ವಿವಾದದ ನಡುವೆ ಬಿತ್ತು ಎತ್ತಿನಹೊಳೆಗೆ ಅಡಿಗಲ್ಲು
Tuesday, March 4th, 2014ಮಂಗಳೂರು: ಬಂದ್ ಹಾಗೂ ಪ್ರತಿಭಟನೆ ನಡುವೆಯೇ ವಿವಾದಿತ ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಎತ್ತಿನಹೊಳೆ ಯೋಜನೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟೈರ್ಗೆ ಬೆಂಕಿ ಹಚ್ಚಿ ಬಂದ್ ಆಚರಿಸಿದರೆ, ಚಿಕ್ಕಬಳ್ಳಾಪುರದಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಕಪ್ಪು ಪಟ್ಟಿ ಹಾಗೂ ಖಾಲಿ ಪೈಪುಗಳನ್ನು ಪ್ರದರ್ಶಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ವೇಳೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ, ಬಿಡುಗಡೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಬಿ.ಬಿ. ರಸ್ತೆಯಲ್ಲಿರುವ (ಆದಿಚುಂಚನಗಿರಿ ಶಾಖಾ […]