Blog Archive

ನರೇಂದ್ರ ಮೋದಿ ಸಹೋದರ ಸೋಮಬಾಯಿ ಮೋದಿ ಮಂಗಳೂರಲ್ಲಿ

Tuesday, July 9th, 2019
Somabai

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಸೋಮಬಾಯಿ ಮೋದಿ ಅವರು ಇಂದು ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸೋಮಬಾಯಿ ಮೋದಿ, ದೇವಸ್ಥಾನ ಭೇಟಿ ನೀಡುವ ಸಲುವಾಗಿ ಮಂಗಳೂರಿಗೆ ಆಗಮಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯನ್ನು ಜನ ಮೆಚ್ಚಿಕೊಂಡಿದ್ದಾರೆ. ಅದರಂತೆ ನಾನು ಕೂಡ ಮೋದಿಯನ್ನು ಮೆಚ್ಚಿಕೊಂಡಿದ್ದೇನೆ. ಧರ್ಮಸ್ಥಳಕ್ಕೆ ಹಾಗೂ ಇತರ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವ ಸಲುವಾಗಿ ಮಾತ್ರ ಜಿಲ್ಲೆಗೆ ಆಗಮಿಸಿದ್ದೇನೆ. ಇದರಲ್ಲಿ […]

ನರೇಂದ್ರ ಮೋದಿಯವರ ಗೆಲುವಿಗೆ ಒಂದು ದಿನ ಹೇರ್ ಕಟ್ಟಿಂಗ್ ಫ್ರೀ

Saturday, May 25th, 2019
cutting free

ಮಂಗಳೂರು :  ನರೇಂದ್ರ ಮೋದಿಯವರ ಗೆಲುವಿನ ಹರ್ಷಾಚರಣೆ ದೇಶದಾದ್ಯಂತ ವಿವಿಧ ರೀತಿಯಲ್ಲಿ ನಡೆಯುತ್ತಿದೆ. ಪುತ್ತೂರಿನ ಮೋದಿ ಅಭಿಮಾನಿಯೊಬ್ಬರು ತಮ್ಮ ಒಂದು ದಿನದ ಕೆಲಸವನ್ನೇ ಮೋದಿ ಗೆಲುವಿಗಾಗಿ ಮುಡಿಪಾಗಿಟ್ಟಿದ್ದಾರೆ. ಪುತ್ತೂರು ಸಮೀಪದ ಸಂಟ್ಯಾರುವಿನಲ್ಲಿ ಹೇರ್ ಸಲೂನ್ ನಡೆಸುತ್ತಿರುವ ಬಾಲಸುಂದರ್, ಪ್ರಧಾನಿ ಮೋದಿ ಅವರ ಅಪ್ಪಟ ಅಭಿಮಾನಿ. ಬೃಹತ್ ರಾಲಿ, ಸಿಹಿ ತಿಂಡಿ ಹಂಚಿ, ಪಟಾಕಿ ಸಿಡಿಸಿ ಮೋದಿ ಗೆಲುವನ್ನು ಸಂಭ್ರಮಿಸುವ ಆರ್ಥಿಕ ತಾಕತ್ತು ಬಾಲಸುದರ್ ಅವರಿಗಿಲ್ಲ. ಈ ಕಾರಣಕ್ಕಾಗಿ ಇವರು ತಮ್ಮ ದುಡಿಮೆಯ ಒಂದು ದಿನವನ್ನು ಮೋದಿ ಗೆಲುವಿಗಾಗಿ […]

