Blog Archive

ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ ಮಾನನಷ್ಟ ಮೊಕದ್ದಮೆ

Tuesday, February 27th, 2018
pratap-simha

ಮೈಸೂರು: ಸಂಸದ ಪ್ರತಾಪ ಸಿಂಹ ವಿರುದ್ಧ ಬಹುಭಾಷಾ ಕಲಾವಿದ, ನಟ ಪ್ರಕಾಶ್ ರೈ ಇಂದು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆಯೇ ನಗರಕ್ಕೆ ಆಗಮಿಸಿದ್ದ ನಟ ರೈ, ಆಪ್ತರು, ವಕೀಲರು ಹಾಗೂ ಪ್ರಗತಿಪರ ಚಿಂತಕರ ಜತೆ ಸಮಾಲೋಚನೆ ನಡೆಸಿದ್ದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದ ಪ್ರತಾಪ ಸಿಂಹ, ಟ್ವೀಟರ್, ಫೇಸ್ ಬುಕ್ ನಂಥ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕಟಿಸಿದ್ದಲ್ಲದೆ ಟ್ರೋಲ್ ಗೂಂಡಾಗಿರಿ ನಡೆಸಿದ್ದಾರೆ ಎಂಬುದು ಪ್ರಕಾಶ್ ರೈ ಆರೋಪ. ಕೆಲ ದಿನಗಳ ಹಿಂದೆ […]

ಯೋಗಕ್ಕಿದೆ ಇಂದು ವಿಶ್ವವ್ಯಾಪಿ ಗೌರವ: ನಳಿನ್ ಕುಮಾರ್‍ ಕಟೀಲ್

Monday, February 26th, 2018
nalin-kumar

ಮಂಗಳೂರು: ಯೋಗಕ್ಕೆ ಇಂದು ಭಾರತವಲ್ಲದೇ ವಿಶ್ವದ ಬೇರೆ ಬೇರೆ ದೇಶಗಳಲ್ಲೂ ವಿಶೇಷ ಗೌರವ ಲಭಿಸಿದೆ ಎಂದು ಸಂಸದ ನಳಿನ್ ಕುಮಾರ್‍ ಕಟೀಲ್‍ ಹೇಳಿದರು. ಮಂಗಳೂರಿನಲ್ಲಿ ಕೆ.ನಾರಾಯಣ ಶೆಟ್ಟಿ ಸಂಸ್ಮರಣಾ ಸಮಿತಿ ಮತ್ತು ಪತಂಜಲಿ ಯೋಗಶಿಕ್ಷಣ ಪ್ರತಿಷ್ಠಾನ (ರಿ) ಅಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಫರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದೇಶದಲ್ಲೂ ಅತೀ ಹೆಚ್ಚು ಜನರು ತಮ್ಮ ದೈನಂದಿನ ಚಟುವಟಿಕೆಯಾಗಿ ಪ್ರತಿನಿತ್ಯ ಯೋಗಾಭ್ಯಾಸವನ್ನು ಮಾಡುತ್ತಿರುವುದು ವಿಶೇಷ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ಪರಂಪರೆಯನ್ನು […]

ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಶತಸಿದ್ಧ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

Tuesday, February 20th, 2018
yedeyorappa

ಮಂಗಳೂರು: ಪರಿವರ್ತನಾ ಯಾತ್ರೆಯ ಮೂಲಕ‌ ರಾಜ್ಯದ‌ ಉದ್ದಗಲಕ್ಕೆ ಪ್ರವಾಸ ಮಾಡಿದ್ದೇನೆ. ಆಯಾ ಭಾಗದ ಜ್ವಲಂತ ಸಮಸ್ಯೆಗಳನ್ನು ತಿಳಿದುಕೊಂಡಿದ್ದೇನೆ. ಸ್ಥಳೀಯ ಜನರ ಆಶಯಗಳನ್ನು‌ ಆಲಿಸಿದ್ದೇನೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು. ಬಂಟ್ವಾಳದಲ್ಲಿ‌ ನವಶಕ್ತಿ ಸಮಾವೇಶದಲ್ಲಿ ಅವರು ಮಾತನಾಡಿದರು. ವಿಧಾನಸಭಾ ಕ್ಷೇತ್ರದ ಬೂತ್ ಗಳನ್ನು ಬಲಪಡಿಸಬೇಕು. ಬೂತ್ ಮಟ್ಟದಲ್ಲಿ ಶೇ 60ರಷ್ಟು ಮತ ಪಡೆಯುವಲ್ಲಿ ಯಶಸ್ವಿಯಾಗಬೇಕು.‌‌ ಕಾಂಗ್ರೆಸ್ ನವರು‌ ಎಷ್ಟೇ ಪ್ರಬಲರಾಗಿದ್ದರೂ ತಲೆ ಕೆಡಿಸಿಕೊಳ್ಳಬೇಡಿ. ಬೂತ್ ಗಳನ್ನು ಬಲಪಡಿಸಬೇಕು ಎಂದು ಹೇಳಿದರು. ಕಾಂಗ್ರೆಸ್ ಕರ್ನಾಟಕ‌‌ದಲ್ಲಿ ಮಾತ್ರ ಅಧಿಕಾರದಲ್ಲಿದೆ.‌ ಮೂರುವರೆ ವರ್ಷದಲ್ಲಿ […]

ಪಕೋಡ ಮಾರಿ ಜೀವನ ಕಟ್ಟಿಕೊಂಡ ರಾಜೇಶ್ ಬಾಳಿಗ

Thursday, February 8th, 2018
dakshina-kannada

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಪಕೋಡಾ ಹೇಳಿಕೆ ಭಾರಿ ಸದ್ದು ಮಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಮೋದಿ ಅವರ ಪಕೋಡಾ ಹೇಳಿಕೆ ಬಗ್ಗೆ ಪರ ವಿರೋಧ ಚರ್ಚೆಗಳು ಕಾವು ಪಡೆದುಕೊಳ್ಳುತ್ತಿದೆ. ಇನ್ನೊಂದೆಡೆ ಮೋದಿ ಅವರ ಹೇಳಿಕೆ ವಿರೋಧಿಸಿ ರಾಜಕೀಯ ಪಕ್ಷಗಳ ಕಾರ್ಯಕರ್ತರು ಬೀದಿಗಿಳಿದು ಪಕೋಡಾ ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆಯ ಹೊಸ್ತಿಲಲ್ಲಿರುವ ಕರ್ನಾಟಕ ದಲ್ಲಿ ಮೋದಿ ಅವರ ಪಕೋಡಾ ಹೇಳಿಕೆ ರಾಜಕೀಯ ಮುಖಂಡರ ವಾಗ್ವಾದಕ್ಕೆ ವೇದಿಕೆ ಯಾಗುತ್ತಿದೆ. ರಾಜಕೀಯ ಪಕ್ಷಗಳ ಈ ಪಕೋಡಾ ಜಟಾಪಟಿ, ಪಕೋಡಾ ಮಾರಾಟಗಾರರನ್ನು ಕೆರಳಿಸಿದೆ. […]

ಪ್ರಶ್ನೆಗಳಿಗೆ ಉತ್ತರಿಸಿ, ಆರೋಪಗಳು ಬೇಡ: ಪ್ರಧಾನಿಗೆ ರಾಹುಲ್ ತಿರುಗೇಟು

Wednesday, February 7th, 2018
rahul-gandhi

ನವದೆಹಲಿ: “ಪ್ರಶ್ನೆಗಳಿಗೆ ಉತ್ತರ ನೀಡಿ. ನಿಮ್ಮ ಆರೋಪಗಳು ಬೇಕಾಗಿಲ್ಲ,” ಎಂದು ಲೋಕಸಭೆಯಲ್ಲಿ ದೀರ್ಘ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಫೆಲ್ ಡೀಲ್, ರೈತರು ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು ಎಂದು ರಾಹುಲ್ ಆಗ್ರಹಿಸಿದರು. ರಾಹುಲ್ ಗಂಭೀರ ಆರೋಪ “ನಾನು ವಿರೋಧ ಪಕ್ಷದ ನಾಯಕ ಅಲ್ಲ, ಪ್ರಧಾನಿ ಎಂಬುದನ್ನು ಅವರು ಮರೆತಂತೆ ಕಾಣಿಸುತ್ತಿದೆ,” ಎಂದು ವರದಿಗಾರರಿಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದರು. “ಪ್ರಧಾನಿಗೆ […]

ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕರು

Monday, February 5th, 2018
ramalinga-reddy

ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮೊದಲು ಅಪರಾಧ ಪ್ರಕರಣಗಳ ಸಭೆ ಮಾಡಲಿ ಆನಂತರ ಕರ್ನಾಟಕದ ವಿರುದ್ಧ ಮಾತನಾಡಲಿ ಎಂದು ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಅಪರಾಧಗಳ ರಾಜ್ಯ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ನರೇಂದ್ರ ಮೋದಿ ಅವರು 13 ವರ್ಷ ಗುಜರಾತ್‍ನಲ್ಲಿ ಮುಖ್ಯಮಂತ್ರಿಯಾಗಿದ್ದರು. ಗೋಧ್ರಾ ದುರಂತದಲ್ಲಿ ಕರಸೇವಕರು ಸುಟ್ಟು ಕರಕಲಾದರು. ಆಗ ಮೋದಿ ಅವರಿಗೆ ಜವಾಬ್ದಾರಿ ಇರಲಿಲ್ಲವೇ ಎಂದು ಪ್ರಶ್ನಿಸಿದರು. ಗುಜರಾತ್‍ನಲ್ಲಿ […]

ರಾಜ್ಯದಲ್ಲಿ ಮಾಫಿಯಾಗಳ ನಂಗಾನಾಚ್‌

Monday, February 5th, 2018
karnataka

ಬೆಂಗಳೂರು: ಕರ್ನಾಟಕದಲ್ಲಿ ಆಡಳಿತದಲ್ಲಿರುವುದು 10 ಪರ್ಸೆಂಟ್‌ ಕಮಿಷನ್‌ ಸರ್ಕಾರವಾಗಿದ್ದು ಇದರ ಪತನಕ್ಕೆ ಕೌಂಟ್‌ಡೌನ್‌ ಶುರುವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಲ್ಲಾ ದಿಕ್ಕುಗಳಿಂದಲೂ ವಾಗ್ಧಾಳಿ ನಡೆಸಿದ್ದಾರೆ. ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಬಿಜೆಪಿಯ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ಎಲ್ಲವೂ ಕಮಿಷನ್‌ ಆಧಾರದ ಮೇಲೆಯೇ ನಡೆಯುತ್ತದೆ. 10 ಪರ್ಸೆಂಟ್‌ ಇಲ್ಲದೆ ಯಾವುದೇ ಕೆಲಸ ಆಗುವುದಿಲ್ಲ ಮತ್ತು ಆಗಲು […]

ಕರಂದ್ಲಾಜೆಗೆ ಔತಣಕ್ಕೆ ಕರೆಯಲಿಲ್ಲ ಎಂದು ಬೇಸರ! ಯುಟಿ ಖಾದರ್

Saturday, February 3rd, 2018
karandlaje

ಮಂಗಳೂರು: ಸಾವಿನ ಮನೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಪ್ರತಿಯೊಂದಕ್ಕೂ ರಾಜಕೀಯ ತಳುಕು ಹಾಕುವುದು ಯಾಕೆ? ಅನ್ಯಾಯದ ಕೊಲೆ ಸಮರ್ಥಿಸಲು ಸಾಧ್ಯವಿಲ್ಲ ಎಂದು ಸಚಿವ ಯುಟಿ ಖಾದರ್ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು. ಸಂತೋಷ್ ಪೋಷಕರಿಗಾದ ಅನ್ಯಾಯದ ಬಗ್ಗೆ ನಮಗೂ ನೋವಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಹೋಗಿ ಚಾ ಕುಡಿದು ಬರುತ್ತಾರೆ. ಸಿಎಂ ನಮ್ಮ ಮನೆಗೆ ಬಂದಿದ್ದನ್ನು ದೊಡ್ಡ ವಿಷಯವನ್ನಾಗಿ ಮಾಡ್ತಾರೆ. ಶೋಭಾ […]

