ಪತ್ನಿ ಜೊತೆ ಮಲಗಿದ್ದ ವ್ಯಕ್ತಿ ನಾಪತ್ತೆ, ಮನೆಯವರಲ್ಲಿ ಆತಂಕ

Sunday, November 19th, 2023
Roshan

ಮಂಜೇಶ್ವರ : ರಾತ್ರಿ ವೇಳೆ ಪತ್ನಿ ಜೊತೆ ಮಲಗಿದ್ದ ವ್ಯಕ್ತಿಯೊಬ್ಬರು ಶನಿವಾರ ಮಧ್ಯರಾತ್ರಿ ವೇಳೆ ನಾಪತ್ತೆಯಾದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರ ಚರ್ಚ್ ಬೀಚ್ ರಸ್ತೆಯಲ್ಲಿರುವ ಅಮನ್ ಕಾಟೇಜ್ ಬಳಿಯ ನಿವಾಸಿಯಾಗಿರುವ ದಿ. ಫೆಲಿಕ್ಸ್ ಮೊಂತೆರೋ – ಅಪೋಲಿನ್ ಲೋಬೋ ದಂಪತಿಯ ಪುತ್ರ ರೋಷನ್ ಮೊಂತೆರೋ (42) ನಾಪತ್ತೆಯಾದ ವ್ಯಕ್ತಿ. ಶನಿವಾರ ರಾತ್ರಿ ಊಟ ಮಾಡಿ ಪತ್ನಿ ರೇಖಾ ಮೊಂತೆರೋ ಜೊತೆ ಮಲಗಿದ್ದ ರೋಷನ್, ಮಧ್ಯರಾತ್ರಿ 2.30 ವೇಳೆ ರೇಖಾರಿಗೆ ಎಚ್ಚರವಾದಾಗ ನಾಪತ್ತೆಯಾಗಿದ್ದರು. ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ. […]

ಮೋಸ, ವಂಚನೆ ಮಾಡಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಕೊಲೆ, ಆರೋಪಿಗೆ ಒಂದು ವರ್ಷ ಜೈಲುಶಿಕ್ಷೆ

Saturday, November 11th, 2023
Padmapriya

ಉಡುಪಿ : 2008 ರಲ್ಲಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ. ಶಾಸಕ ರಘುಪತಿಭಟ್ ಪತ್ನಿ ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ 2008 ಜೂನ್ 10ರಂದು ನಾಪತ್ತೆಯಾಗಿದ್ದರು, ಅಂದು ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಆತುಲ್ […]

ಕಾಲೇಜಿಗೆ ಹೋದ ಯುವತಿ ಮನೆಗೆ ಮರಳಿ ಬಾರದೆ ನಾಪತ್ತೆ

Wednesday, December 22nd, 2021
Supriya

ಉಡುಪಿ : ಮನೆಯಿಂದ ಕಾಲೇಜಿಗೆ ಹೋದ ಯುವತಿಯೊಬ್ಬಳು  ಡಿ.15ರಂದು ವರು ಮನೆಗೆ ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಕಳ ತಾಲೂಕು ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟು ನಿವಾಸಿ ಸುಪ್ರಿಯಾ (18) ಕಾಣೆಯಾದ ಯುವತಿ. ಈಕೆ 5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಚೇರಿ ದೂರವಾಣಿ ಸಂಖ್ಯೆ: 08258-231083, 9480805435, ಕಾರ್ಕಳ ಗ್ರಾಮಾಂತರ ಠಾಣೆ […]

ನಾಪತ್ತೆಯಾಗಿದ್ದ ಹೆಣ್ಣು ಮಗು ಹೊಳೆಯಲ್ಲಿ ಶವವಾಗಿ ಪತ್ತೆ

Wednesday, August 11th, 2021
Drithvi

ವೇಣೂರು : ಸುಲ್ಕೇರಿ ಗ್ರಾಮದ ಪರಾರಿ ಎಂಬಲ್ಲಿ  ಆ.10 ರ ಮಂಗಳವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು ಬುಧವಾರ ಶವವಾಗಿ ಪತ್ತೆಯಾಗಿದೆ. ಜಂತಿಗೂಳಿಯ ಪರಾರಿ ನಿವಾಸಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ ಎರಡು ವರ್ಷದ ಹೆಣ್ಣು ಮಗು  ದೃತ್ವಿ ಯೊಂದಿಗೆ ಸುಲ್ಕೇರಿ ಯ ತವರು ಮನೆಯಲ್ಲಿ ವಾಸವಿದ್ದರು. ಮಂಗಳವಾರ ಮಧ್ಯಾಹ್ನ ಸುಚಿತ್ರಾ ಅವರು ಮಗುವನ್ನು ಅಜ್ಜನೊಂದಿಗೆ ಮನೆಯಲ್ಲಿ ಬಿಟ್ಟು ತಾಯಿಯೊಂದಿಗೆ ಹುಲ್ಲು ತರಲು ಎಂದು ಸನಿಹದ ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ ಹಿಂತಿರುಗಿ ಬರುವಷ್ಟರಲ್ಲಿ ಮಗು […]

