Blog Archive

ನಿಗದಿತ ವೇಳೆಯಲ್ಲಿ ನ್ಯಾಯಬೆಲೆ ಅಂಗಡಿಗಳು ತೆರೆದಿರಬೇಕು: ಜಿಲ್ಲಾಧಿಕಾರಿ ಸೂಚನೆ

Wednesday, December 15th, 2010
ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್

ಮಂಗಳೂರು : ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 8ರಿಂದ 12ಗಂಟೆಯವರೆಗೆ, ಸಂಜೆ 4ರಿಂದ 8 ಗಂಟೆಯವರೆಗೆ ತೆರೆದಿರಬೇಕು. ಅಂಗಡಿಗಳಲ್ಲಿರುವ ಪದಾರ್ಥಗಳು ಮತ್ತು ಬೆಲೆ ಬಗ್ಗೆ ಸವಿವರ ಬೋರ್ಡ್ ಹಾಕಿರಬೇಕು; ತೂಕದಲ್ಲಿ ವ್ಯತ್ಯಾಸವಿದೆ ಎಂಬ ಆರೋಪಗಳು ಬರಬಾರದು ಎಂದು ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರು ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಮನ್ವಯ ಸಮಿತಿ ಪ್ರಗತಿ ಪರಿಶೀಲನೆ ಸಭೆಯನ್ನು ದ್ದೇಶಿಸಿ ಮಾತನಾಡುತ್ತಿದ್ದರು. ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಸಾರ್ವಜನಿಕರಿಂದ ಯಾವುದೇ ದೂರುಗಳು ಬರಬಾರದು ಎಂದು ಹೇಳಿದ ಅವರು, ಎರಡು ತಿಂಗಳಿಗೊಮ್ಮೆ […]

ಜಿಲ್ಲೆಯ ಎಲ್ಲ ಕಲ್ಲುಕೋರೆಯ ಕಾರ್ಮಿಕರ ಬಗ್ಗೆ ವರದಿ ನೀಡಲು ಏಳು ದಿನಗಳ ಕಾಲಮಿತಿ

Sunday, December 5th, 2010
ಜಿಲ್ಲಾಧಿಕಾರಿ ಸುಬೋಧ್ ಯಾದವ್

ಮಂಗಳೂರು :  ಕಾರ್ಮಿಕ ಇಲಾಖೆ ಕಂದಾಯ ಮತ್ತು ಗಣಿವಿಜ್ಞಾನ ಇಲಾಖೆಯ ಸಹಕಾರದಿಂದ ಜಿಲ್ಲೆಯ ಎಲ್ಲ ಕಲ್ಲುಕೋರೆಯಲ್ಲಿರುವ ಕಾರ್ಮಿಕ ವ್ಯವಸ್ಥೆಯ ಬಗ್ಗೆ ಏಳುದಿನಗಳೊಳಗೆ ಸಮಗ್ರ ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರು ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀ ಅಪ್ಪಯ್ಯ ಶಿಂಧಿಹಟ್ಟಿ ಅವರಿಗೆ ಸೂಚನೆ ನೀಡಿದರು. ಅಧಿಕಾರಿಗಳು ಮಾನವಹಕ್ಕು ಆಯೋಗದ ನಿರ್ದೇಶನದಂತೆ ಜೀತಪದ್ಧತಿ ಹಾಗೂ ಬಾಲಕಾರ್ಮಿಕ ವ್ಯವಸ್ಥೆಯ ನಿರ್ಮೂಲನಕ್ಕೆ ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಕಾನೂನನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದ್ದರೆ ವಿಟ್ಲದಲ್ಲಿ ವರದಿಯಾದ ಜೀತಪದ್ಧತಿಗೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ಇಳಿಕೆ-ಸುಭೋದ್ ಯಾದವ್

Saturday, December 4th, 2010
ಶಿಶು ಮರಣ ಪ್ರಕರಣ ಪರಿಶೀಲನಾ ಪದ್ಧತಿ

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮರ್ಪಕ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಿಂದಾಗಿ ಒಂದು ಸಾವಿರ ಶಿಶುಗಳ ಜನನದಲ್ಲಿ ಶಿಶು ಮರಣ ಪ್ರಮಾಣ 10-11 ಕ್ಕೆ ಇಳಿದಿದೆಯೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್ ತಿಳಿಸಿದ್ದಾರೆ. ಅವರು ಇಂದು ನಗರದ ವೆನ್ ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಯುನಿಸೆಫ್ ವತಿಯಿಂದ ಆಯೋಜಿಸಿದ್ದ ಶಿಶು ಮರಣ ಪ್ರಕರಣ ಪರಿಶೀಲನಾ ಪದ್ಧತಿ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ದಕ್ಷಿಣಕನ್ನಡ ಜಿಲ್ಲೆ […]

