ಬಿಜೆಪಿಗೆ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ, ಭೋಪಾಲ್ ನಲ್ಲಿ ಭರ್ಜರಿ ರೋಡ್ ಶೋ ಹಾಗೂ ಸಮಾವೇಶ

Saturday, March 14th, 2020
BJP

ಭೋಪಾಲ್: ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ಈಗಾಗಲೇ ಭರ್ಜರಿ ರೋಡ್ ಶೋ ಹಾಗೂ ಸಮಾವೇಶ ನಡೆಸಿ ತಮ್ಮ ತಾಕತ್ತು ಪ್ರದರ್ಶಿಸಿದ್ದಾರೆ. ಆದರೆ ಸಿಂಧಿಯಾ ಬಿಜೆಪಿ ಮಡಲಿಲ್ಲಿರುವುದನ್ನು ಸಹಿಸದ ಕಾಂಗ್ರೆಸ್, ಮೇಲ್ನೋಟಕ್ಕೆ ಅವರ ವಿರುದ್ಧ ಪಿತೂರಿ ನಡೆಸುತ್ತಿರುವಂತೆ ತೋರುತ್ತಿದೆ. ಸಿಂಧಿಯಾ ಬಿಜೆಒಪಿ ಸೇರಿದ ಮರುದಿನವೇ ಅವರ ವಿರುದ್ಧದ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿದ್ದು ಇದಕ್ಕೆ ಸಾಕ್ಷಿ. ಇಷ್ಟೇ ಅಲ್ಲ ಸಿಂಧಿಯಾ ರೋಡ್ ಶೋ ವೇಳೆ ಕೆಲವು ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ […]

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Wednesday, March 11th, 2020
BJP

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ತ್ಯಜಿಸಿದ್ದ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನವದೆಹಲಿಯ ಪಕ್ಷದ ಪ್ರದಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಶಾಲು ಹೊದಿಸಿ ಸಿಂಧಿಯಾ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಪರಿವಾರ ಸೇರುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ಹೇಳಿದರು. ಸಿಂಧಿಯಾ ಅವರ ಅಜ್ಜಿ ರಾಜಮಾತಾ ಸಿಂಧಿಯಾ ಜನಸಂಘ ಹಾಗೂ ಬಿಜೆಪಿಯ […]

“ತಂದೆಯ ನಿರ್ಧಾರದ ಕುರಿತು ಹೆಮ್ಮೆಯಿದೆ” : ಜ್ಯೋತಿರಾದಿತ್ಯ ಸಿಂಧಿಯಾ ಪುತ್ರ ಮಹಾನಾರ್ಯಮನ್ ಸಿಂಧಿಯಾ

Wednesday, March 11th, 2020
sindhiya

ಭೋಪಾಲ್ : ಪಕ್ಷ ತೊರೆದಿರುವ ಮಾಜಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ನಡೆಯನ್ನು, ಹಲವರು ಬೆಂಬಲಿಸಿದರೆ ಇನ್ನೂ ಕೆಲವರು ಟೀಕಿಸಿದ್ದಾರೆ. ಸಿಂಧಿಯಾ ಅವರ ಎರಡನೇ ರಾಜಕೀಯ ಇನ್ನಿಂಗ್ಸ್ ಹೇಗಿರುತ್ತದೆ ಎಂಬುದನ್ನು ಕಾದು ನೋಡಲು ಪರ-ವಿರೋಧಿಗಳೂ ಕಾತರದಿಂದ ಕಾಯುತ್ತಿದ್ದಾರೆ. ಈ ಮಧ್ಯೆ ತಮ್ಮ ತಂದೆಯ ನಿರ್ಧಾರಕ್ಕೆ ಬೆಂಬಲ ಸೂಚಿಸಿರುವ ಜ್ಯೋತಿರಾದಿತ್ಯ ಸಿಂಧಿಯಾ ಪುತ್ರ ಮಹಾನಾರ್ಯಮನ್ ಸಿಂಧಿಯಾ, ತಂದೆಯ ನಿರ್ಧಾರದ ಕುರಿತು ಹೆಮ್ಮೆಯಿದೆ ಎಂದು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಹಾನಾರ್ಯಮನ್ ಸಿಂಧಿಯಾ, ತಂದೆಯ ದೃಢ ನಿರ್ಧಾರಕ್ಕೆ […]

ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು : ನಾಳೆ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿಗೆ ಸೇರ್ಪಡೆ

Wednesday, March 11th, 2020
jyothiradhithya

ಬೆಂಗಳೂರು : ಕಾಂಗ್ರೆಸ್ ತೊರೆದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಪ್ತ ಜ್ಯೋತಿರಾದಿತ್ಯ ಸಿಂಧಿಯಾ ಸದ್ಯದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ನಾಳೆ ಅಂದರೆ ಗುರುವಾರ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲೇ ಸಿಂಧಿಯಾ ಕಮಲದ ಕೈ ಹಿಡಿಯಲಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಮಂಗಳವಾರ ಬೆಳಗ್ಗೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ […]