ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಆಯ್ಕೆಯಾದ ದಿನವೇ ಕಾಂಗ್ರೆಸ್ ಪಕ್ಷ ಸತ್ತು ಹೋಯಿತು : ಸುಧಾಕರ್
Saturday, October 19th, 2019ಚಿಕ್ಕಬಳ್ಳಾಪುರ : ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷರಾದ ದಿನವೇ ಕಾಂಗ್ರೆಸ್ ಪಕ್ಷ ಸತ್ತು ಹೋಯಿತು ಎಂದು ಅನರ್ಹ ಶಾಸಕ ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕು ಮಂಡಿಕಲ್ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅನರ್ಹ ಶಾಸಕ ಸುಧಾಕರ್, ದಿನೇಶ್ ಗುಂಡೂರಾವ್ ಮೊದಲು ಕೆಪಿಸಿಸಿ ಪಕ್ಷದ ಅಧ್ಯಕ್ಷರ ಕೆಲಸ ಮಾಡೋದನ್ನು ಕಲಿತುಕೊಳ್ಳಲಿ. ಲೋಕಸಭಾ ಚುನಾವಣೆಯಲ್ಲಿ 28 ರಿಂದ 1 ಸ್ಥಾನ ಬಂದಾಗ ದಿನೇಶ್ ಗೂಂಡಾರಾವ್ ರಾಜೀನಾಮೆ ಕೊಡಬೇಕಿತ್ತು ಎಂದು ಕಿಡಿಕಾರಿದರು. ಸಿಎಂ ಯಡಿಯೂರಪ್ಪ ಬಗ್ಗೆ ಮಾತನಾಡಲು ಅವರಿಗೇನು ನೈತಿಕತೆ ಇದೆ. ಯಾವ […]