Blog Archive

ಕಾಂಗ್ರೆಸ್ ವಿರುದ್ಧ ಘೋಷಣೆ: ರಾಹುಲ್ ಗಾಂಧಿ ಪ್ರತಿಕೃತಿ ದಹನ

Saturday, October 8th, 2016
yuva-morcha

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ರಕ್ತದ ದಲ್ಲಾಳಿ ಎಂದು ಹೇಳಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ರಾಹುಲ್ ಗಾಂಧಿ ಪ್ರತಿಕೃತಿಯನ್ನು ದಹನ ಮಾಡಿದರು. ಜಗತ್ತಿನ ಎಲ್ಲಾ ದೇಶಗಳು ಇತ್ತೀಚೆಗೆ ನಡೆದಂತಹ ಸರ್ಜಿಕಲ್ ಸ್ಟ್ರೈಕ್ ಘಟನೆಯ ಬಗ್ಗೆ ಸಹಮತ ವ್ಯಕ್ತಪಡಿಸಿ ಅಮೆರಿಕಾ, ರಷ್ಯಾ, ಚೀನಾದಂತಹ ದೇಶಗಳೇ ಪ್ರಧಾನಿಯವರ ಬಗ್ಗೆ ಶ್ಲಾಘನೆ ಮಾಡಿದರೆ ರಾಹುಲ್ […]

ಪಾಕ್‌ ಸೇನೆಯ ಗುಂಡೇಟಿಗೆ ಬಲಿಯಾದ 1,000 ಬಲೂಚಿಗಳ ಶವ ಪತ್ತೆ: ವರದಿ

Monday, September 19th, 2016
pak

ಇಸ್ಲಾಮಾಬಾದ್‌ : ಪಾಕಿಸ್ಥಾನದ ಅತೀ ದೊಡ್ಡ ಪ್ರಾಂತ್ಯವಾಗಿರುವ ಬಲೂಚಿಸ್ಥಾನದಲ್ಲಿ ಘೋರ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಮೇಲಿಂದ ಮಾಡಿದ್ದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೇಳುವ ಮೂಲಕ ವಿಶ್ವ ಗಮನವನ್ನು ಸೆಳೆದಿದ್ದರು. ಇದನ್ನು ಪುಷ್ಟೀಕರಿಸುವಂತೆ ಪಾಕ್‌ ದೈನಿಕವೊಂದು, ಸರಕಾರದ ಅಂಕಿ ಅಂಶಗಳನ್ನು ಉಲ್ಲೇಖೀಸಿ, ಪ್ರಕಟಿಸಿರುವ ವರದಿಯ ಪ್ರಕಾರ ಕಳೆದ ಆರು ವರ್ಷಗಳಲ್ಲಿ ಬಲೂಚಿಸ್ಥಾನದ ವಿವಿಧೆಡೆಗಳಲ್ಲಿ ಗುಂಡೇಟಿನಿಂದ ಸತ್ತಿರುವ ಒಂದು ಸಾವಿರ ಮೃತದೇಹಗಳು ಪತ್ತೆಯಾಗಿವೆ. ಇದರೊಂದಿಗೆ ಪಾಕಿಸ್ಥಾನದ ಈ ಪ್ರಾಂತ್ಯದಲ್ಲಿ […]

