Blog Archive

ಕುಡಿತಕ್ಕೆ ಹಣ ನೀಡಲಿಲ್ಲವೆಂದು ಮಗನಿಂದ ತಂದೆಯ ಕೊಲೆ : ತಾಯಿ ಗಂಭೀರ

Tuesday, January 21st, 2020
lokesh

ಮಡಿಕೇರಿ : ಕುಡಿತದ ದಾಸನಾಗಿದ್ದ ವ್ಯಕ್ತಿಯೋರ್ವ ಕುಡಿಯಲು ಹಣ ನೀಡಲಿಲ್ಲವೆಂದು ತಂದೆ ಹಾಗೂ ತಾಯಿಯ ಮೇಲೆ ಮರದ ತುಂಡಿನಿಂದ ಹಲ್ಲೆ ಮಾಡಿ ತಂದೆಯನ್ನು ಕೊಲೆಗೈದಿರುವ ಘಟನೆ ವರದಿಯಾಗಿದೆ. ಸೋಮವಾರಪೇಟೆ ಸಮೀಪದ ಗೋಣಿಮರೂರು ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಜೇನುಕುರುಬರ ಕರಿಯಪ್ಪ (46) ಎಂಬುವವರೇ ಮಗ ಲೋಕೇಶ ಎಂಬಾತನಿಂದ ಹತ್ಯೆಗೀಡಾದ ದುರ್ದೈವಿಯಾಗಿದ್ದಾರೆ. ಮಗನ ಹಲ್ಲೆಯಿಂದ ತಾಯಿ ಲೀಲಾ ಎಂಬುವವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿ ಲೋಕೇಶ ನಿನ್ನೆ ರಾತ್ರಿ ಕಂಠಪೂರ್ತಿ ನಿಶೆಯೇರಿಸಿ ಮನೆಗೆ ಬಂದು ತಂದೆ […]

ಕುಂದಾಪುರ : ಬಾಬು ಶೆಟ್ಟಿ ಕೊಲೆ ಪ್ರಕರಣ; ಆರು ಮಂದಿ ಆರೋಪಿಗಳ ಬಂಧನ

Friday, December 27th, 2019
Kundapur

ಕುಂದಾಪುರ : ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಕಲ್ಕಂಬ ಎಂಬಲ್ಲಿ ಡಿ.17ರಂದು ನಡೆದ ಚೋರ್ಮಕ್ಕಿ ಬಾಬು ಶೆಟ್ಟಿ ಎಂಬವರ ಭೀಕರ ಕೊಲೆ ಪ್ರಕರಣದ ಆರು ಮಂದಿ ಆರೋಪಿಗಳನ್ನು ಬುಧವಾರ ರಾತ್ರಿ ಬಂಧಿಸುವಲ್ಲಿ ಕುಂದಾಪುರ ಉಪ ವಿಭಾಗದ ಎಎಸ್ಪಿ ಹರಿರಾಮ್ ಶಂಕರ್ ನೇತೃತ್ವದ ಪೊಲೀಸರ ತಂಡ ಯಶಸ್ವಿಯಾಗಿದೆ. ನೇರಳಕಟ್ಟೆ ನಿವಾಸಿ ತೇಜಪ್ಪ ಶೆಟ್ಟಿ (68) ಇಡೀ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಶೆಟ್ರಕಟ್ಟೆ ನಿವಾಸಿ ಉದಯ್ ರಾಜ್ ಶೆಟ್ಟಿ(55) ಕೊಲೆಯ ಸಂಪೂರ್ಣ ಯೋಜನೆ ರೂಪಿಸಿದವರಾಗಿದ್ದಾರೆ. ಉಳಿದಂತೆ ಕೊಲೆಗೆ […]

ಪಶುವೈದ್ಯೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ : ಕನ್ನಡಿಗ ವಿಶ್ವನಾಥ್ ಸಜ್ಜನರಿಂದ ಆರೋಪಿಗಳ ಎನ್ ಕೌಂಟರ್

Friday, December 6th, 2019
Vishwanth

ಹೈದರಾಬಾದ್ : ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ದಿಶಾ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಎಲ್ಲಾ ಆರೋಪಿಗಳನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.ಈ ಕಾರ್ಯಾಚರಣೆ ಹಿಂದಿರುವ ವ್ಯಕ್ತಿ ಕರ್ನಾಟಕದ ಹುಬ್ಬಳ್ಳಿಯವರಾದ ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ ಎಂದು ತಿಳಿದುಬಂದಿದೆ. ಅತ್ಯಾಚಾರ, ಕೊಲೆ ಪ್ರಕರಣ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು. ಮಾತ್ರವಲ್ಲದೆ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ತೀವ್ರ ಒತ್ತಡ ತರಲಾಗಿತ್ತು. ಇಂದು ಮುಂಜಾನೆ ಪೊಲೀಸರು ಎಲ್ಲಾ ಆರೋಪಿಗಳನ್ನು ಅತ್ಯಾಚಾರ, ಕೊಲೆ ನಡೆದ ಪ್ರದೇಶಕ್ಕೆ ಸ್ಥಳ ಪರಿಶೀಲನೆಗೆ ಕರೆದೊಯ್ಯುವ […]

ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ : ನಾಲ್ವರು ಆರೋಪಿಗಳ ಎನ್ ಕೌಂಟರ್

Friday, December 6th, 2019
Hydarbad

ಹೈದರಾಬಾದ್ : ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ. ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಪೊಲೀಸರು ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ. […]

ಕತ್ತಿಯಿಂದ ಕಡಿದು ಅಣ್ಣನ ಕೊಲೆ: ತಮ್ಮ ನ್ಯಾಯಲಯಕ್ಕೆ ಹಾಜರು

Wednesday, February 3rd, 2016
Chandrahasa

ಬದಿಯಡ್ಕ: ಕತ್ತಿಯಿಂದ ಕಡಿದು ಅಣ್ಣನನ್ನು ತಮ್ಮ ಕೊಲೆಗೈದ ಪ್ರಕರಣ ನಡೆದಿದ್ದು ಆರೋಪಿಯನ್ನು ಬದಿಯಡ್ಕ ಪೋಲಿಸರು ಬುಧವಾರ ಬೆಳಿಗ್ಗೆ ಬಂಧಿಸಿದ್ದಾರೆ. ಮುಂಡಿತ್ತಡ್ಕ ಸಮೀಪದ ಸರಳಿ ಕೊರಗಪ್ಪ ಪೂಜಾರಿಯವರ ಪುತ್ರ ವಾಸುದೇವ(35) ಕೊಲೆಗೀಡಾದ ದುರ್ದೈವಿ. ಆರೋಪಿಯಾದ ಇವರ ಸಹೋದರ ಚಂದ್ರಹಾಸ(28)ನನ್ನು ಮನೆ ಬಳಿಯ ಕಾಡಿನಿಂದ ಊರವರ ಸಹಾಯದೊಂದಿಗೆ ಬದಿಯಡ್ಕ ಪೋಲಿಸರು ಬಂಧಿಸಿ ಕೊಲೆಗೆ ಬಳಸಿದ ಕತ್ತಿಯನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಬಗ್ಗೆ ವಿದ್ಯಾನಗರ ಸಿ.ಐ ತನಿಖೆ ನಡೆಸುತ್ತಿದ್ದಾರೆ. ತರವಾಡು ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದ ವಾಸುದೇವ 7.15 ರ ವೇಳೆಗೆ ಮನೆಗೆ ತೆರಳಿದಾಗ […]

ಪಣಂಬೂರು ಮೀನಕಳೀಯದಲ್ಲಿ ವಿವಾಹಿತೆ ಮಹಿಳೆಯ ಕೊಲೆ

Tuesday, January 13th, 2015
meenakaliya murder

ಮಂಗಳೂರು : ವಿವಾಹಿತೆ ಮಹಿಳೆಯೊಬ್ಬರನ್ನು ಬಚ್ಚಲು ಮನೆಯಲ್ಲಿ ಬರ್ಬರವಾಗಿ ಹತ್ಯೆಮಾಡಲಾಗಿದ್ದು ಮೃತಳನ್ನು ಉತ್ತರ ಪ್ರದೇಶ ಮೂಲದ ಕೂಲಿ ಕಾರ್ಮಿಕೆ ಕಲ್ಪನ(25) ಎಂದು ಗುರುತಿಸಲಾಗಿದೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೀನಕಳೀಯ ಎಂಬಲ್ಲಿ ಈ ಘಟನೆ ನಡೆದಿದೆ. ಸೋಮವಾರ ರಾತ್ರಿ ಪಾಳಿಯಲ್ಲಿ ಗಂಡ ಕೆಲಸಕ್ಕೆ ಹೋಗಿದ್ದು ಮಂಗಳವಾರ ಬೆಳಗ್ಗೆ ಮನೆಗೆ ವಾಪಾಸು ಬಂದಾಗ ಕೊಲೆ ಕೃತ್ಯ ಬಯಲಾಗಿದೆ. ಆಕೆಯ ತಲೆಗೆ ಕಲ್ಲನ್ನು ಎತ್ತಿ ಹಾಕಿ ಈ ಕೃತ್ಯ ನಡೆಸಲಾಗಿದೆ. ರಾಜೇಶ್ ಮತ್ತು ಕಲ್ಪನ ಉತ್ತರ ಪ್ರದೆಶ ಮೂಲದಾವರಾಗಿದ್ದು, ಕೆಲ […]

ಉರ್ವದ ಮಾರಿಗುಡಿ ಸಮೀಪ ಮಧ್ಯ ವಯಸ್ಕ ವ್ಯಕ್ತಿಯ ಕೊಲೆ

Thursday, October 23rd, 2014
Urva Murder

ಮಂಗಳೂರು : ನಗರದ ಉರ್ವದ ಮಾರಿಗುಡಿಯ ಸಮೀಪ ಮಂಗಳೂರು ಮಹಾನಗರ ಪಾಲಿಕೆಯ ಬಯಲು ರಂಗ ಮಂಟಪದ ಬಳಿ ಮಧ್ಯ ವಯಸ್ಕ ವ್ಯಕ್ತಿಯೊಬ್ಬರ ಮೃತ ದೇಹ ಗುರುವಾರ ಪತ್ತೆಯಾಗಿದ್ದು ಇದೊಂದು ಕೊಲೆ ಎಂದು ಶಂಕಿಸಲಾಗಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ನಾರಾಯಣ ಎಂದು ಗರುತಿಸಲಾಗಿದ್ದು, ಬುಧವಾರ ಮಧ್ಯರಾತ್ರಿಯ ವೇಳೆಗೆ ಅಪರಿಚಿತ ವ್ಯಕ್ತಿಗಳು ಅವರ ತಲೆ ಬಾಗಕ್ಕೆ ದೊಡ್ಡ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆಗೈದಿದ್ದಾರೆ ಎನ್ನಲಾಗಿದೆ. ಕೊಲೆಗೆ ಕಾರಣವೇನೆಂದು ಇನ್ನಷ್ಟೆ ತಿಳಿದು ಬರಬೇಕಿದೆ. ಈತ ಮನೆ ಹಾಗು ಕುಟುಂಬದಿಂದ ಬೇರೆಯಾಗಿದ್ದ ಬೀದಿ […]

ಪ್ರೀತಿಗೆ ಪ್ರತಿರೋಧ ಮಾಡಿದ ಯುವತಿಯನ್ನು ಕೊಲೆಗೈದ ಆರೋಪಿಯ ಬಂಧನ

Saturday, November 30th, 2013
yogisha

ಮಲ್ಪೆ : ಉಡುಪಿ ಅಜ್ಜರಕಾಡಿನ ಮಹಿಳಾ ಪ್ರ.ದರ್ಜೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿಯಾಗಿದ್ದ ರಂಜಿತಾ (19)ಳನ್ನು ನವಂಬರ್ 27 ರಂದು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪಿ ಯೋಗೀಶನನ್ನು ಮಲ್ಪೆ ಪೊಲೀಸರು ನವಂಬರ್‌ 30 ರಂದು ಮಧ್ಯಾಹ್ನ ಸ್ಥಳೀಯರ ನೆರವಿನಿಂದ ಬಂಧಿಸಿದ್ದಾರೆ. ಯೋಗೀಶ (26). ಈತ ವೃತ್ತಿಯಲ್ಲಿ ಎಲೆಕ್ಟೀಶಿಯನ್‌, ಪೈಂಟಿಗ್‌ ಇನ್ನಿತರ ಕೆಲಸ ಮಾಡಿಕೊಂಡಿದ್ದ. ಆತ ಸ್ಥಳೀಯವಾಗಿ ರಂಜಿತಾಳನ್ನು ತಾನು ಲವ್‌ ಮಾಡುತ್ತಿರುವುದಾಗಿ ಹೇಳಿಕೊಳ್ಳುತ್ತಿದ್ದ. ತನ್ನನ್ನು ಪ್ರೀತಿಸುವಂತೆ ಆಕೆಯನ್ನು ಪದೇ ಪದೇ ಪೀಡಿಸುತ್ತಿದ್ದ, ಆಕೆ […]