ಮಹಾ ಬಂದ್‌ ಮುಕ್ತಾಯ; ಸರ್ಕಾರಿ ಬಸ್‌ ಸಂಚಾರ ಆರಂಭ

Thursday, January 25th, 2018
finished

ಬೆಂಗಳೂರು: ಮಹದಾಯಿ ನದಿ ನೀರಿನ ಸಮಸ್ಯೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಸ್ಥಿಕೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಬಂದ್‌ನಿಂದಾಗಿ ಸ್ಥಗಿತಗೊಳಿಸಲಾಗಿದ್ದ ಸರ್ಕಾರಿ ಬಸ್‌ಗಳ ಸಂಚಾರ ಗುರುವಾರ ಸಂಜೆ 4 ಗಂಟೆಯ ವೇಳೆಗೆ ರಾಜ್ಯಾಧ್ಯಂತ ಪುನರಾರಂಭಗೊಂಡಿದೆ. ಬೆಂಗಳೂರು ನಗರ ಸಹಜ ಸ್ಥಿತಿಯತ್ತ ಮರಳುತ್ತಿದೆ. ರಾಜ್ಯದೆಲ್ಲೆಡೆ 800ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚಾರ ಆರಂಭಿಸಿದ್ದು ಇದರಿಂದಾಗಿ ಪರದಾಡುತ್ತಿದ್ದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ. ಬೆಳಗಿನಿಂದ ಸ್ಥಗಿತಗೊಳಿಸಲಾಗಿದ್ದ ಬಿಎಂಟಿಸ್‌ ಬಸ್‌ ಸಂಚಾರವನ್ನು ಸಂಜೆ ಆರಂಭಿಸಲಾಗಿದ್ದು ಪ್ರಯಾಣಿಕರು ನಿರಾಳರಾಗಿದ್ದಾರೆ. ಪರಿಸ್ಥಿತಿಯನ್ನು ನೋಡಿಕೊಂಡು ಅಹಿತಕರ […]

ಸಂವಿಧಾನ ತಿದ್ದುಪಡಿ ಹೇಳಿಕೆ… ಕೇಂದ್ರ ಸಚಿವ ಅತವಾಳೆ ಹೇಳಿದ್ದೇನು?

Monday, January 22nd, 2018
ramadas

ಮಂಗಳೂರು: ಸಂವಿಧಾನವೇ ಈ ದೇಶದ ಧರ್ಮಗ್ರಂಥ ಎಂದು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಸಂವಿಧಾನ ತಿದ್ದುಪಡಿಯಂತಹ ವಿಚಾರಕ್ಕೆ ಕೇಂದ್ರ ಮುಂದಾಗದು ಎಂದು ಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್‌ ಅತವಾಳೆ ಹೇಳಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಭೇಟಿ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಾರೂ ಕೂಡ ಸಂವಿಧಾನದ ಪೀಠಿಕೆಯನ್ನು(ಪ್ರಿಯಾಂಬಲ್) ಬದಲಿಸಲು ಸಾಧ್ಯವಿಲ್ಲ. ಆಯಾ ಕಾಲಘಟ್ಟಕ್ಕೆ ಸಂಬಂಧಿಸಿ ಸುಧಾರಣೆಯ ನೆಲೆಯಲ್ಲಿ ಸಂವಿಧಾನದಲ್ಲಿ ಕೆಲವೊಂದು ತಿದ್ದುಪಡಿಗಳಾಗಿವೆ. ಆದರೆ ಅದು ಸಂವಿಧಾನದ ಮೂಲ ಆಶಯಕ್ಕೆ […]