ಅಂತಾರಾಜ್ಯ ಜಲವಿವಾದ ಇತ್ಯರ್ಥಕ್ಕೆ ಸಮಗ್ರ ಜಲನೀತಿ ಅಗತ್ಯ: ಐವನ್‌ ಡಿ.ಸೋಜಾ

Thursday, September 15th, 2016
ivan-dsouza

ಮಂಗಳೂರು: ಅಂತಾರಾಜ್ಯ ಜಲವಿವಾದಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ರಾಷ್ಟ್ರದಲ್ಲಿ ನಿರ್ದಿಷ್ಟವಾದ ಜಲನೀತಿ ಇಲ್ಲ. ದೇಶಕ್ಕೆ ಒಂದು ಸಮಗ್ರವಾದ ಜಲನೀತಿಯ ಅಗತ್ಯವಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ. ಸೋಜಾ ಹೇಳಿದ್ದಾರೆ. ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ನೀರಿನ ವ್ಯಾಜ್ಯಗಳ ಇತ್ಯರ್ಥಕ್ಕಾಗಿ ಜಲನೀತಿಯನ್ನು ಜಾರಿಗೊಳಿಸಬೇಕು. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರವೇಶಿಸಬೇಕು. ಸರ್ವೋಚ್ಛ ನ್ಯಾಯಾಲಯದ ಆದೇಶವು ಕೇವಲ ಕಾನೂನಿನ ಪರಿಧಿಯಲ್ಲಿ ಆಗಿದೆ. ತೀರ್ಪು ವಸ್ತುಸ್ಥಿತಿಯ ಪ್ರತಿಫಲನವಲ್ಲ. ತಂತ್ರಜ್ಞರ ಸಮಿತಿ […]

12 ಮಹತ್ವದ ಒಪ್ಪಂದಗಳಿಗೆ ಭಾರತ ಮತ್ತು ವಿಯೆಟ್ನಾಂ ಸಹಿ

Saturday, September 3rd, 2016
India,-Vietnam-

ವಿಯೆಟ್ನಾಂ: ತಂತ್ರಜ್ಞಾನ, ಸೈಬರ್ ಸೆಕ್ಯುರಿಟಿ ಹಾಗೂ ಆರೋಗ್ಯ ಸೇರಿದಂತೆ 12 ಮಹತ್ವದ ಒಪ್ಪಂದಗಳಿಗೆ ಭಾರತ ಮತ್ತು ವಿಯೆಟ್ನಾಂ ಶನಿವಾರ ಸಹಿ ಹಾಕಿವೆ. ಸೆಪ್ಟೆಂಬರ್ 4ರಂದು ಚೀನಾದಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಯಾಣ ಬೆಳಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಏತನ್ಮಧ್ಯೆ 2 ದಿನಗಳ ವಿಯೆಟ್ನಾಂ ಪ್ರವಾಸ ಕೈಗೊಂಡಿದ್ದಾರೆ. ಭಾರತ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಯೆಟ್ನಾಂ ಪ್ರಧಾನಿ ಗುಯೆನ್ ಕ್ಸುವಾನ್ ಅವರು 12 ಒಪ್ಪಂದಗಳಿಗೆ ಸಹಿ ಹಾಕಿದ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ವಿಯೆಟ್ನಾಂ […]

ಕಾಶ್ಮೀರ ಕಣಿವೆಯಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಿದೆ: ಮೆಹಬೂಬ ಮುಫ್ತಿ

Saturday, August 27th, 2016
Modi

ದೆಹಲಿ: ಕಾಶ್ಮೀರ ಕಣಿವೆಯಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಿದೆ ಎಂದು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಕಿಡಿ ಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ಪಾಕಿಸ್ತಾನವು ಕಾಶ್ಮೀರದಲ್ಲಿ ಆತಂಕ ಸೃಷ್ಟಿಸುವುದಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೂ ನಮ್ಮೆಲ್ಲರಂತೆಯೇ ಜಮ್ಮು-ಕಾಶ್ಮೀರದ ಪರಿಸ್ಥಿತಿ ಬಗ್ಗೆ ಕಾಳಜಿ ಇದೆ. 2008ರಿಂದಲೂ ಕಾಶ್ಮೀರದ ಸ್ಥಿತಿ ಚೆನ್ನಾಗಿಲ್ಲ. ಆದರೆ ಯುಪಿಎ ಸರ್ಕಾರ ನಿರ್ಲಕ್ಷ್ಯ ಮಾಡುತ್ತಾ ಬಂತು. ಈಗ ಮೋದಿ […]

ದೇಶದಲ್ಲಿ ಸಂಭವಿಸುವ ಅಪಘಾತ ಪ್ರಕರಣಗಳನ್ನು ಪರಿಗಣಿಸಿ ಕಠಿಣ ಕಾನೂನು ಕ್ರಮ ಜಾರಿ

Thursday, August 4th, 2016
drink-and-drive

ಹೊಸದಿಲ್ಲಿ: ದೇಶದಲ್ಲಿ ವಾರ್ಷಿಕ ಸಂಭವಿಸುವ 5 ಲಕ್ಷ ಅಪಘಾತ ಪ್ರಕರಣಗಳಲ್ಲಿ 1.5 ಲಕ್ಷ ಜನ ಸಾವನ್ನಪ್ಪುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರಕಾರ, ರಸ್ತೆ ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಠಿನ ಕಾನೂನುಗಳನ್ನು ಒಳಗೊಂಡ ಮೋಟಾರು ಕಾಯ್ದೆ (ತಿದ್ದುಪಡಿ) ಮಸೂದೆ 2016ಕ್ಕೆ ಬುಧವಾರ ಅನುಮೋದನೆ ನೀಡಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರಿಗೆ 10,000 ರೂ. ವರೆಗೆ ದಂಡ, ಹಿಟ್‌ ಆ್ಯಂಡ್‌ ರನ್‌ ಕೇಸಲ್ಲಿ ಸಂತ್ರಸ್ತರಿಗೆ 2 ಲಕ್ಷ ರೂ. ಪರಿಹಾರ, ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ 10 ಲಕ್ಷ ರೂ. […]

ಮೋದಿ ಭೇಟಿ : ಬಿಸಿಲ ಝಳಕ್ಕೆ ಕುಗ್ಗದ ಕಾರ್ಯಕರ್ತರು

Sunday, May 8th, 2016
Modi Namo

ಕುಂಬಳೆ: ಕೇರಳ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ ನಗರದ ನಗರಸಭಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ಕಾರ್ಯಕ್ರಮ ಸಾವಿರಾರು ಕಾರ್ಯಕರ್ತರ ಸಂಭ್ರಮದೊಂದಿಗೆ ಮುಗಿಲು ಮುಟ್ಟಿತು. ಬೆಳಿಗ್ಗೆ 8.30ರ ವೇಳೆಗೆ ಕ್ರೀಡಾಂಗಣದತ್ತ ಆಗಮಿಸ ತೊಡಗಿದ ವಿವಿಧೆಡೆಗಳ ಕಾರ್ಯಕರ್ತರ ತಂಡ ಮೋದಿಯವರಿಗೆ ಘೋಷಣೆ ಕೂಗುತ್ತಿರುವುದು ಕಂಡುಬಂತು.9.30ರ ವೇಳೆಗೆ ಕ್ರೀಡಾಂಗಣ ಬಹುತೇಕ ಭರ್ತಿಯಾಗಿತ್ತು. ಸುಮಾರು 55 ಸಾವಿರಕ್ಕಿಂತಲೂ ಅಧಿಕ ಮಂದಿ ಮೋದಿಯವರ ಪ್ರಚಾರ ಭೇಟಿಗೆ ಸಾಕ್ಷಿಯಾದರು.ಕಾಸರಗೋಡು ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರ,ಕಣ್ಣೂರು ಜಿಲ್ಲೆ […]

