Blog Archive

ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ, ಐವರು ವಶಕ್ಕೆ

Friday, October 9th, 2020
Kusuma

ಮಂಗಳೂರು : ಅವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಮಂಗಳೂರು ದಕ್ಷಿಣ ಎಸಿಪಿ ನೇತೃತ್ವದ ಪೊಲೀಸ್ ತಂಡ ಶಂಕಿತ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಕಣಂತೂರು ಬೆಳ್ಳೇರಿ ಸಮೀಪ  ಸೆ. 25ರಂದು 50 ವರ್ಷದ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಗ್ಯಾಸ್ ಸ್ಟೌವ್ ತೆರೆದ ಸ್ಥಿತಿಯಲ್ಲಿ ಮತ್ತು ಮನೆಯ ಕರ್ಟೈನ್ಗೆ ಬೆಂಕಿ ಹಾಕಿರುವ ದುಷ್ಕರ್ಮಿಗಳು, ಪ್ರಕರಣ ತಿರುಚುವ ಪ್ರಯತ್ನ ಮಾಡಿದ್ದರು. ಇದರಿಂದಾಗಿ ಪೊಲೀಸರ ತನಿಖೆಗೆ […]

ಹಿರಿಯಡ್ಕ ಪೇಟೆಯಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ

Thursday, September 24th, 2020
kishan Hegde

ಉಡುಪಿ: ಎರಡು ಇನ್ನೋವಾ ಕಾರುಗಳಲ್ಲಿ ಬಂದ ತಂಡವೊಂದು ಹಿರಿಯಡ್ಕ ಪೇಟೆಯಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಅಟ್ಟಾಡಿಸಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಪಡುಬಿದ್ರಿ ಇನ್ನಾದ  ಕಿಶನ್ ಹೆಗ್ಡೆ (42) ಕೊಲೆಯಾದ ವ್ಯಕ್ತಿ. ಈತ ರಿಯಲ್ ಎಸ್ಟೇಟ್ ಉದ್ಯಮವನ್ನು ನಡೆಸುತ್ತಿದ್ದ ಎನ್ನಲಾಗಿದೆ. ಈತನ ಮೇಲೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣಗಳಿವೆ, ರೌಡಿ-ಶೀಟರ್ ಎಂದು ಹೇಳಲಾಗಿದೆ. ಮಂಗಳೂರು ಮೂಲದ ಗ್ಯಾಂಗ್ ಒಂದು ಈ ಹತ್ಯೆ ಮಾಡಿದೆ ಎಂದು ಹೇಳಲಾಗಿದೆ. ಗುರುವಾರ ಮಧ್ಯಾಹ್ನ ಹಿರಿಯಡ್ಕ ಪೇಟೆಯ ನಡುರಸ್ತೆಯಲ್ಲಿ ತಲೆಗೆ […]

ತನ್ನ ಸ್ವಂತ ಮಗಳನ್ನೇ ನೀರಿನ ತೊಟ್ಟಿಗೆ ಮುಳುಗಿಸಿ ಕೊಲೆ ಮಾಡಿರುವ ತಂದೆ ಮತ್ತು ಚಿಕ್ಕಮ್ಮ!

Wednesday, August 26th, 2020
Mahalakshmi

ಚಾಮರಾಜನಗರ : ತನ್ನ ಸ್ವಂತ ಮಗಳನ್ನೇ  ಎರಡನೇ ಹೆಂಡತಿಯ ಜೊತೆ ಸೇರಿ  ನೀರು ತುಂಬಿದ್ದ ತೊಟ್ಟಿಗೆ ಮುಳುಗಿಸಿ ಕೊಲೆ ಮಾಡಿರುವ ಅಮಾನುಷ ಘಟನೆ ಲೂಕಿನ ಸೋಮಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ತನ್ನ ಎರಡನೇ ಹೆಂಡತಿಗೆ ಮಕ್ಕಳಾಗಿಲ್ಲವೆಂಬ ಕಾರಣಕ್ಕೆ ತಂದೆ ಮತ್ತು ಚಿಕ್ಕಮ್ಮನೇ ಪುಟ್ಟ ಬಾಲಕಿಯನ್ನು ಕೊಂದು ಹಾಕಿದ್ದಾರೆ ಎಂದು ಹೇಳಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪಾಪಿ ತಂದೆ ಮಹೇಶ ಹಾಗೂ ಕ್ರೂರಿ ಚಿಕ್ಕಮ್ಮ ರತ್ನಮ್ಮ ದಂಪತಿಯನ್ನು ತೆರಕಣಾಂಬಿ ಪೊಲೀಸರು ಬಂಧಿಸಿದ್ದಾರೆ. ಮಹೇಶನ ಮೊದಲ ಪತ್ನಿ, ಸೋಮಹಳ್ಳಿ ಗ್ರಾಮದ ಗೌರಮ್ಮ ಎಂಬುವರ […]

ವಾಕಿಂಗ್ ಮಾಡುತ್ತಿದ್ದ ಟ್ಯಾಕ್ಸಿ ಡ್ರೈವರ್ ಮೇಲೆ ತಲವಾರು ದಾಳಿ ನಡೆಸಿ ಕೊಲೆ

Monday, August 24th, 2020
Belthangady

ಬೆಳ್ತಂಗಡಿ : ಬೆಳಗ್ಗಿನ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಮೂವರು ದುಷ್ಕರ್ಮಿಗಳ  ತಂಡ ದಾಳಿ ನಡೆಸಿದಾಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಾಸು ಸಪಲ್ಯ(65) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸೋಮವಾರ ಬೆಳಿಗ್ಗೆ ಬೆಳ್ತಂಗಡಿಯ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದ ವಾಸು ಸಪಲ್ಯ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು ಪರಿಣಾಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ವಾಸು ಸಪಲ್ಯ ವೃತ್ತಿಯಲ್ಲಿ ಬೆಳ್ತಂಗಡಿಯಲ್ಲಿ ಟ್ಯಾಕ್ಸಿ ವಾಹನದ ಚಾಲಕರಾಗಿ ಕೆಲಸ‌ ಮಾಡುತ್ತಿದ್ದರು. ಮಗ ಕೂಡ ಚಾಲಕ […]

ದ.ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

Wednesday, July 29th, 2020
sindhubroopesh

ಮಂಗಳೂರು :  ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮೂಡುಬಿದಿರೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಸಂಬಂಧ ಬಜ್ಪೆ ಸಮೀಪದ ನಿವಾಸಿ ರಂಜಿತ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ ಮಾಡಿದರೆ  ಕಾನೂನು ಕ್ರಮ ಕೈಗೊಳ್ಳುವುದಾಗಿ  ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ […]

ಲಾಕ್ಡೌನ್ ನಿಂದ ಮನೆಯಲ್ಲೇ ಇರುತಿದ್ದ ಗಂಡನನ್ನುಕಲ್ಲುಎತ್ತಿ ಹಾಕಿ ಸಾಯಿಸಿದ ಹೆಂಡತಿ ಮತ್ತು ಗೆಳೆಯರು

Saturday, July 18th, 2020
amrutahalli

ಬೆಂಗಳೂರು : ಲಾಕ್ಡೌನ್ ನಿಂದ ಮನೆಯಲ್ಲೇ ಹೆಂಡತಿ ಜೊತೆ ಇರುತಿದ್ದ ಗಂಡನನ್ನುಇಬ್ಬರು ಚೂರಿಯಿಂದ ತಿವಿದು ಕಲ್ಲುಎತ್ತಿ ಹಾಕಿ ಸಾಯಿಸಿದ ಘಟನೆ  ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿ ಸ್ನೇಹಿತನ ಜೊತೆ ಸೇರಿ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿದ್ದ ಆರೋಪದಡಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹರೀಶ್ ಮೃತ ವ್ಯಕ್ತಿಯಾಗಿದ್ದು, ಆತನ ಪತ್ನಿ, ಪ್ರಿಯಕರ ಅಭಿಲಾಷ್ ಮತ್ತು ಸ್ನೇಹಿತ ರಫೀಕ್ ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]

ಬೈಕ್ ನಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ಬುದ್ದಿಮಾತು ಹೇಳಿದ ಕಾರು ಚಾಲಕನ ಕೊಲೆ

Tuesday, July 14th, 2020
Raghuveer Circle

ನವದೆಹಲಿ: ಬೈಕ್ ನಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ಹಾಗೆ ಮಾಡಬೇಡಿ ಎಂದಿದ್ದಕ್ಕೆ ಮೂವರು ಹುಡುಗರು ಸೇರಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಬುದ್ದಿಮಾತು ಹೇಳಿದ 25 ವರ್ಷದ ಯುವಕನ ಮೇಲೆ ಮೂವರು ಹುಡುಗರು ಹಲ್ಲೆ ಮಾಡಿ ಸಾಯಿಸಿರುವ ಘಟನೆ ಪಶ್ಚಿಮ ದೆಹಲಿಯ ರಘುಬಿರ್ ನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಮನೀಶ್ ಎಂದು ಗುರುತಿಸಲಾಗಿದ್ದು ಈತ ಖಾಸಗಿ ಕಾರು ಚಾಲಕನಾಗಿದ್ದ. ಈತನನ್ನು ಕೊಂದ ಮೂವರು ಹುಡುಗರು 16-17 ವರ್ಷದವರಾಗಿದ್ದು ಅವರನ್ನು ಬಂಧಿಸಲಾಗಿದೆ. ಘಟನೆ ನಡೆದಿದ್ದು ಜುಲೈ 8ರಂದು. ಮೂವರೂ ಮನೀಶ್ […]