ರಾಜ್ಯದಲ್ಲಿ 156 ತಾಲೂಕುಗಳಲ್ಲಿ ಬರಗಾಲ ಎದುರಾಗಿರುವ ಹಿನ್ನೆಲೆ: ಮೋದಿ ಭೇಟಿಯಾಗಲಿರುವ ಸಿಎಂ

Thursday, December 27th, 2018
narendra-modi

ಬೆಂಗಳೂರು: ರಾಜ್ಯದಲ್ಲಿ 156 ತಾಲೂಕುಗಳಲ್ಲಿ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಪ್ರಧಾನಿ ಗೃಹಕಚೇರಿಯಲ್ಲಿ ಭೇಟಿಯಾಗಲು ಸಮಯ ನಿಗದಿಯಾಗಿದೆ. ರಾಜ್ಯದ ಮೂರು ಜಿಲ್ಲೆಗಳನ್ನು ಹೊರತುಪಡಿಸಿ ಇಡೀ ರಾಜ್ಯ ಬರಗಾಲಕ್ಕೆ ಒಳಗಾಗಿದ್ದು, ಈ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಪ್ರಧಾನಿಯೊಂದಿಗೆ ಸಿಎಂ ಕುಮಾರಸ್ವಾಮಿ ಅವರು ಚರ್ಚೆ ನಡೆಸಲಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ರಾಜ್ಯದ ಹಲವು ತಾಲೂಕುಗಳು ನಿರಂತರ ಬರಗಾಲದಿಂದ ತತ್ತರಿಸಿದೆ. ಹೀಗಾಗಿ […]

ಟಿಆರ್​ಎಸ್​ ಹಾಗೂ ಕಾಂಗ್ರೆಸ್​ ಫ್ರೆಂಡ್ಲಿ ಮ್ಯಾಚ್​ ಆಡುತ್ತಿವೆ: ನರೇಂದ್ರ ಮೋದಿ

Tuesday, November 27th, 2018
narendra-modi

ನಿಜಾಮಾಬಾದ್: ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಹಾಗೂ ಕಾಂಗ್ರೆಸ್ ಫ್ರೆಂಡ್ಲಿ ಮ್ಯಾಚ್ ಆಡುತ್ತಿವೆ. ಎರಡೂ ಪಕ್ಷಗಳು ಕುಟುಂಬ ಆಳ್ವಿಕೆಯಲ್ಲಿವೆ. ಹಾಗಾಗಿ ಅವು ಅಭಿವೃದ್ಧಿಗೆ ಪೂರಕವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ನಿಜಾಮಾಬಾದ್ನಲ್ಲಿ ನಡೆದ ಬಿಜೆಪಿ ಚುನಾವಣಾ ರಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಟಿಆರ್ಎಸ್ ಒಂದೇ ನಾಣ್ಯದ ಎರಡು ಮುಖಗಳಿಂದ್ದಂತೆ. ಎರಡೂ ಪಕ್ಷಗಳು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿವೆ. ಅವೆರಡರ ಸಿದ್ಧಾಂತಗಳಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ ಎಂದು ಪ್ರಧಾನಿ ಕುಟುಕಿದರು. ಇಲ್ಲಿನ ಮುಖ್ಯಮಂತ್ರಿ […]

ಶೃಂಗೇರಿ ಜಗದ್ಗುರುಗಳನ್ನು ಭೇಟಿ ಮಾಡಿದ ಕಾಶ್ಮೀರಿ ಪಂಡಿತರು..!

Saturday, October 27th, 2018
chikmagaluru

ಚಿಕ್ಕಮಗಳೂರು: ಪಾಕ್ ಆಕ್ರಮಿತ ಕಾಶ್ಮೀರದ ಶಾರದ ನಗರದಲ್ಲಿರುವ ಶಾರದಾ ಸರ್ವಜ್ಞ ಪೀಠದ ಪುನರುತ್ಥಾನ ಕಾರ್ಯ ಹಾಗೂ ವರ್ಷದಲ್ಲಿ ಒಮ್ಮೆ ಭಾರತೀಯರಿಗೆ ಶಾರದಾ ಸರ್ವಜ್ಞ ಪೀಠಕ್ಕೆ ಪ್ರವೇಶದ ಕುರಿತು ಶೃಂಗೇರಿ ಪೀಠದ ಅಡಳಿತ ಮಂಡಳಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ. ಪ್ರಧಾನಿ ಅವರಿಗೆ ಪತ್ರ ಬರೆದ ಬೆನ್ನಲ್ಲೇ ‌ಶಾರದಾ ಸರ್ವಜ್ಞ ಪೀಠದ ಕುರಿತು ದೇಶವ್ಯಾಪಿ ಜನ ಜಾಗೃತಿ ಕಾರ್ಯಕ್ರಮ ನಡೆಸುವ ಸಲುವಾಗಿ ಶೃಂಗೇರಿ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮಿಜೀಗಳನ್ನು […]

ಪ್ರಧಾನಿ ಮೋದಿಗೆ ಪ್ರತಿಷ್ಠಿತ ಸಿಯೋಲ್​ ಶಾಂತಿ ಪುರಸ್ಕಾರ

Wednesday, October 24th, 2018
narendra-modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2018ರ ಸಿಯೋಲ್ ಶಾಂತಿ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ವಿಶ್ವದ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ 14ನೇ ಗಣ್ಯರು ಎಂಬ ಹೆಗ್ಗಳಿಗೂ ಪಾತ್ರರಾಗಿದ್ದಾರೆ. ವಿದೇಶಾಂಗ ಇಲಾಖೆ ಈ ಬಗ್ಗೆ ದೃಢೀಕರಿಸಿದ್ದು, ಅಂತಾರಾಷ್ಟ್ರೀಯ ಸಹಕಾರ, ಜಾಗತಿಕ ಆರ್ಥಿಕಾಭಿವೃದ್ಧಿ, ಮಾನವ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿರುವುದರ ಜತೆಗೆ ಭ್ರಷ್ಟಾಚಾರ ನಿರ್ಮೂಲನೆ, ಸಾಮಾಜಿಕ ಸಮನ್ವಯದ ಮೂಲಕ ಜಗತ್ತಿನ ಅತ್ಯಂತ ವೇಗದ ಆರ್ಥಿಕಾಭಿವೃದ್ಧಿ ಹಾಗೂ ಪ್ರಜಾಪ್ರಭುತ್ವದ ಪ್ರಗತಿಗೆ ಶ್ರಮಿಸಿರುವ ಕಾರಣ ಈ ಪುರಸ್ಕಾರಕ್ಕೆ ಪ್ರಧಾನಿ ಭಾಜನರಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದೆ. […]

ಮಹಿಳೆಯರ ಸಮಸ್ಯೆ ಪರಿಹರಿಸಲೆಂದೇ ಸರ್ಕಾರ ಕೆಲಸ ಮಾಡ್ತಿದೆ: ನರೇಂದ್ರ ಮೋದಿ

Saturday, October 13th, 2018
prime-minister

ನವದೆಹಲಿ: ನಮ್ಮ ಸರ್ಕಾರ ಮಹಿಳೆಯರ ಸಮಸ್ಯೆಗಳನ್ನ ತೊಲಗಿಸುವ ಸಲುವಾಗಿಯೇ ಕೆಲಸ ಮಾಡುತ್ತಿದೆ. ರಾತ್ರಿ ಪಾಳಯದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಕೆಲಸದ ಸಮಯದಲ್ಲಿ ಭದ್ರತೆ ಒದಗಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ನವದೆಹಲಿಯಲ್ಲಿ ಎನ್ಎಚ್ಆರ್ಸಿ ಬೆಳ್ಳಿಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಣ್ಣ ಮನಸಿನ ವ್ಯಕ್ತಿಗಳು ಮಗು ಹೆಣ್ಣಾಗಿದ್ದರೆ ಗರ್ಭತೆಗೆಯಿಸುವ ಕೆಲಸ ಮಾಡ್ತಿದ್ದಾರೆ. ಇದನ್ನ ನಿಲ್ಲಿಸಲು ಕಠಿಣ ಕಾನೂನು ಜಾರಿ ಮಾಡಲಾಗಿದೆ. ಇನ್ನು ಎಲ್ಲ ರಾಜ್ಯಗಳಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಜಾರಿಗೆ ತಂದಿದ್ದೇವೆ. ಇದರಿಂದ ಹೆಣ್ಣುಮಗುವಿನ ಜನನ […]

