Blog Archive

ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಕುದ್ರೋಳಿಯಲ್ಲಿ ಸ್ವಾಗತಿಸಿದ ಜನಾರ್ದನ ಪೂಜಾರಿ

Friday, September 29th, 2017
ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಕುದ್ರೋಳಿಯಲ್ಲಿ ಸ್ವಾಗತಿಸಿದ ಜನಾರ್ದನ ಪೂಜಾರಿ

ಮಂಗಳೂರು : ಕಳೆದ ಐದಾರು ವರ್ಷಗಳಿಂದ ನಿರಂತರವಾಗಿ ನವರಾತ್ರಿ ಸಂದರ್ಭದಲ್ಲಿ ಕುದ್ರೋಳಿ ಕ್ಷೇತ್ರಕ್ಕೆ ಡಾ ಕಲ್ಲಡ್ಕ ಪ್ರಭಾಕರ ಭಟ್ ಬೇಟಿ ನೀಡುತ್ತಾ ಬಂದಿದ್ದಾರೆ ಅಂತೆಯೇ  ಈ ಬಾರಿಯೂ ಭಾಗಿಯಾಗಿದ್ದರು. ಪ್ರಭಾಕರ್ ಭಟ್ ಅವರನ್ನು ಸ್ವಾಗತಿಸಿದ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು, ಕಾಂಗ್ರೆಸ್ ಸರ್ಕಾರದಿಂದ ಆಗಿರುವ ತೊಂದರೆಗೆ ಕ್ಷಮೆಯಾಚಿಸಿದ ಘಟನೆ ನಡೆಯಿತು. ಆರೆಸ್ಸೆಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಪತ್ನಿ ಸಮೇತರಾಗಿ ಗುರುವಾರ ಸಂಜೆ ಶ್ರೀಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ಭೇಟಿ ನೀಡಿದರು. ಸುಮಾರು ಇಪ್ಪತ್ತಕ್ಕೂ ಹೆಚ್ಚು […]

ತಾನೊಬ್ಬ ಸರ್ವಧರ್ಮ ಪ್ರೇಮಿ ಎಂದು ರೈ ಬಿಂಬಿಸುವುದು ಓಟಿಗಾಗಿ ಮಾತ್ರ : ಹರಿಕೃಷ್ಣ ಬಂಟ್ವಾಳ

Wednesday, June 28th, 2017
Harikrishna Bantwal

ಮಂಗಳೂರು : ತಾನೊಬ್ಬ ಸರ್ವಧರ್ಮ ಪ್ರೇಮಿ ಎಂದು ಹೇಳುವ ಸಚಿವ ರಮಾನಾಥ ರೈ, ವಾಸ್ತವದಲ್ಲಿ ಹೃದಯದಿಂದ ಯಾರನ್ನೂ ಪ್ರೀತಿಸುವುದಿಲ್ಲ. ಸಾಮರಸ್ಯವನ್ನು ಬಯಸುವುದಿಲ್ಲ. ಒಂದು ವೇಳೆ ಎಲ್ಲರನ್ನೂ ಪ್ರೀತಿಸಿ, ಸಾಮರಸ್ಯ ಬಯಸುವವರಾಗಿದ್ದರೆ ನಾಲ್ಕು ವರ್ಷದ ಅವಧಿಯಲ್ಲಿ ಎಲ್ಲಾ ಧರ್ಮಗಳ ದರ್ಮಗುರುಗಳನ್ನು ಕರೆಸಿ ಸಾಮರಸ್ಯ ಸಭೆ ನಡೆಸುತ್ತಿದ್ದರು. ಆದರೆ ಅವರು ಧರ್ಮಗುರುಗಳ ಬಳಿ ಹೋಗುವುದು ಓಟಿಗಾಗಿ ಮಾತ್ರ ಎಂದು ಸಾಮಾಜಿಕ ಮುಂದಾಳು ಹರಿಕೃಷ್ಣ ಬಂಟ್ವಾಳ ಆರೋಪಿಸಿದ್ದಾರೆ. ಪತ್ರಿಕಾಘೋಷ್ಠಿಯಲ್ಲಿ  ಮಾತನಾಡಿದ  ಬಂಟ್ವಾಳ್ ಮುಸ್ಲಿಮರನ್ನು ಓಲೈಸಲು ಅಧಿಕಾರಿಗಳನ್ನು ಕರೆಯಿಸಿ ತನಗೆ ಬೇಕಾದ ಹಾಗೆ […]

ಕಾಂಗ್ರೆಸ್ ಪಕ್ಷ ಉಳಿಯಬೇಕಾದ್ರೆ ರಾಜ್ಯದಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯಾಗಬೇಕು: ಪೂಜಾರಿ

Friday, February 3rd, 2017
Janardhana-Poojary

ಮಂಗಳೂರು: ರಾಜ್ಯದಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಮತ್ತೆ ಕೇಳಲಾರಂಭಿಸಿದೆ. ಅದಕ್ಕೆ ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಧ್ವನಿಗೂಡಿಸಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಉಳಿಯಬೇಕಾದ್ರೆ ಗೃಹ ಸಚಿವ ಪರಮೇಶ್ವರ್ ಸಿಎಂ ಆಗಬೇಕು. ಈ ಬಗ್ಗೆ ಜನರ ಅಪೇಕ್ಷೆಯೂ ಇದೆ. ಆದರೆ ಪಕ್ಷದಲ್ಲಿ ಕೆಲವರು ಸರ್ಕಸ್ ಮಾಡುತ್ತಿದ್ದರೆ, ಪಕ್ಷದಲ್ಲಿ ಶನಿಯ ಪ್ರಭಾವ ಇದೆ, ನಮಗೆ ಶನಿ ಹಿಡಿದಿದೆ ಎಂದು ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿಎಂ ಸೇರಿ ಕಾಂಗ್ರೆಸ್‌‌‌ […]

ಎಸ್. ಎಂ. ಕೃಷ್ಣ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು ದೇಶದಲ್ಲಿ ಪಕ್ಷಕ್ಕೆ ದೊಡ್ಡ ಹೊಡೆತ ಆಗಲಿದೆ: ಜನಾರ್ದನ ಪೂಜಾರಿ

Monday, January 30th, 2017
Janardhana-Poojary

ಮಂಗಳೂರು: ಮಾಜಿ ಸಿಎಂ ಎಸ್. ಎಂ. ಕೃಷ್ಣ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರಿಂದ ಪಕ್ಷಕ್ಕೆ ಭಾರಿ ನಷ್ಟವಾಗಿದ್ದು, ದೇಶದಲ್ಲಿ ಪಕ್ಷಕ್ಕೆ ದೊಡ್ಡ ಹೊಡೆತ ಆಗಲಿದೆ ಎಂದು ಕಾಂಗ್ರೆಸ್‌‌ನ ಹಿರಿಯ ನಾಯಕ ಜನಾರ್ದನ ಪೂಜಾರಿ ಪ್ರತಿಕ್ರಿಯಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೃಷ್ಣ ಅವರ ರಾಜೀನಾಮೆಯಿಂದ ಪಕ್ಷಕ್ಕೆ ಮುಂದೆ ದೊಡ್ಡ ಗಂಡಾಂತರ ಬರಲಿದೆ ಎಂದರು. ಕೃಷ್ಣ ಮುತ್ಸದ್ದಿ, ಸಮಾಧಾನಿ, ಒಳ್ಳೆಯ ಮನುಷ್ಯ, ಇಂತಹ ವ್ಯಕ್ತಿಯನ್ನು ಪಕ್ಷ ನಡೆಸಿಕೊಂಡ ರೀತಿ ಸರಿ ಇಲ್ಲ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ […]

ಬೇಜವಾಬ್ದಾರಿ ಹೇಳಿಕೆ ನೀಡುವವರು ಮೊದಲು ಅಧಿಕಾರ ಬಿಟ್ಟು ಹೋಗಲಿ: ಸಿಎಂಗೆ ಪೂಜಾರಿ ತರಾಟೆ

Friday, January 6th, 2017
janardhana-poojary

ಮಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಇತ್ತೀಚೆಗೆ ನಿಧನರಾದ ಸಚಿವ ಮಹಾದೇವ ಪ್ರಸಾದ್ ಅವರ ಪತ್ನಿ ಅಥವಾ ಮಗನಿಗೆ ಟಿಕೆಟ್ ನೀಡಬೇಕು. ಅನುಕಂಪದ ಮತವಾದರೂ ಬರುತ್ತವೆ. ಅದನ್ನು ಬಿಟ್ಟು ಅವರ ಕ್ಷೇತ್ರದಲ್ಲಿ ಬೇರೆ ಯಾರನ್ನಾದರೂ ನಿಲ್ಲಿಸಿದರೆ ಕಾಂಗ್ರೆಸ್‌ಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪ್ರತಿಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವತ್ತೂ ಬೆಲೆ ಕೊಡುವುದಿಲ್ಲ. ಆದರೆ, ಈ ಮಾತಿನ ವಿರುದ್ಧ ಸಿಎಂ ನಡೆದರೆ […]

ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ: ಜನಾರ್ದನ ಪೂಜಾರಿ

Thursday, December 29th, 2016
Janardana Poojary

ಮಂಗಳೂರು: ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತವೆಂದು ಕಾಂಗ್ರೆಸ್‌ನವರೇ ಆದ ಜನಾರ್ದನ ಪೂಜಾರಿ ಪಕ್ಷದ ವಿರುದ್ಧವೇ ಭವಿಷ್ಯ ನುಡಿದಿದ್ದಾರೆ. ನಂಜನಗೂಡು ಉಪಚುನಾವಣೆಗೆ ಕಾಂಗ್ರೆಸ್‌‌ನಿಂದ ಎಷ್ಟೇ ಒಳ್ಳೆಯ ಅಭ್ಯರ್ಥಿ ಹಾಕಿದರು ಪಕ್ಷ ಸೋಲುತ್ತದೆ. ಶ್ರೀನಿವಾಸ್ ಪ್ರಸಾದ್ ಪಕ್ಷದ ಮಾನ ಹರಾಜು ಹಾಕುತ್ತಿದ್ದಾರೆ. ಮುಖ್ಯಮಂತ್ರಿ ಈಗಲಾದರು ಎಚ್ಚೆತ್ತುಕೊಳ್ಳಿ. ಜನರಿಂದ, ಕಾರ್ಯಕರ್ತರಿಂದ ನೀವು ಅಧಿಕಾರಕ್ಕೆ ಬಂದಿದ್ದೀರಾ. ಕಾಂಗ್ರೆಸ್‌ನಲ್ಲಿ ಗೊಂದಲ ಇರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಧೂಳಿಪಟವಾಗುವ ಎಲ್ಲ ಲಕ್ಷಣ ಗೋಚರಿಸುತ್ತಿದೆ ಎಂದು ಸ್ವಪಕ್ಷದ ವಿರುದ್ಧವೇ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ. ನನಗೆ […]

ನ್ಯಾಯಾಲಯದಲ್ಲಿ ಕೊಳೆಯುತ್ತಿರುವ ಪ್ರಕರಣಗಳನ್ನು ಕೂಡಲೇ ಇತ್ಯರ್ಥಗೊಳಿಸಬೇಕು: ಜನಾರ್ದನ ಪೂಜಾರಿ

Monday, December 26th, 2016
poojary

ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಗೆದ್ದು ಬಂದಾಗ ಐದು ವರ್ಷಗಳವರೆಗೆ ಆಸ್ತಿ ತೆರಿಗೆ ಹೆಚ್ಚಿಸುವುದಿಲ್ಲ ಎಂದು ಜನತೆಗೆ ವಾಗ್ದಾನ ಮಾಡಿತ್ತು. ಆದರೆ, ತನ್ನ ವಾಗ್ದಾನವನ್ನು ತಾನೇ ಮರೆತಿದೆ. ಪಾಲಿಕೆ ಸದಸ್ಯರ ಈ ತಪ್ಪಿನಿಂದಾಗಿ ಅಂದು ಪ್ರತಿಜ್ಞೆ ವಿಧಿ ಬೋಧಿಸಿದ ನಾನೇ ಜನರಲ್ಲಿ ಕ್ಷಮೆ ಕೋರುತ್ತೇನೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕಾಂಗ್ರೆಸ್ ಜನರಿಗೆ ಮಾಡುವ ಅತ್ಯಂತ ದೊಡ್ಡ ಮೋಸ. ಜನತೆಯ ವಿಶ್ವಾಸವನ್ನೇ ಧೂಳಿಪಟ ಮಾಡಲಾಗಿದೆ. ತಮ್ಮ […]

ಮೇಟಿ ಅವರ ರಾಸಲೀಲೆ ಪ್ರಕರಣದ ತನಿಖೆಯನ್ನು ಸಿಬಿಐಗೊಪ್ಪಿಸಿ ಕ್ರಮ ಕೈಗೊಳ್ಳಬೇಕು: ಜನಾರ್ದನ ಪೂಜಾರಿ

Friday, December 16th, 2016
janardhana-poojary

ಮಂಗಳೂರು: ಮೇಟಿ ಅವರ ರಾಸಲೀಲೆ ಪ್ರಕರಣದ ತನಿಖೆಯನ್ನು ಸಿಬಿಐಗೊಪ್ಪಿಸಬೇಕು ಹಾಗೂ ಇದೇ ರೀತಿ ಇನ್ನಿಬ್ಬರು ಸಚಿವರು, ಮೂವರು ಶಾಸಕರು ಕಾಮ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಆರ್‌ಟಿಐ ಕಾರ್ಯಕರ್ತ ನೀಡಿರುವ ಮಾಹಿತಿಯಂತೆ ಅವರ ಹೆಸರುಗಳನ್ನು ಬಹಿರಂಗಪಡಿಸಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌‌ ಹಿರಿಯ ನಾಯಕ ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಟಿಯ ದುರ್ನಡತೆಯಿಂದಾಗಿ ರಾಷ್ಟ್ರ ಮಟ್ಟದಲ್ಲೇ ಅಲ್ಲೋಲ ಕಲ್ಲೋಲವುಂಟಾಗಿದೆ. ಪಕ್ಷಕ್ಕೂ ಹಾನಿಯಾಗಿದೆ. ಪ್ರಕರಣದ ಸಿಡಿ ಬಿಡುಗಡೆಯಾಗುವ ಮೊದಲೇ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಅವರೊಂದಿಗೆ ಮಾತನಾಡದೆ, ಸಿಡಿ ತರಿಸಿಕೊಳ್ಳಲು ಮುಂದಾಗದೇ […]