ಚಿಕನ್ ಕರಿಗೆ ಉಪ್ಪು ಜಾಸ್ತಿಯಾಯಿತು ಎಂದು ಹೆಂಡತಿಯನ್ನು ಕೊಲೆ ಮಾಡಿದ ಗಂಡ

Monday, May 11th, 2020
chicken-cury

ಚಿಕ್ಕಬಳ್ಳಾಪುರ  :  ಗಂಡನೊಬ್ಬ ಚಿಕನ್ ಕರಿಗೆ ಉಪ್ಪು ಜಾಸ್ತಿಯಾಯಿತು  ಎಂದು ಆರೋಪಿಸಿ ಹೆಂಡತಿಯನ್ನೇ  ಕೊಲೆ  ಮಾಡಿದ ಘಟನೆ  ಬಾಗೆಪಲ್ಲಿ ಜಿಲ್ಲೆಯ   ಹೋಶಹುಡಾಯಾ (ಉಪ್ಪಕುಂಟೆ) ಗ್ರಾಮದಲ್ಲಿ ನಡೆದಿದೆ. ಘಟನೆಗೆ  ಸಂಬಂಧಿಸಿದಂತೆ ಚೆಲೂರ್ ಪೊಲೀಸರು ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿರುವ ಬಾಲಚಂದ್ರ ಚೆಲೂರು (28) ಅವರ ಪತ್ನಿ ಮಧುರಾ (24) ಎಂದು ಗುರುತಿಸಲಾಗಿದೆ. ದಂಪತಿಗೆ 11 ತಿಂಗಳ ಮಗು ಇದೆ. ಮೂಲಗಳ ಪ್ರಕಾರ, ಆಲ್ಕೊಹಾಲ್ ವ್ಯಸನಿಯಾಗಿರುವ ಬಾಲಚಂದ್ರ ಆಕೆ ಸಿದ್ಧಪಡಿಸಿದ ಮಾಂಸಾಹಾರಿ  ಪದಾರ್ಥ ತುಂಬಾ ಉಪ್ಪು […]

ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಗಲ್ಲು ಶಿಕ್ಷೆ

Saturday, March 14th, 2020
yakapura

ಕಲಬುರ್ಗಿ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹತ್ಯೆಗೈದಿದ್ದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಕಲಬುರ್ಗಿಯ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಯಾಕಾಪುರದ ಯಲ್ಲಾಲಿಂಗ(35) ಮರಣದಂಡನೆಗೆ ಗುರಿಯಾದ ಆರೋಪಿ. ನೊಂದ ಬಾಲಕಿಯ ಕುಟುಂಬಕ್ಕೆ ಜಿಲ್ಲಾ ಕಾನೂನು ನೆರವು ಸಮಿತಿಯಿಂದ 10 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ ನೀಡಿದೆ. ಚಾಕಲೆಟ್ ಕೊಡಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿ, ಹತ್ಯೆಗೈದಿದ್ದ ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಗಲ್ಲು […]

ಮಂಗಳೂರು : 19ನೇ ಯುವತಿಯ ಕೊಲೆ ಪ್ರಕರಣ ಸಾಬೀತು; ಫೆ.15 ರಂದು ಸೈನೈಡ್​ ಮೋಹನ್‌ಗೆ ಶಿಕ್ಷೆ ಪ್ರಕಟ

Thursday, February 13th, 2020
mohan

ಮಂಗಳೂರು : ಮದುವೆ ಆಗುವ ಭರವಸೆ ನೀಡಿ, ಬಳಿಕ ಅತ್ಯಾಚಾರ ಎಸಗಿ ಸೈನೈಡ್ ಬಳಕೆ ಮಾಡಿಕೊಂಡು ಹತ್ಯೆ ಮಾಡಿರುವ 19ನೇ ಯುವತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯರ ಸರಣಿ ಹಂತಕ ಸೈನೈಡ್ ಮೋಹನ್‌ ಮೇಲಿನ ಆರೋಪ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದೆ. 2006ರಲ್ಲಿ ಮೋಹನ್ ಸಂಬಂಧಿಕರೊಬ್ಬರ ಮದುವೆಗೆ ತೆರಳಿದ್ದ ಸಂದರ್ಭ ಕೇರಳ ರಾಜ್ಯದ ಕಾಸರಗೋಡಿನ 23 ವರ್ಷದ ಯುವತಿಯ ಪರಿಚಯ ಆಗಿತ್ತು. ಆ ವೇಳೆ ಆತ ತನ್ನನ್ನು ಶಿಕ್ಷಕ ಹಾಗೂ ಆಕೆಯದ್ದೇ ಜಾತಿಯವನು […]