ಒಂದು ಕೋಟಿ ರೂ.ಗಳಷ್ಟು ನಷ್ಟ, ಬೈಕಂಪಾಡಿಯ ಕ್ಯಾಶು ಪ್ಯಾಕ್ಟರಿ ಮಾಲಕ ನಾಪತ್ತೆ

Sunday, August 1st, 2021
Ramanjaneya

ಮಂಗಳೂರು : ಬೈಕ್‌ನಲ್ಲಿ ಮನೆ ನೋಡಿಕೊಂಡು ಬರುವುದಾಗಿ ಹೇಳಿ ಹೋದ ಬೈಕಂಪಾಡಿಯ ಗೇರುಬೀಜ ಕಾರ್ಖಾನೆಯೊಂದರ ಮಾಲಕ ಹಿಂತಿರುಗದೆ ನಾಪತ್ತೆಯಾದ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕಂಪಾಡಿಯ ಜೈ ಶ್ರೀ ರಾಮ ಲಕ್ಷ್ಮೀ ಕ್ಯಾಶುಸ್’ ಹೆಸರಿನ ಗೇರುಬೀಜ ಕಾರ್ಖಾನೆಯ ಮಾಲಕ ರಾಮಾಂಜನೇಯ ಡಿ. (41) ನಾಪತ್ತೆಯಾದವರು. ಇತ್ತೀಚೆಗೆ ಕಾರ್ಖಾನೆಯು ಸುಮಾರು ಒಂದು ಕೋಟಿ ರೂ.ಗಳಷ್ಟು ನಷ್ಟ ಹೊಂದಿದ್ದರಿಂದ ಬೇಸರ ಗೊಂಡಿದ್ದರು ಎನ್ನಲಾಗಿದೆ. ಜು.29ರಂದು ಅಪರಾಹ್ನ ಬೇರೊಂದು ಮನೆ ನೋಡಿಕೊಂಡು ಬರುವುದಾಗಿ ಹೇಳಿ ಬೈಕ್‌ನಲ್ಲಿ ಹೋದವರು ನಾಪತ್ತೆ ಯಾಗಿದ್ದಾರೆ ಎಂದು ಅವರ […]

ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ, ನಂತರ ವಿಹಾರಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ

Wednesday, April 28th, 2021
Nithin

ಮಂಗಳೂರು : ಸ್ನೇಹಿತರೊಂದಿಗೆ ವಿಹಾರಕ್ಕೆ ತೆರಳಿದ್ದ ವ್ಯಕ್ತಿಯೋರ್ವ ದಿಢೀರ್ ನಾಪತ್ತೆಯಾದ ಘಟನೆ ಸೋಮವಾರ ಸಂಜೆ ನಡೆದಿದ್ದು, ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಉಳ್ಳಾಲಬೈಲ್ ನಿವಾಸಿ ನಿತಿನ್ (32) ನಾಪತ್ತೆಯಾದ ವ್ಯಕ್ತಿ. ನಿತಿನ್ ಸೋಮವಾರ ಮಧ್ಯಾಹ್ನ ಇಬ್ಬರು ಸ್ನೇಹಿತರ ಜೊತೆಗೆ ಸೋಮೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿದ್ದ. ತದನಂತರ ಸಂಜೆ ಮೂವರು ಸೇರಿ ನೇತ್ರಾವತಿ ರೈಲ್ವೇ ಸೇತುವೆ ಬಳಿ ತೆರಳಿದ್ದರು. ಅಲ್ಲಿಂದ ನಿತಿನ್ ನಾಪತ್ತೆಯಾಗಿದ್ದಾನೆ ಎನ್ನಲಾಗ್ತಿದೆ. ಆ ಬಗ್ಗೆ ನಿತಿನ್ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ […]

ಅನಾಥಾಶ್ರಮಕ್ಕೆ ದೇಣಿಗೆ ನೀಡಲು ಹೊರಟ ಮಹಿಳೆ ನಿಗೂಢ ನಾಪತ್ತೆ !

Wednesday, March 3rd, 2021
Hinaj

ಉಳ್ಳಾಲ : ವಿದೇಶದಿಂದ ಬಂದ ಗರ್ಭಿಣಿ ಮಹಿಳೆಯೊಬ್ಬರು ಕಲ್ಲಾಪುವಿನಲ್ಲಿರುವ ಅನಾಥಾಶ್ರಮ ಶಾಲೆಗೆ ದೇಣಿಗೆ ಹಣವನ್ನು ನೀಡಲು ಹೋಗಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾರೆ. ಮಾರ್ಚ್ 2 ರ ಮಂಗಳವಾರ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಾಪು ಎಂಬಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಗರ್ಭಿಣಿಯನ್ನು ಸೋಮೇಶ್ವರ ಒಂಬತ್ತುಕೆರೆ ನಿವಾಸಿ ಇಬ್ರಾಹಿಂ ಎಂಬವರ ಪತ್ನಿ ಹಿನಾಜ್(25) ಎಂದು ಗುರುತಿಸಲಾಗಿದೆ. ಹಿನಾಜ್ ಪತಿಯೊಂದಿಗೆ ವಿದೇಶದಲ್ಲಿದ್ದರು ಮತ್ತು ಕೆಲವು ವಾರಗಳ ಹಿಂದೆ ತಮ್ಮ ತವರೂರಿಗೆ ಮರಳಿದ್ದರು. ಪ್ರತಿಜ್ಞೆಯನ್ನು ಪೂರೈಸಲು ಹಣವನ್ನು ಹಸ್ತಾಂತರಿಸಲು […]

ಜಾತ್ರೆ ಗೆ ಬಂದಿದ್ದ ಇಬ್ಬರು ಮಹಿಳೆಯರು ನಾಪತ್ತೆ

Tuesday, February 16th, 2021
mandarthi

ಬ್ರಹ್ಮಾವರ : ಇಬ್ಬರು ಮಹಿಳೆಯರು ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ನಾಪತ್ತೆಯಾಗಿರುವ ಘಟನೆ ಫೆ.14ರಂದು ನಡೆದಿದೆ. ನಾಪತ್ತೆಯಾದವರನ್ನು ಬೆಳಗಾಂ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಡು ಅಪ್ಪಾಸಾಬ ದಾನವಾಡೆ ಎಂಬವರ ಪತ್ನಿ ಬ್ರಹ್ಮಾವರ ಬೈಕಾಡಿ ಮೂಲದ ಜ್ಯೋತಿ(30) ಹಾಗೂ ಅವರ ತಮ್ಮನ ಪತ್ನಿ ಪ್ರಿಯಾಂಕ(24) ಎಂದು ಗುರುತಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ

Monday, December 21st, 2020
Rasia

ಬ್ರಹ್ಮಾವರ :  ತನ್ನ ಮೂರು ಮಕ್ಕಳೊಂದಿಗೆ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಹಾರಾಡಿ ಗ್ರಾಮದ ಹೊನ್ನಾಳ ಎಂಬಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಹೊನ್ನಾಳ ಬಕ್ಕಪಟ್ಟಣ ನಿವಾಸಿ ಮುಹಮ್ಮದ್ ಖಲೀಲ್ ಎಂಬವರ ಪತ್ನಿ ರಾಸಿಯಾ (32), ಮಕ್ಕಳಾದ ಪಾತಿಮಾ ನಶ್ರಾ (11), ಅಬ್ದುಲ್ ಮುತ್ತಾಹೀರ್ (7), ಆಯಿಷಾ ಝಿಫ್ರಾ (3) ಎಂದು ಗುರುತಿಸಲಾಗಿದೆ. ರಾಸಿಯಾ ಡಿ.18ರಂದು ಬೆಳಗ್ಗೆ ತನ್ನ ಮೂರು ಮಕ್ಕಳೊಂದಿಗೆ ತವರು ಮನೆಯಾದ ಕುಂದಾಪುರದ ಕಂಡ್ಲೂರಿಗೆ ಹೋಗುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸ ಮೊಬೈಲ್ ಫೋನ್ ಅವಾಂತರ, ಮಂಜೇಶ್ವರದ ಒಂದೇ ಮನೆಯಿಂದ ಮೂವರು ಯುವತಿಯರು ನಾಪತ್ತೆ

Thursday, August 20th, 2020
missing

ಮಂಗಳೂರು: ಮಂಜೇಶ್ವರ ಸಮೀಪದ ಮೀಯಪದವು ಎಂಬಲ್ಲಿ ಒಂದೇ ಮನೆಯಿಂದ ಮೂವರು ಯುವತಿಯರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರು 16, 17 ಹಾಗೂ 21 ವಯಸ್ಸಿನ ಸೋದರಿಯಾರಾಗಿದ್ದು ಮನೆಯವರು ಮತ್ತು ಅಕ್ಕ ಪಕ್ಕದವರಲ್ಲಿ ಆತಂಕಕ್ಕೆ  ಕಾರಣವಾಗಿದೆ. ಆಗಸ್ಟ್ 16ರಂದು ಮೂರು ಮಂದಿ ಜೊತೆಯಲ್ಲೇ ಆಸ್ಪತ್ರೆಗೆಂದು ಹೋಗಿದ್ದು ಬಳಿಕ ವಾಪಸ್ ಆಗಿಲ್ಲ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಯುವತಿಯರ  ನಾಪತ್ತೆಗೆ ಹೊಸ ಮೊಬೈಲ್ ಫೋನ್ ಎಂದು ಹೇಳಲಾಗುತ್ತಿದೆ. ಮೂವರಲ್ಲಿ ಓರ್ವ ಯುವತಿ ಕೆಲದಿನಗಳಿಂದ ಹೊಸ ಮೊಬೈಲ್ ಫೋನ್ ಬಳಸುತ್ತಿದ್ದು ಈ ಬಗ್ಗೆ ಮನೆಮಂದಿ ವಿಚಾರಿಸಿದ್ದರು. […]