ಸ್ಥಳೀಯ ಆದ್ಯತೆ ಗಮನದಲ್ಲಿರಿಸಿ ಕಾರ್ಯಕ್ರಮ ರೂಪಿಸಿ-ಸುಭೋದ್ ಯಾದವ್

Saturday, November 13th, 2010
DC Subhod Yadav

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಕಲೆ ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ಕರಾವಳಿ ಉತ್ಸವವನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಸ್ಥಳೀಯರ ಅಭಿರುಚಿಯನ್ನು ಗಮನದಲ್ಲಿರಿಸಿ ಉತ್ಸವ ಅಚರಿಸಿ ಎಂದು ಜಿಲ್ಲಾಧಿಕಾರಿಗಳು ಹೇಳಿದರು.  ಡಿಸೆಂಬರ್ 22 ರಿಂದ ಉತ್ಸವ ಆಚರಿಸಲು ಸಕಲ ಸಿದ್ಧತೆಗಳು ನಡೆಸಿರುವ ಬಗ್ಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಹಾಗೂ ಕರಾವಳಿ ಉತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಶ್ರೀ ಸುಭೋದ್ ಯಾದವ್ ಅವರು ಪರಿಶೀಲಿಸಿದರು. ಅವರು ಇಂದು ತಮ್ಮ ಕಚೇರಿಯಲ್ಲಿ ಈ ಸಂಬಂಧ ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಬಾರಿಯ ಕರಾವಳಿ […]

ವರ್ಗಾವಣೆಗೊಂಡ ಜಿಲ್ಲಾಧಿಕಾರಿ ವೇಲುಸಾಮಿ ಪೊನ್ನುರಾಜ್ ಅವರಿಗೆ ನಾಗರಿಕರ ಆತ್ಮೀಯ ವಿದಾಯ.

Tuesday, October 26th, 2010
ಜಿಲ್ಲಾಧಿಕಾರಿ ವೇಲುಸಾಮಿ ಪೊನ್ನುರಾಜ್ ಅವರಿಗೆ ನಾಗರಿಕರ ಆತ್ಮೀಯ ವಿದಾಯ

ಮಂಗಳೂರು: ಸುಮಾರು ಒಂದೂವರೆ ವರ್ಷಕಾಲ ಉಡುಪಿಯಿಂದ ಮಂಗಳೂರಿಗೆ ಬಂದು ಇಲ್ಲಿ ಆಡಳಿತ ನಡೆಸಿ, ಈಗ ಶಿವಮೊಗ್ಗಕ್ಕೆ ವರ್ಗಾವಣೆಗೊಂಡು ಹೋಗುತ್ತಿರುವ ದ.ಕ (ಮಾಜಿ) ಜಿಲ್ಲಾಧಿಕಾರಿ ವಿ. ಪೊನ್ನುರಾಜ್ ಅವರಿಗೆ ಇಂದು ಹಾರ್ಧಿಕ ವಿದಾಯ, ಹಾಗೂ ಹೊಸದಾಗಿ ದಿಲ್ಲಿಯಿಂದ ಬಂದು ಇಲ್ಲಿ ಜಿಲ್ಲಾಧಿಕಾರಿಯಾಗಿರುವ ಸುಭೋಧಯಾದವ (ಐಎಎಸ್) ಅವರಿಗೆ ಸಂತೋಷಪೂರ್ವಕ ಸ್ವಾಗತ ಬಯಸುವ ಸಮಾರಂಭವೊಂದನ್ನು ಜಿಲ್ಲಾ ಕಛೇರಿಯ ಸಭಾಂಗಣದಲ್ಲಿ ಇಂದು ಮಂಗಳವಾರ ಬೆಳಿಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಅವರು ನಡೆಸಿಕೊಟ್ಟರು. ಶರ್ಮರು ತಮ್ಮ ಹಿಂದಿನ ಅನುಭವಗಳನ್ನು ನೆನೆಪಿಗೆ ತಂದುಕೊಂಡು ವರ್ಗಾವಣೆಯಾಗಿ […]