ಬಲಿಷ್ಟ ಭಾರತದ ನಿರ್ಮಾಣದ ಬಜೆಟ್ : ಸಂಸದ ನಳಿನ್

Thursday, July 10th, 2014
Nalin kumar

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಠಿತ್ವದ, ಅಭಿವೃದ್ಧಿಶೀಲ, ಬಲಿಷ್ಟ ಭಾರತದ ನಿರ್ಮಾಣಕ್ಕೆ ಪೂರಕವಾದ ಬಜೆಟನ್ನು ಸಚಿವ ಅರುಣ್ ಜೆಟ್ಲಿ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಜನಸಾಮಾನ್ಯರ ಜೀವನಕ್ಕೆ ಪೂರಕವಾದ ಅಂಶಗಳನ್ನು ಗಮನಿಸಿ, ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದೆ. ಬಟ್ಟೆಬರೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದೆ. ವೇತನ ವರ್ಗದವರಿಗೆ ಆದಾಯ ಮಿತಿ 2.50ಲಕ್ಷಗೆ ವಿಸ್ತರಿಸಲಾಗಿದೆ. ಕೃಷಿ ಉತ್ತೇಜನ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಎಲ್ಲಾ ಮನೆಗಳಿಗೆ […]

ಗುಜರಾತಿಗೆ ಹೋಗಿ ಜನಪ್ರಿಯತೆ ಕಳೆದುಕೊಂಡ ಕೇಜ್ರಿವಾಲ್

Tuesday, March 11th, 2014
Arvind-Kejriwa

ಅಹಮದಾಬಾದ್: ಇತ್ತೀಚೆಗೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲಾ ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಮುಖತಃ ಭೇಟಿಯಾಗಲು ಗುಜರಾತಿಗೆ ಹೋಗಿದ್ದರಲ್ಲ. ಅದರ ಪ್ರಭಾವ/ ಪರಿಣಾಮ ಗೋಚರವಾಗಿದೆ. ಆದರೆ ಅದು ಅವರಿಗೇ ಮುಳುವಾಗಿದೆ. ಕಳೆದ ವಾರ ನಾಲ್ಕು ದಿನಗಳ ಕಾಲ ಗುಜರಾತಿನಲ್ಲಿ ಅಡ್ಡಾಡಿದ ಅರವಿಂದ್ ಕೇಜ್ರಿವಾಲಾ ಭಾರಿ ಯಶಸ್ಸು ಸಾಧಿಸಿದರು ಎಂದು AAP ಬೆಂಬಲಿಗರು ಹೇಳಿಕೊಂಡಿದ್ದರೆ ಅವರ ಟೀಕಾಕಾರರು ಅದೊಂದು ದೊಡ್ಡ ಫ್ಲಾಪ್ ಷೋ ಎಂದು ಜರಿದಿದ್ದಾರೆ. ಇನ್ನು, ಟ್ವಿಟ್ಟರ್ ಮೂಲಕ ನಡೆದಿರುವ […]

ಬಿಜೆಪಿಯಲ್ಲಿ ಟಿಕೆಟ್ ಗೊಂದಲ ಮೋದಿ ಪಾಲಿಗೆ ವಾರಣಸಿ ಪಕ್ಕಾ ಅಟಲ್‌ರ ಲಖನೌ ಲಕ್ ಯಾರಿಗೆ?

Monday, March 10th, 2014
Murli-Manohar-Joshi

ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುವ ಬಗೆಗಿನ ಗೊಂದಲಗಳಿಗೆ ಭಾನುವಾರ ಬಹುತೇಕ ತೆರೆ ಬಿದ್ದಿದೆ. ಕೇಂದ್ರದ ಮಾಜಿ ಸಚಿವ, ಹಾಲಿ ಸಂಸದ ಡಾ. ಮುರಳಿ ಮನೋಹರ ಜೋಶಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಪಕ್ಷದ ವರಿಷ್ಠರು ಯಾವುದೇ ನಿರ್ಧಾರ ಕೈಗೊಂಡರೂ ಅದನ್ನು ನಾನು ಪಾಲಿಸುತ್ತೇನೆ’ ಎಂದು ಅವರು ನವದೆಹಲಿಯಲ್ಲಿ ತಿಳಿಸಿದ್ದಾರೆ. 13ರ ಸಭೆಯಲ್ಲಿ ನಿರ್ಧಾರ: ಮಾ.13ರಂದು ನವದೆಹಲಿಯಲ್ಲಿ ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.  […]