ಸಿಎಂಗೆ ನೈತಿಕತೆ ಎಂಬುದು ಇದ್ದಲ್ಲಿ ಅಬಕಾರಿ ಸಚಿವ ಹೆಚ್.ವೈ.ಮೇಟಿ ವಿರುದ್ಧ ತಕ್ಷಣ ರಾಜೀನಾಮೆ ಪಡೆಯಬೇಕು: ಜನಾರ್ದನ ಪೂಜಾರಿ

Tuesday, December 13th, 2016
Janardana poojay

ಮಂಗಳೂರು: ಅಬಕಾರಿ ಸಚಿವ ಹೆಚ್.ವೈ.ಮೇಟಿ ವಿರುದ್ಧದ ರಾಸಲೀಲೆ ಆರೋಪದಿಂದ ಕಾಂಗ್ರೆಸ್ ಪಕ್ಷಕ್ಕೆ ಕಳಂಕವಾಗಿದೆ. ಸಿಎಂಗೆ ನೈತಿಕತೆ ಎಂಬುದು ಇದ್ದಲ್ಲಿ ತಕ್ಷಣ ಅವರಿಂದ ರಾಜೀನಾಮೆ ಪಡೆಯಬೇಕು. ರಾಜೀನಾಮೆ ನೀಡಲು ಒಪ್ಪದಿದ್ದಲ್ಲಿ ಪಕ್ಷದಿಂದಲೇ ಕಿತ್ತುಹಾಕಬೇಕೆಂದು ಕಾಂಗ್ರೆಸ್‌‌ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷಕ್ಕೆ ಕಳಂಕ ತರುವವರನ್ನು ಪಕ್ಷದಿಂದ ಉಚ್ಛಾಟಿಸಲಿಕ್ಕಾಗದಿದ್ದಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿರಲು ಅನರ್ಹರು ಎಂದು ವ್ಯಂಗ್ಯವಾಡಿದ್ದಾರೆ. ಅಧಿಕಾರಿ ಭೀಮಾನಾಯ್ಕ್‌‌ ಮೇಲೆ ಕ್ರಮ ಕೈಗೊಳ್ಳದ ಸಿಎಂ, ಈಗಾಗಲೇ ತಮ್ಮ ಜ್ಞಾನವನ್ನು ಅಡವಿಟ್ಟಿದ್ದಾರೆ ಎಂದ ಅವರು, ಮಂತ್ರಿಗಳ […]

ಎತ್ತಿನಹೊಳೆ ಯೋಜನೆ ಹಗರಣದಲ್ಲಿ ಶಾಮೀಲಾಗಿರುವ ಮೂವರು ಸಚಿವರನ್ನು ಕೈ ಬಿಡಬೇಕು: ಜನಾರ್ದನ ಪೂಜಾರಿ

Wednesday, November 30th, 2016
Janardhana-Poojary

ಮಂಗಳೂರು: ಬೆಂಗಳೂರಿನಲ್ಲಿ ಭಾನುವಾರ ನಡೆದಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಂಡ ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಕಪ್ಪುಹಣ ವ್ಯಯ ಮಾಡಲಾಗಿದೆ ಎಂದು ಪೂಜಾರಿ ಆರೋಪಿಸಿದರು. ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರ ಸಮಾವೇಶದಲ್ಲಿ ಜನರಿಗೆ ಹಣ ಕೊಟ್ಟು ಕರೆಸಿಲ್ಲ ಎಂಬುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಂದು ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು. ಅಮಿತ್ ಶಾ ರಾಜ್ಯಕ್ಕೆ ಬರುವಾಗ ಕಪ್ಪು ಹಣ ಬಿಳಿಯಾಗಿದೆ. ಯಡಿಯೂರಪ್ಪ ಅವರಂತಹ ನಾಯಕ ರಾಜ್ಯದಲ್ಲಿಲ್ಲ. ಅವರು ಸ್ವಚ್ಛ […]