Blog Archive

ಡಿ. ವೀರೇಂದ್ರ ಹೆಗ್ಗಡೆ ದಂಪತಿಗೆ ತ್ಯಾಗಿ ಸೇವಾ ಪುರಸ್ಕಾರ

Monday, October 28th, 2019
Ujire

ಉಜಿರೆ : ಧರ್ಮಸ್ಥಳದಲ್ಲಿ ಹೆಗ್ಗಡೆಯವರ ನಿವಾಸದಲ್ಲಿ (ಬೀಡಿನಲ್ಲಿ) ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆ ದಂಪತಿಗೆ ನಮೋಸ್ತು ಶಾಸನ ಸೇವಾ ಸಮಿತಿ ಕರ್ನಾಟಕ ವಿಭಾಗದ ವತಿಯಿಂದ ತ್ಯಾಗಿ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು. ನಮೋಸ್ತು ಶಾಸನ ಸೇವಾ ಸಮಿತಿಯಅಧ್ಯಕ್ಷರಾದ ಮೈಸೂರಿನ ತೇಜಸ್ವಿನಿ, ಕಾರ್ಯದರ್ಶಿ ಪ್ರವೀಣ್‌ಚಂದ್ರ, ಮಿತ್ರಸೇನಜೈನ್, ಉಪ್ಪಿನಂಗಡಿ ಮತ್ತು ಡಾ.ಜಯಕೀರ್ತಿ ಜೈನ್, ಧರ್ಮಸ್ಥಳ ಉಪಸ್ಥಿತರಿದ್ದರು.  

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಐವತ್ತೆರಡನೆ ವರ್ಧಂತ್ಯುತ್ಸವ

Thursday, October 24th, 2019
Pattabhisheka

ಧರ್ಮಸ್ಥಳದ : ನ್ಯಾಯವೇ ನನ್ನ ತಂದೆ, ಸತ್ಯವೇ ನನ್ನ ತಾಯಿ ಎಂಬ ಭಾವನೆಯೊಂದಿಗೆ ತಾನು ನ್ಯಾಯ ಮತ್ತು ಸತ್ಯದ ನೆಲೆಯಲ್ಲಿ ಕೆಲಸ ಮಾಡುತ್ತೇನೆ ಎಂದು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಐವತ್ತೆರಡನೆ ವರ್ಧಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದರು. ನಮ್ಮ ದೇಶದಲ್ಲಿ ಅನೇಕ ಮಂದಿ ಆಚಾರ್ಯರಿದ್ದಾರೆ ಆದರೆ ಆಚಾರವಿಲ್ಲ. ದೇಶಕ್ಕೆ ದೊಡ್ಡ ಚರಿತ್ರೆ ಇದೆ, ಆದರೆ ಚಾರತ್ರ್ಯವಿಲ್ಲ. ಅಲ್ಲಲ್ಲಿ ಸಂಘರ್ಷವಿದೆ […]

ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ 52ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿ ಗಮನ ಸೆಳೆದ ಛದ್ಮವೇಷ ಸ್ಪರ್ಧೆ

Thursday, October 24th, 2019
chadmavesha

ಉಜಿರೆ : ಧರ್ಮಸ್ಥಳದಲ್ಲಿ ಗುರುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷಕದ 52ನೇ ವರ್ಧಂತ್ಯುತ್ಸವದ ಸಂಭ್ರಮ-ಸಡಗರ ಕೂಡಿತ್ತು. ದೇವಸ್ಥಾನ, ಹೆಗ್ಗಡೆಯವರ ಬೀಡು, ವಸತಿ ಛತ್ರಗಳನ್ನು ಪ್ರಾಕೃತಿಕ ಪರಿಕರಗಳಿಂದ ಅಲಂಕರಿಸಲಾಗಿತ್ತು.ದೇವಸ್ಥಾನ, ಬಸದಿಯಲ್ಲಿ ವಿಶೇಷ ಪೂಜೆ ನಡೆಯಿತು. ಧರ್ಮಸ್ಥಳದ ಭಕ್ತರು, ಅಭಿಮಾನಿಗಳು ಹಾಗೂ ಆಪ್ತರು ಹೆಗ್ಗಡೆಯವರನ್ನು ಭೇಟಿಯಾಗಿ ಫಲ-ಪುಷ್ಪ ಅರ್ಪಿಸಿ ಗೌರವಾರ್ಪಣೆ ಮಾಡಿದರು. ದೇವಳದ ನೌಕರರ ವೃಂದದವರ ಛದ್ಮವೇಷ ಸ್ಪರ್ಧೆ ಕಣ್ಮನ ಸೆಳೆಯಿತು. ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಿದರು. ಧರ್ಮಸ್ಥಳದಲ್ಲಿ ಗುರುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂದರ್ಭ ನೌಕರರ ಛದ್ಮವೇಷ […]

ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಕಾರ್ತಿಕ ಮಾಸ ಸಂಭ್ರಮದ ಲಕ್ಷ ದೀಪೋತ್ಸವ

Wednesday, December 5th, 2018
dharmastala

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಸಂಭ್ರಮದ ಲಕ್ಷ ದೀಪೋತ್ಸವ ನಡೆಯುತ್ತಿದ್ದು, ಈ ದೀಪಗಳ ಉತ್ಸವದ ಸಡಗರವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಡಾ‌. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ವಿವಿಧ ವಿಧಿ-ವಿಧಾನಗಳು ನೆರವೇರಿತು. ಹೊಸಕಟ್ಟೆ ಉತ್ಸವದ ಪ್ರಯುಕ್ತ ಶ್ರೀ ಮಂಜುನಾಥ ಸ್ವಾಮಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ವಸಂತಮಹಲ್ನ ಹೊಸಕಟ್ಟೆಗೆ ಸಾವಿರಾರು ಭಕ್ತ ವೃಂದದೊಂದಿಗೆ ಮೆರವಣಿಗೆ ಮಾಡಲಾಯಿತು. ದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನ, ಸಾಹಿತ್ಯ ಸಮ್ಮೇಳನ, ವಸ್ತು ಪ್ರದರ್ಶನವನ್ನು‌ ಆಯೋಜಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ […]

ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವ: ಛದ್ಮವೇಷ ಸ್ಫರ್ಧೆಯಲ್ಲಿ ರಂಜಿಸಿದ ದೇವಳ ನೌಕರರು

Tuesday, October 23rd, 2018
veerendra-hegde

ಉಜಿರೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಮಂಗಳವಾರ ಎಲ್ಲೆಲ್ಲೂ ಸಂಭ್ರಮ – ಸಡಗರ. ಹಬ್ಬದ ವಾತಾವರಣ. ದೇವಳ ನೌಕರರು ಛದ್ಮವೇಷ ಸ್ಪರ್ಧೆಯಲ್ಲಿಉತ್ಸಾಹದಿಂದ ಭಾಗವಹಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕುಟುಂಬದವರಯ ಸ್ಫರ್ದೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ಮಿತಾ ಠಾಕ್ರೆ ಧರ್ಮಸ್ಥಳದಲ್ಲಿ

Monday, October 15th, 2018
Smitha Thakre

ಉಜಿರೆ: ಬಾಳಾ ಸಾಹೇಬ್ ಠಾಕ್ರೆಯವರ ಕುಟುಂಬದ ಸ್ಮಿತಾ ಠಾಕ್ರೆ ಭಾನುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು. ಸ್ಮಿತಾ ಠಾಕ್ರೆಯವರ ಮಗ ಐಶ್ವರ್ಯ ಠಾಕ್ರೆ ಜೊತೆಗಿದ್ದರು. ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ನಾಯಕತ್ವ ಗುಣದೊಂದಿಗೆ ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು: ಡಿ. ವೀರೇಂದ್ರ ಹೆಗ್ಗಡೆ

Monday, October 1st, 2018
veerendra-hegade

ಉಜಿರೆ: ಮನಸ್ಸಿನ ನಿಯಂತ್ರಣದೊಂದಿಗೆ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಬೇಕು. ನಾಯಕತ್ವ ಗುಣದೊಂದಿಗೆ ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಭಜನಾ ಕಮ್ಮಟದ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಭಜನೆಯಲ್ಲಿ ಸಾಹಿತ್ಯವಿದೆ. ಸಾಹಿತ್ಯದಲ್ಲಿ ಸಾರ್ಥಕ ಬದುಕಿಗೆ ಬೇಕಾದ ಸಂದೇಶವಿದೆ. ಹಾಡುಗಳ ಅರ್ಥವನ್ನು ತಿಳಿದು ಹಾಡಬೇಕು. ನಿಜ ಜೀವನದಲ್ಲಿಯೂ ಅದನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಯಾವುದೇ ಸಮಸ್ಯೆ ಬಂದಾಗ ಅದನ್ನು ಆತ್ಮವಿಶ್ವಾಸದಿಂದ ಎದುರಿಸುವ ಶಕ್ತಿ-ತಾಳ್ಮೆಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ತಿಳಿಸಿದರು. […]

ತರುಣ ಸಾಗರ ಮುನಿ ಮಹಾರಾಜರು ಸಮಾಧಿ ಮರಣ – ಡಿ. ವೀರೇಂದ್ರ ಹೆಗ್ಗಡೆಯವರ ಸಂತಾಪ

Saturday, September 1st, 2018
Taruna Sagar

ಧರ್ಮಸ್ಥಳ : ಕ್ರಾಂತಿಕಾರಿ ರಾಷ್ಟ್ರಸಂತ ತರುಣ ಸಾಗರ ಮುನಿ ಮಹಾರಾಜರು ಸಮಾಧಿ ಮರಣ ಹೊಂದಿದ ವಿಚಾರ ತಿಳಿಯಿತು. 2007 ರಲ್ಲಿ ಧರ್ಮಸ್ಥಳದಲ್ಲಿ ನಡೆದ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಪೂಜ್ಯರನ್ನು ಇಲ್ಲಿಗೆ ಆಮಂತ್ರಿಸಿ ಅವರ ಸೇವೆ ಮಾಡುವ ಅವಕಾಶ ನಮಗೆ ದೊರಕಿತ್ತು. ಜೈನ ಧರ್ಮದ ಬಗ್ಯೆ ಆಳವಾದ ಅಧ್ಯಯನ ಮಾಡಿ ಅವರು ಉತ್ತಮ ಸಮನ್ವಯ ದೃಷ್ಟಿಯಿಂದ ಮಂಗಲ ಪ್ರವಚನ ನೀಡುತ್ತಿದ್ದರು. ಪೂಜ್ಯರಿಂದ ಸರ್ವ ಧರ್ಮಿಯರೂ ಪ್ರಭಾವಿತರಾಗಿದ್ದು ವಾಸ್ತವಿಕವಾಗಿ ತಮ್ಮ ಜೀವನದಲ್ಲಿ ಧರ್ಮವನ್ನು ಅನುಷ್ಠಾನಗೊಳಿಸುವ ಬಗ್ಯೆ ಅವರು […]

ಜಿಲ್ಲೆಯ ಸೋತ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿ ಸಚಿವ ಯು.ಟಿ.ಖಾದರ್ ಮಾತುಕತೆ

Sunday, June 10th, 2018
ut-kadher

ಮಂಗಳೂರು: ನೂತನ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಭಾನುವಾರ  ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ದ.ಕ.ಜಿಲ್ಲೆಯ 8 ಕ್ಷೇತ್ರಗಳಲ್ಲಿ 6 ಮಂದಿ ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದವರು ಸೋಲನುಭವಿಸಿದರು. ಯುಟಿ ಖಾದರ್ ಒಬ್ಬರೇ ಗೆದ್ದು ಕಾಂಗ್ರೆಸ್ಸಿನ ಮಾನ ಉಳಿಸಿದ್ದರು. ಬಂಟ್ವಾಳ ಶಾಸಕರಾಗಿದ್ದ ಬಿ. ರಮಾನಾಥ ರೈ, ಮೂಡಬಿದ್ರೆ ಶಾಸಕರಾಗಿದ್ದ ಅಭಯಚಂದ್ರ ಜೈನ್, ಬೆಳ್ತಂಗಡಿ ಶಾಸಕರಾಗಿದ್ದ ವಸಂತ ಬಂಗೇರ, ಪುತ್ತೂರು ಶಾಸಕಿಯಾಗಿದ್ದ ಶಕುಂತಳಾ ಟಿ. ಶೆಟ್ಟಿ ಅವರನ್ನು ನಿವಾಸಕ್ಕೆ ತೆರಳಿ ರಾಜ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವರಾದ ಯು.ಟಿ.ಖಾದರ್ […]

ಹೆಗ್ಗಡೆಯವರಿಗೆ ಜೀವಮಾನ ಶ್ರೇಷ್ಠ ಸಾಧಕ ಪ್ರಶಸ್ತಿ ಪ್ರದಾನ

Tuesday, April 24th, 2018
veerenda-hegde

ಧರ್ಮಸ್ಥಳ: ಸುರಾನ ವಿದ್ಯಾ ಸಂಸ್ಥೆಗಳ ವತಿಯಿಂದ ಮಂಗಳವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಜೀವಮಾನ ಶ್ರೇಷ್ಠ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಸುರಾನ ವಿದ್ಯಾ ಸಂಸ್ಥೆಗಳ ವತಿಯಿಂದ 2017 ರ ಸಾಲಿನ ಜೀವಮಾನ ಶ್ರೇಷ್ಠ ಸಾಧಕ ಪ್ರಶಸ್ತಿಯನ್ನು ಮಂಗಳವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು. ಸುರಾನ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಡಾ. ಅರ್ಚನಾ ಸುರಾನ ಮತ್ತು ವಿವಿಧ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಪ್ರಶಸ್ತಿ ಸ್ವೀಕರಿಸಿದ ಹೆಗ್ಗಡೆಯವರು ಮಾತನಾಡಿ ಸುರಾನ […]