Blog Archive

ಕೊರೋನ ಸೋಂಕು ಪ್ರಕರಣಗಳು : ದ.ಕ. ಜಿಲ್ಲೆ -1,513 ಮೂರು ಸಾವು, ಉಡುಪಿಯಲ್ಲಿ- 1047 ಹತ್ತು ಸಾವು

Saturday, May 8th, 2021
Corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶನಿವಾರ 1,513 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. ಅಲ್ಲದೆ 752 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಸದ್ಯ 11,719 ಸಕ್ರಿಯ ಪ್ರಕರಣಗಳಿವೆ. ಶನಿವಾರ ಜಿಲ್ಲೆಯಲ್ಲಿ 3 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 783ಕ್ಕೇರಿದೆ. ಮೃತಪಟ್ಟವರಲ್ಲಿ ಮಂಗಳೂರು ಮತ್ತು ಬಂಟ್ವಾಳದ ಮಹಿಳೆಯರು ಸೇರಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 7,75,602 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದ್ದು, ಆ ಪೈಕಿ 7,20,920 ಮಂದಿಯ ವರದಿ ನೆಗೆಟಿವ್ ಮತ್ತು […]

ದ.ಕ. ಜಿಲ್ಲೆಯಲ್ಲಿ ಮೇ 7 ರಿಂದ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮ, ಮೇ 15ರ ಬಳಿಕ ಸಂಪೂರ್ಣ ಬಂದ್

Thursday, May 6th, 2021
Rajendra

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮೇ 7 ರಿಂದ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದ್ದು, ಈ ಅವಧಿಯಲ್ಲಿ ಅಗತ್ಯ ಸೇವೆಗಳು ಬೆಳಿಗ್ಗೆ 6 ರಿಂದ  9 ರವರೆಗೆ ಮಾತ್ರ ಲಭ್ಯವಿದೆ ಮತ್ತು ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದೆ.  ಮೇ 15ರ ಬಳಿಕ ಮದುವೆ ಸಮಾರಂಭಗಳಿವೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತದ ಗುರುವಾರದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಶನಿವಾರ ಹಾಗೂ ರವಿವಾರದಂದು ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ಎಲ್ಲಾ ಚಟುವಟಿಕೆಗಳು ಸ್ತಬ್ಧವಾಗಿರಲಿವೆ. ಈ ಅವಧಿಯಲ್ಲಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಗಳ ಸೇವೆ ಲಭ್ಯ ಇರಲಿದೆ. […]

ಪತ್ರಕರ್ತರೇ ಹುಷಾರ್..! : ಡಿಸೆಂಬರ್ ವರೆಗೂ ತಪ್ಪಿದ್ದಲ್ಲ ಡೆಡ್ಲಿ ಕಾಟ..

Saturday, May 1st, 2021
Manjunatha

ಬೆಂಗಳೂರು: ಕೊರೊನಾದಿಂದ ಮುಕ್ತಿ ಯಾವಾಗ ಎನ್ನುವವರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಡೆಡ್ಲಿ ಕಾಟ ಡಿಸೆಂಬರ್ ವರೆಗೂ ತಪ್ಪಿದ್ದಲ್ಲ ಹಾಗಾಗಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಸೋಂಕು ಬಾರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪರಿಪಾಲನೆ ಮಾಡದೆ ಹೋದರೆ, ಸಮಸ್ಯೆ ಇನ್ನೂ ತೀವ್ರವಾಗಿ ಕಾಡಬಹುದು ಎಂದು ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗಿರಬೇಕಾದ ಮುನ್ನೆಚ್ಚರಿಕೆ ವಿಷಯದ ಬಗ್ಗೆ ಅವರು […]

ಕೇರಳದಲ್ಲಿ ಕೊರೋನ ಉಲ್ಬಣ ಜಿಲ್ಲೆಗೆ ಆಗಮಿಸುವ ಜನರಿಗೆ ತಪಾಸಣೆಗೊಳಪಡಸಲು ಕ್ರಮ

Monday, February 8th, 2021
KV Rajendra

ಮಂಗಳೂರು : ಪಕ್ಕದ ರಾಜ್ಯ ಕೇರಳದಲ್ಲಿ ಕೊರೋನ ಉಲ್ಬಣ ವಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಗೆ ಆಗಮಿಸುವ ಅಲ್ಲಿನವರನ್ನು ಸೂಕ್ತ ತಪಾಸಣೆಗೊಳಪಡಿಸಿ ಜಿಲ್ಲೆಯಲ್ಲಿ ಕೊರೋನ ಹರಡದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆಯುಷ್ ಕಚೇರಿಯಲ್ಲಿ ಇಂದು ಪೊಲೀಸ್ ಆಯುಕ್ತರು, ಡಿಎಚ್‌ಒ ಜತೆ ನಡೆಸಲಾದ ತುರ್ತು ಸಭೆಯ ಬಳಿಕ ಸುದ್ದಿಗಾರರ ಪ್ರಶ್ನೆಗೆ ಡಾ. ರಾಜೇಂದ್ರ ಈ ಪ್ರತಿಕ್ರಿಯೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ದಿನನಿತ್ಯ ಕೆಲಸ ಕಾರ್ಯ, ಕಾಲೇಜುಗಳಿಗಾಗಿ ಕೇರಳದಿಂದ ಕರ್ನಾಟಕಕ್ಕೆ ಬರುವುದರಿಂದ ಕೋವಿಡ್ ಅನ್‌ಲಾಕ್ ಮಾರ್ಗಸೂಚಿಗಳನ್ನು […]

ಕೋವಿಡ್ ಸೋಂಕಿನ 2ನೇ ಅಲೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ – ಡಾ. ರಾಜೇಂದ್ರ ಕೆ.ವಿ

Saturday, January 16th, 2021
Rajendra KV

ಮಂಗಳೂರು : ಕೋವಿಡ್ ಸೋಂಕಿನ ಎರಡನೇ ಅಲೆ ಉಂಟಾಗದಂತೆ ತಡೆಯಲು ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು. ವಿದೇಶಗಳಲ್ಲಿ ಈಗಾಗಲೇ ಕೊರೋನಾದ ಎರಡನೇ ಅಲೆ ಬಾಧಿಸಿ ಹೆಚ್ಚು ಜನರು ಸೋಂಕಿತರಾಗಿದ್ದಾರೆ. ಈ ವರೆಗೆ ನಮ್ಮ ದೇಶದಲ್ಲಿ ಎರಡನೇ ಅಲೆ ಕಂಡುಬಂದಿರುವುದಿಲ್ಲ ಆದರೂ ಸಹ ನಿರ್ಲಕ್ಷ್ಯ ವಹಿಸದೇ ಕೊರೊನಾ ಎರಡನೇ ಅಲೆಯನ್ನು […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠೀ, ಬ್ರಹ್ಮರಥೋತ್ಸವ

Sunday, December 20th, 2020
Kukke subrahmanya

ಸುಬ್ರಹ್ಮಣ್ಯ : ದಕ್ಷಿಣ ಭಾರತದ ಪ್ರಮುಖ ನಾಗ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠೀ ಮಹೊತ್ಸವ ಸಂಪನ್ನಗೊಂಡಿದೆ. ದೇವಳದ ರಾಜಮಾರ್ಗದಲ್ಲಿ ಯಶಸ್ವಿನಿ ಅನೆಯೊಂದಿಗೆ ಸಂಭ್ರಮದ ಬ್ರಹ್ಮರಥೋತ್ಸವ ಜರಗಿತು.ಕೋಟ್ಯಾಂತರ ಭಕ್ತರ ಅರಾಧ್ಯ ದೈವ ಸುಬ್ರಹ್ಮಣ್ಯ ಸ್ವಾಮಿ ಮುಂಜಾನೆಯ 7.25 ರ ಧನು ಲಗ್ನ ಸುಮುಹೂರ್ತದಲ್ಲಿ ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದಾನೆ. ಕೋವಿಡ್ ಕಾರಣದಿಂದಾಗಿ ಪರ ಊರಿನ ಭಕ್ತರಿಗೆ ಪ್ರವೇಶ ನಿರ್ಬಂನಿರ್ಬಂಧವಿದ್ದರೂ ಕೂಡಾ ಅಪಾರ ಸಂಖ್ಯೆಯಲ್ಲಿ ಭಕ್ತರು  ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮ ರಥೋತ್ಸವವನ್ನು ನೋಡಿ ಕಣ್ತುಂಬಿಕೊಂಡರು. […]

ಕೊರೋನಾ ಸೋಂಕು : ದಕ್ಷಿಣ ಕನ್ನಡ – 447, ಸಾವು 7 ಮಂದಿ, ಉಡುಪಿ – 207

Wednesday, October 7th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬುಧವಾರ 447 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ, 7 ಮಂದಿ ಸಾವನ್ನಪ್ಪಿದ್ದಾರೆ.  ಉಡುಪಿ ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 207 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ ಜಿಲ್ಲೆಯಲ್ಲಿ 588ಕ್ಕೆ ತಲುಪಿದೆ. ಈ ನಡುವೆ ಗುಣಮುಖರಾದವರ ಸಂಖ್ಯೆ ಉತ್ತಮವಾಗಿದ್ದು, ಬುಧವಾರ ಒಂದೇ ದಿನ 1,214 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ಗುಣಮುಖರಾದವರ ಸಂಖ್ಯೆ 20 ಸಾವಿರಕ್ಕೇರಿದೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ […]