ಜೆಪ್ಪು ಮೋರ್ಗನ್ಸ್‌ಗೇಟ್ ರೈಲ್ವೆ ಸೇತುವೆ ಬಳಿ ಯುವಕನ ಮೃತ ದೇಹ ಪತ್ತೆ

Tuesday, August 6th, 2013
Youth dead

ಮಂಗಳೂರು : ಜೆಪ್ಪು ಮೋರ್ಗನ್ಸ್‌ಗೇಟ್ ಸಮೀಪದ ರೈಲ್ವೆ ಸೇತುವೆ ಬಳಿ ಮಂಗಳವಾರ ಯುವಕನೊಬ್ಬನ ಮೃತ ದೇಹ  ಪತ್ತೆಯಾಗಿದ್ದು . ಮೃತ ವ್ಯಕ್ತಿಯನ್ನು ಶಾಂತಿಗುಡ್ಡೆ ನಿವಾಸಿ ವಿಕ್ರಾಂತ್ ಶೆಟ್ಟಿ (27) ಎಂದು ಗುರುತಿಸಲಾಗಿದೆ. ಸೋಮವಾರ ಸುಮಾರು 11 ಗಂಟೆ ಸುಮಾರಿಗೆ ಜ್ಯೋತಿ ಸಮೀಪದ ರಿಕ್ರಿಯೇಶನ್ಸ್ ಕ್ಲಬ್ ನಿಂದ ಶಾಂತಿಗುಡ್ಡೆಯ ತನ್ನ ನಿವಾಸಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ  ಬಂದ ದುಷ್ಕರ್ಮಿಗಳ ತಂಡವೊಂದು ವಿಕ್ರಾಂತ್ ಶೆಟ್ಟಿಯ ವಾಹನಕ್ಕೆ ಡಿಕ್ಕಿ ಹೊಡೆಸಿ  ವಿಕ್ರಾಂತ್ ಶೆಟ್ಟಿ ಮೇಲೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ […]

ಕೊಲೆ ಮಾಡಿ, ದೇಹವನ್ನು ಇಂಗುಗುಂಡಿಯಲ್ಲಿ ಮುಚ್ಚಿಟ್ಟಿದ್ದ ಆರೋಪಿಗಳಿಗೆ ಜಾಮೀನು

Saturday, July 20th, 2013
Karkala Murder

ಮಂಗಳೂರು : ಕಾರ್ಕಳ ತಾಲೂಕು ರೆಂಜಾಳ ಗ್ರಾಮದಲ್ಲಿ ಜೂ.3ರಂದು ಕೊಲೆಯಾದ ಪೂರ್ಣಿಮಾ ಶೆಟ್ಟಿ ಪ್ರಕರಣದ ಆರೋಪಿಗಳಾದ ಅಮರೀಶ್, ಸುಧಾಕರ್ ಶೆಟ್ಟಿ, ಗುರುಪ್ರಸಾದ್, ಭಾಸ್ಕರ್ ಪೂಜಾರಿ ಹಾಗೂ ಪ್ರವೀಣ್ ತೌರು ಇವರಿಗೆ ಮೂಡುಬಿದರೆ ನ್ಯಾಯಾಲಯ ಜಾಮೀನು ನೀಡಿದೆ. ತನ್ನ ಸ್ನೇಹಿತರ ಸಹಕಾರದೊಂದಿಗೆ ಪ್ರಭಾಕರ್ ಶೆಟ್ಟಿ ಪೂರ್ಣಿಮಾಳನ್ನು ಕೊಲೆ ಮಾಡಿ, ದೇಹವನ್ನು ಬಟ್ಟೆಯಲ್ಲಿ ಸುತ್ತಿ ಮಾಸ್ತಿಕಟ್ಟೆಯ ಇಂಗುಗುಂಡಿಯಲ್ಲಿ ಹೂತು ಹಾಕಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.