ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಅಗಲಿದ ಪತ್ರಕರ್ತ ಮನೋಹರ ಪ್ರಸಾದ್ ಗೆ ಶ್ರದ್ಧಾಂಜಲಿ

Saturday, March 2nd, 2024
journalist

ಮಂಗಳೂರು : ಬಹುಮುಖ ಪ್ರತಿಭೆಯ ಪತ್ರಕರ್ತ ಮನೋಹರ ಪ್ರಸಾದ್ ಜಿಲ್ಲಾಡಳಿತ ಹಾಗೂ ಪತ್ರಕರ್ತರ ನಡುವಿನ ಕೊಂಡಿಯಾಗಿದ್ದರು ಎಂದು ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ ತಿಳಿಸಿದ್ದಾರೆ. ಅವರು ಅಗಲಿದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ರವರಿಗೆ ನಗರದ ಪತ್ರಿಕಾಭವನದಲ್ಲಿಂದು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ ಕ್ಲಬ್,ಪತ್ರಿಕಾ ಭವನಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ನುಡಿನಮನದ ಮೂಲಕ ಶ್ರದ್ಧಾಂಜಲಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು. ಮನೋಹರ ಪ್ರಸಾದ್ ಪತ್ರ ಕರ್ತರು ಮಾತ್ರವಲ್ಲದೆ ಓರ್ವ ಉತ್ತಮ ನಿರೂಪಕರಾಗಿದ್ದರು.ಅವರು ತಮ್ಮ ನಿರೂಪಣೆಯ […]

ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ: ಜಿಲ್ಲಾಧಿಕಾರಿ

Thursday, February 22nd, 2024
ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ: ಜಿಲ್ಲಾಧಿಕಾರಿ

ಮಂಗಳೂರು : ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತವಾದ ಸಂವಿಧಾನ. ಭಾರತೀಯರಲ್ಲಿ ಸಮಾನತೆ, ಭ್ರಾತೃತ್ವ ಮತ್ತು ಸಮಾನ ಅವಕಾಶಗಳನ್ನು ಪ್ರತಿಪಾದಿಸುವ ಈ ಗ್ರಂಥವು ಭಾರತೀಯರ ಪ್ರಜಾಸತ್ತಾತ್ಮಕ ಧೋರಣೆಗಳಿಗೆ ಆಧಾರವಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು. ಅವರು ಫೆ. 22 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್‍ಮೆಂಟ್‍ನ ಎನ್‍ಎಸ್‍ಎಸ್ ಘಟಕದ ವತಿಯಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಭಾರತೀಯರಲ್ಲಿ ಸಮಾನತೆ, […]

ಪಿಎಂ ಜನಮನ್ ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಸೂಚನೆ

Friday, January 5th, 2024
DC- Mullai Muhilan

ಮಂಗಳೂರು : ದುರ್ಬಲ ಬುಡಕಟ್ಟು ಸಮುದಾಯದವರ ಸಾಮಾಜಿಕ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಅಭಿಯಾನ (ಪಿಎಂ ಜನಮನ್) ಯೋಜನೆಯಡಿ ಅಭಿವೃದ್ಧಿ ಮಿಷನ್ ಪ್ರಾರಂಭಿಸಲಾಗಿದ್ದು, ಇದರ ಯಶಸ್ವಿಗೆ ಎಲ್ಲ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಕುಮಾರ್ ತಿಳಿಸಿದ್ದಾರೆ. ಅವರು ಈ ಸಂಬಂಧ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲ ಇಲಾಖೆಗಳು ಪರಿಶಿಷ್ಟ ಪಂಗಡದ ಕೊರಗ ಸಮುದಾಯಕ್ಕೆ ಸಂಬಂಧಿಸಿದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಹುಡುಕಿ ಯೋಜನೆಯ […]

ಡೆಂಗ್ಯೂ ಹಾಗೂ ನಿಫಾ ವೈರಸ್ ಕುರಿತು ಆತಂಕ ಬೇಡ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Friday, September 15th, 2023
ಡೆಂಗ್ಯೂ ಹಾಗೂ ನಿಫಾ ವೈರಸ್ ಕುರಿತು ಆತಂಕ ಬೇಡ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು : ಜಿಲ್ಲೆಯಲ್ಲಿ ಡೆಂಗ್ಯೂ, ನಿಫಾ ವೈರಸ್ ಸೇರಿದಂತೆ ಮತ್ತಿತರ ಸಾಂಕ್ರಾಮಿಕ ರೋಗಗಳ ಲಕ್ಷಣ, ಹರಡುವಿಕೆ ನಿಯಂತ್ರಣ ಸೇರಿದಂತೆ ಚಿಕಿತ್ಸೆಯ ಬಗ್ಗೆ ಜನಸಾಮಾನ್ಯರಿಗೆ ಆರೋಗ್ಯ ಶಿಕ್ಷಣವನ್ನು ನೀಡಿ ಇವುಗಳ ನಿಯಂತ್ರಣಕ್ಕೆ ಆರೋಗ್ಯ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಡೆಂಗ್ಯೂ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮಲೇರಿಯ ನಿಯಂತ್ರಣದಂತೆ ಡೆಂಗ್ಯೂ ನಿಯಂತ್ರಣ ಮಾಡುವುದು ಅತೀ ಮುಖ್ಯ […]

ಶಾಲೆಗಳಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ: ಜಿಲ್ಲಾಧಿಕಾರಿ

Wednesday, March 16th, 2022
Ayushman

ಮಂಗಳೂರು : ಜಿಲ್ಲೆಯಾದ್ಯಂತ ಶಾಲೆಗಳಲ್ಲಿ ಮಕ್ಕಳಿಗೆ ಲಸಿಕಾ ಅಭಿಯಾನ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಹೇಳಿದರು. ಅವರು ನಗರದ ವೆನ್‍ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ಮಾನ್ ವಿಭಾಗದಲ್ಲಿ ಮಾ.16ರ ಬುಧವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಕೋರ್ಬೇ ವ್ಯಾಕ್ಸ್ ಲಸಿಕೆ ಮತ್ತು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವ ಮುನ್ನೆಚ್ಚರಿಕಾ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಾದ್ಯಂತ ಲಸಿಕೆಗಳು ಲಭ್ಯವಿದ್ದು, ಈಗಾಗಲೇ ಜನರು […]

 ಅನಿಲ ಟ್ಯಾಂಕರುಗಳು ರಾತ್ರಿ ಸಂಚರಿಸುವಂತಿಲ್ಲ, ನಿಗಾಕ್ಕೆ ಜಿಲ್ಲಾಧಿಕಾರಿ ಸೂಚನೆ

Monday, February 14th, 2022
LPG

ಮಂಗಳೂರು :- ನಿಗದಿ ಪಡಿಸಿರುವ (ಹಗಲು) ವೇಳೆಯಲ್ಲಿಯೇ ಅನಿಲ ಟ್ಯಾಂಕರುಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು. ಅವರು ಫೆ.14ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯನ್ನು ಹಾದೂಹೋಗುವ ಹೆದ್ದಾರಿಗಳಲ್ಲಿ ಗ್ಯಾಸ್ ಟ್ಯಾಂಕರುಗಳ ಅಸುರಕ್ಷಿತ ಚಾಲನೆ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ, ಅಲ್ಲದೇ ಅದು ಸಾರ್ವಜನಿಕರ ಸುಗಮ ಸಂಚಾರಕ್ಕೂ ಅನಾನುಕೂಲವಾಗುತ್ತದೆ, ಒಂದು ವೇಳೆ […]

ಮಕ್ಕಳ ಪಾಲನಾ ಸಂಸ್ಥೆಗಳನ ನೊಂದಾವಣೆ ಮಾಡುವುದು ಹಾಗೂ ನವೀಕರಣ ಮಾಡುವುದು ಕಡ್ಡಾಯ: ಜಿಲ್ಲಾಧಿಕಾರಿ

Saturday, January 29th, 2022
KV Rajendra

ಮಂಗಳೂರು : ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಲು ಕ್ರಮವಹಿಸುವಂತೆ ಸೂಚಿಸಿದರಲ್ಲದೆ ಕೂಡಲೇ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಅವರು ಜ. 29 ರ ಶನಿವಾರ ರಂದು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮಕ್ಕಳ ಪಾಲನಾ ಸಂಸ್ಥೆಗಳನ ನೊಂದಾವಣೆ ಮಾಡುವುದು ಹಾಗೂ ನವೀಕರಣ ಮಾಡುವುದು ಕಡ್ಡಾಯವಾಗಿದ್ದು ಕೂಡಲೇ […]