ಕೋವಿಡ್ ಹೆಸರಿನಲ್ಲಿ ರಾಜ್ಯ ಸರಕಾರ ನಡೆಸಿರುವ ಭ್ರಷ್ಟಾಚಾರ ತಿಳಿಸಲು ಕಾಂಗ್ರೆಸ್ನಿಂದ ಲೆಕ್ಕಕೊಡಿ ಅಭಿಯಾನ

Sunday, September 13th, 2020
saleem

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಲೆಕ್ಕಕೊಡಿ ಅಭಿಯಾನದೊಂದಿಗೆ ರಾಜ್ಯ ಸರಕಾರ ಕೋವಿಡ್ ಹೆಸರಿನಲ್ಲಿ ನಡೆಸಿರುವ ಭ್ರಷ್ಟಾಚಾರ ವನ್ನು ಜನರಿಗೆ ತಿಳಿಸುವ ಅಭಿಯಾನ ವನ್ನು ಹಮ್ಮಿಕೊಂಡಿದೆ  ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ. ರಾಜ್ಯಕ್ಕೆ ಜಿ.ಎಸ್ ಟಿ ಮೂಲಕ ಬರಬೇಕಾದ ಪಾಲು ಬಂದಿಲ್ಲ, ನೆರೆ ಪರಿಹಾರ ವಾಗಿ ಕಳೆದ ವರ್ಷ ಬರಬೇಕಾದ 50 ಸಾವಿರ ಕೋಟಿ ರೂ ನಷ್ಟ ಆಗಿತ್ತು. ಕೇಂದ್ರ ಸರಕಾರದಿಂದ ಕೇವಲ 1800 ಕೋಟಿ ನೆರವು ಮಾತ್ರ ಬಂದಿದೆ. ಈ ಬಾರಿ 10 ಸಾವಿರ […]

ಆರೋಗ್ಯ ಸಚಿವ ಬಿ. ಶ್ರೀರಾಮುಲು ಗೆ ಮಾತೃ ವಿಯೋಗ

Friday, August 21st, 2020
Ramulu mother

ಬಳ್ಳಾರಿ: ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿ ದ  ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಬುಧವಾರ ತಡರಾತ್ರಿ ವಯೋಸಹಜ ಕಾರಣದಿಂದ ನಿಧನರಾದರು. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾದ ಬಳಿಕ ಬಳ್ಲಾರಿಯ ತಮ್ಮ ನಿವಾಸಕ್ಕೆ ತೆರಳಿದ್ದರು. ತಾಯಿಯ ನಿಧನದ ಬಗೆಗೆ ಸಚಿವ ಶ್ರೀರಾಮುಕು ಟ್ವೀಟ್ ಮಾಡಿದ್ದು “ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ […]

ಬಿಜೆಪಿ ಧುರೀಣ ಸಿ. ಗುರುಸ್ವಾಮಿ ಕೋವಿಡ್ ನಿಂದ ಸಾವು

Wednesday, August 19th, 2020
bjp MLA

ಚಾಮರಾಜನಗರ: ಚಾಮರಾಜನಗರ ಮಾಜಿ ಶಾಸಕ, ಬಿಜೆಪಿ ಧುರೀಣ ಸಿ. ಗುರುಸ್ವಾಮಿ (68) ಬುಧವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಆಗಸ್ಟ್ 5 ರಂದು ಕೋವಿಡ್ ದೃಢಪಟ್ಟ ಹಿನ್ನೆಲೆ ಅವರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಬುಧವಾರ ಬೆಳಿಗ್ಗೆ ಮೃತರಾದರು ಮೃತರು  ಪತ್ನಿ, ಇಬ್ಬರು ಪುತ್ರಿಯ ರನ್ನು ಅಗಲಿದ್ದಾರೆ. ವಕೀಲರಾಗಿದ್ದ ಸಿ. ಗುರುಸ್ವಾಮಿಯವರು ಜನತಾ ಪಕ್ಷ, ಜನತಾದಳದಿಂದ ರಾಜಕೀಯ ಪ್ರವೇಶಿಸಿದ್ದು ಮೈಸೂರು ಜಿಲ್ಲಾ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಗುರುಸ್ವಾಮಿ ಹಿರಿಯ ರಾಜಕೀಯ ನಾಯಕ, ಕೇಂದ್ರದ ಮಾಜಿ ಸಚಿವ […]