ಪ್ರಧಾನಿ ನರೇಂದ್ರ ಮೋದಿ ಭೇಟಿ ಸಾಧ್ಯವಾಗಿಲ್ಲ: ದೇವೇಗೌಡ

Friday, October 5th, 2018
narendra-modi

ಬೆಂಗಳೂರು: ಕೊಡಗು ಪ್ರವಾಹ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಕೇಳಿದ್ದೆ. ರಷ್ಯಾ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿ ಸಾಧ್ಯವಾಗಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದರು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಭೇಟಿಗೆ ಪ್ರಧಾನಿ ಸೂಚಿಸಿದರು. ಹೀಗಾಗಿ, ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿದ್ದೇವೆ. ಸಾಕಷ್ಟು ಪ್ರಮಾಣದಲ್ಲಿ ಪ್ರವಾಹದಿಂದ ಹಾನಿಯಾಗಿದೆ. ಕೇಂದ್ರ ಸರ್ಕಾರದ ತಂಡ […]

ಪ್ರಧಾನಿ ನರೇಂದ್ರ ಮೋದಿಗೆ ‘ಚಾಂಪಿಯನ್​ ಆಫ್​ ದಿ ಅರ್ಥ್ ಪ್ರಶಸ್ತಿ’

Thursday, September 27th, 2018
narendra-modi

ಯುನೈಟೆಡ್ ನೆಷನ್ಸ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಅವರು ವಿಶ್ವಸಂಸ್ಥೆಯ ಚಾಂಪಿಯನ್ ಆಪ್ ದಿ ಅರ್ಥ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2022 ರೊಳಗೆ ಭಾರತವನ್ನು ಪ್ಲಾಸ್ಟಿಕ್ ಮುಕ್ತ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ನರೇಂದ್ರಮೋದಿ ಅವರ ಸಂಕಲ್ಪ ಹಾಗೂ ಪರಿಸರ ರಕ್ಷಣೆ ನಿಟ್ಟಿನಲ್ಲಿ ಮ್ಯಾಕ್ರೋನ್ ಅವರ ಕಾರ್ಯವನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವಿಶ್ವದ ಅತ್ಯಂತ ದೊಡ್ಡ ಪರಿಸರ ಪ್ರಶಸ್ತಿಯಾಗಿದ್ದು, ಅಂತಾರಾಷ್ಟ್ರೀಯ ಸೌರಶಕ್ತಿ ರಾಷ್ಟ್ರಗಳ ಮೈತ್ರಿಯಲ್ಲಿ ಮಾಡಿದ ಅನುಪಮ ಕೆಲಸ ಹಾಗೂ ಪರಿಸರ ಸಂರಕ್ಷಣೆಯಲ್ಲಿ […]

550 ಕೋಟಿ ಪ್ರಾಜೆಕ್ಟ್​ಗೆ ನರೇಂದ್ರ ಮೋದಿ ಚಾಲನೆ

Tuesday, September 18th, 2018
narendra-modi

ವಾರಣಾಸಿ: ಎರಡು ದಿನಗಳ ವಾರಣಾಸಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ನಿನ್ನೆ 69ನೇ ಹುಟ್ಟುಹಬ್ಬವನ್ನು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಆಚರಿಸಿಕೊಂಡ ಮೋದಿ, ಮಕ್ಕಳೊಂದಿಗೆ ಸಂವಾದ ನಡೆಸಿ ನಂತರದಲ್ಲಿ ಕಾಶಿ ವಿಶ್ವನಾಥ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಪ್ರವಾಸದ ಕೊನೆಯ ದಿನವಾದ ಇಂದು ವಿದ್ಯುತ್ ಅಭಿವೃದ್ಧಿ ಯೋಜನೆ ಸೇರಿದಂತೆ ಸುಮಾರು 550 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ […]