹಿಸಿದರೆ ಅನುಕೂಲಕರ ಎನ್ನುವ ಬಗ್ಗೆಯೂ ಕೂಲಂಕಷವಾಗಿ ಅಧ್ಯಯನ ನಡೆಸಲು ಸಮಿತಿಯಿಂದ ವರದಿ ಪಡೆದಿತ್ತು. ಹೈಕಮಾಂಡ್ ಸಮಿತಿ ವರದಿ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ನಡೆಸಿದ ಸೋನಿಯಾ ಗಾಂಧಿ, ಅಂತಿಮವಾಗಿ ಡಿ.ಕೆ ಶಿವಕುಮಾರ್ […]

ಸಿದ್ದರಾಮಯ್ಯ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಡಾ. ಜಿ ಪರಮೇಶ್ವರ್

Friday, September 27th, 2019
G.-Parameshwar

ತುಮಕೂರು : ಸಿದ್ದರಾಮಯ್ಯ ಅವರಿಗಾಗಿ ಪಕ್ಷವಿಲ್ಲ, ಪಕ್ಷಕ್ಕಾಗಿ ನಾವಿದ್ದೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ನಡುವಿದ್ದ ಭಿನ್ನಾಭಿಪ್ರಾಯ ಈಗ ಹೊರಬೀಳುತ್ತಿದೆ. ಸಿದ್ದರಾಮಯ್ಯರಗೋಸ್ಕರ ನಾವೇನಿಲ್ಲ, ಸಿದ್ದರಾಮಯ್ಯರಗೋಸ್ಕರ ಕಾಂಗ್ರೆಸ್ ಪಕ್ಷವೂ ಇಲ್ಲ ಅಥವಾ ನನಗೋಸ್ಕರ ಕಾಂಗ್ರೆಸ್ ಪಕ್ಷ ಇಲ್ಲ, ಕಾಂಗ್ರೆಸ್ ಪಕ್ಷಕ್ಕಾಗಿ ನಾವಿದ್ದೇವೆ ಎಂದರು. ಉಪಚುನಾವಣೆ ಸಂಬಂಧ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಗೆ ಪರಮೇಶ್ವರ್ ಯಾಕೆ ಗೈರಾಗಿದ್ದರು ಎನ್ನುವುದಕ್ಕೆ ಸ್ಪಷ್ಟನೆ ನೀಡಿರುವ ಅವರುಸಭೆಯನ್ನು ಮೊದಲು 11:30ಕ್ಕೆ ನಿಗದಿ […]

ಸೋತ ಶಾಸಕರಿಗೆ ಧೈರ್ಯ ತುಂಬಿದ ರಾಜ್ಯ ‘ಕೈ’ ನಾಯಕರು

Monday, July 9th, 2018
dinesh-gundu-rao

ಬೆಂಗಳೂರು: ಶಾಸಕರ ಭವನದಲ್ಲಿ ಆಯೋಜಿಸಿದ್ದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು. 2008ರಲ್ಲಿ 88 ಸ್ಥಾನ ಗೆದ್ದು ಪ್ರತಿಪಕ್ಷದಲ್ಲಿ ಕುಳಿತಿದ್ದ ಕಾಂಗ್ರೆಸ್‍ 2013ರಲ್ಲಿ 122 ಸ್ಥಾನ ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸಿದ್ದರು. 2013-2018ರ ನಡುವೆ ಹಲವು ಭಾಗ್ಯಗಳನ್ನು ದಯಪಾಲಿಸಿದ್ದ ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಂಡಿದ್ದರು. ಪಕ್ಷ […]

ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಸ್ಥಾನಕ್ಕೆ ಅಶ್ರಫ್‌ ಗುಡ್‌ ಬೈ

Friday, February 9th, 2018
ashraf

ಮಂಗಳೂರು: ಮಾಜಿ ಮೇಯರ್ ಕೆ. ಅಶ್ರಫ್ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಅಶ್ರಫ್‌ ಕಾಂಗ್ರೆಸ್‌ನ ಸಕ್ರಿಯ ಮುಖಂಡರಾಗಿದ್ದವರು. ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ಬೆಂಬಗಲಿರಾಗಿದ್ದ ಅಶ್ರಫ್‌, ಬಳಿಕ ಪೂಜಾರಿ ವಿರುದ್ಧವೇ ತಮ್ಮ ಅಸಮಾಧಾನ ಹೊರಹಾಕಿದ್ದರು. ನಂತರ ಕಾಂಗ್ರೆಸ್‌ ಪಕ್ಷದ ಕಾರ್ಯ ಚಟುವಟಿಕೆಗಳಿಂದಲೇ ದೂರ ಉಳಿದಿದ್ದರು. ಇತ್ತೀಚೆಗೆ ಮತ್ತೆ ಪಕ್ಷದಲ್ಲಿ ಸಕ್ರಿಯರಾಗಿದ್ದ ಅಶ್ರಫ್ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರನ್ನಾಗಿ […]

ಅನ್ನಭಾಗ್ಯ ದೇಶಕ್ಕೇ ಮಾದರಿ ಯೋಜನೆ: ಯು.ಟಿ. ಖಾದರ್

Thursday, January 18th, 2018
u-t-kader

ಮಂಗಳೂರು: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ದೇಶಕ್ಕೆ ಮಾದರಿ ಯೋಜನೆಯಾಗಿದೆ. ಯೋಜನೆಯನ್ನು ಆನ್ ಲೈನ್ ವ್ಯವಸ್ಥೆಗೆ ಪರಿವರ್ತಿಸಿದ್ದು ಬೋಗಸ್ ಕಾರ್ಡ್‌ಗಳನ್ನು ಪತ್ತೆ ಹಚ್ಚಿ ಬೊಕ್ಕಸಕ್ಕೆ ಕೋಟ್ಯಾಂತರ ರೂ.ಗಳ ಉಳಿತಾಯ ಮಾಡಿದ್ದೇವೆ ಎಂದು ಆಹಾರ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಆಹಾರ ಇಲಾಖೆಗೆ ರಾಷ್ಟ್ರ ಮಟ್ಟದ ಅವಾರ್ಡ್ ಬಂದಿದೆ. ಜನಜಾಗೃತಿ, ಪಡಿತರ ವಿತರಣೆಗಾಗಿ ಈ ಅವಾರ್ಡ್ ಬಂದಿದೆ. ಹಿಂದಿನ ಸಚಿವರು, ಇಲಾಖೆಯ ಎಲ್ಲ ಸಿಬ್ಬಂದಿಗಳ ಶ್ರಮಕ್ಕೆ ಇದರ ಶ್ರೇಯಸ್ಸು […]