ರಾಷ್ಟ್ರ ಧ್ವಜದ ಅಪಮಾನವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Saturday, January 22nd, 2022
HJJ

ಮಂಗಳೂರು : ಗಣರಾಜ್ಯೋತ್ಸವದ ಸಮಯದಲ್ಲಿ ರಾಷ್ಟ್ರ ಧ್ವಜದ ಮೇಲಾಗುವ ಅಪಮಾನವನ್ನು ತಡೆಯಲು ಮತ್ತು ಉಚ್ಚ ನ್ಯಾಯಾಲಯದ ಆದೇಶದಂತೆ ಕಾರ್ಯಚರಣೆ ಮಾಡಲು ಹಾಗೂ ರಾಜ್ಯ ಸರ್ಕಾರದಿಂದ ಪ್ಲಾಸ್ಟಿಕ್ ಧ್ವಜದ ಮೇಲಿನ ನಿರ್ಬಂಧದ ನಿರ್ಣಯದ ಕುರಿತು ಕ್ರಮಕೆಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನ ಚುನಾವಣಾ ತಹಸೀಲ್ದಾರ್ ಕೆ.ಯಸ್ ದಯಾನಂದ ಇವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮತ್ತು ಕಮಿಷನರ್ ಕಚೇರಿಯ ಪೊಲೀಸ್ ಸಿಬಂಧಿ ಆದ ಶ್ರೀ ವರುಣ ಇವರ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ […]

ವೀಕೆಂಡ್ ಕರ್ಫ್ಯೂನಲ್ಲಿ ಏನೆಲ್ಲಾ ಇದೆ ಎಂಬ ಮಾಹಿತಿ ಇಲ್ಲಿದೆ

Wednesday, January 5th, 2022
weekend-curfew

ಮಂಗಳೂರು : ಐಟಿ ಕೈಗಾರಿಕೆಗಳು, ಇತರ ಕೈಗಾರಿಕೆಗಳು, ಬೀದಿಬದಿ ವ್ಯಾಪಾರ, ಆಹಾರ ದಿನಸಿ, ಹಣ್ಣುಹಂಪಲುಗಳು, ಡೈರಿ, ಹಾಲಿನ ಬೂತ್ ಗಳು, ಪಡಿತರ, ಆಹಾರ ಪೂರೈಕೆ ಮಾಡುವ ಸಂಸ್ಥೆಗಳು ವೀಕೆಂಡ್ ಕರ್ಫ್ಯೂನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು  ದ.ಕ. ಜಿಲ್ಲೆಯಲ್ಲಿ ಈ ವಾರದ ವೀಕೆಂಡ್‌ನಲ್ಲಿ ಹೊರಾಂಗಣದಲ್ಲಿ 200 ಜನರಿಗೆ (ಒಳಾಂಗಣ 100) ಸೀಮಿತಗೊಳಿಸಿ ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿರಲಿದೆ ಎಂದರು. ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ […]

7 ಅಭ್ಯರ್ಥಿಗಳ 13 ನಾಮಪತ್ರಗಳು ಕ್ರಮಬದ್ಧ, ಹಿಂಪಡೆಯಲು ನ.26 ರ ವರೆಗೆ ಅವಕಾಶ

Wednesday, November 24th, 2021
nomination Fie

ಮಂಗಳೂರು  :  ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಒಟ್ಟು 8 ಮಂದಿ ಅಭ್ಯರ್ಥಿಗಳು 14 ನಾಮಪತ್ರ ಸಲ್ಲಿಸಿದ್ದರು. ಅವುಗಳ ಪರಿಶೀಲನೆ ನ.24ರ ಬುಧವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಅವುಗಳಲ್ಲಿ 13 ನಾಮಪತ್ರಗಳು ಕ್ರಮಬದ್ಧವಾಗಿದ್ದು, ಒಬ್ಬರು ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕತಗೊಂಡಿದೆ. 13 ನಾಮಪತ್ರಗಳು ಕ್ರಮಬದ್ಧ: ಸಲ್ಲಿಕೆಯಾಗಿದ್ದ ಒಟ್ಟು 14 ನಾಮಪತ್ರಗಳಲ್ಲಿ 7 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ಅದರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ […]