ಇಲಿಪಾಷಾಣ ಸೇವಿಸಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೃತ್ಯು

Friday, March 12th, 2021
Yashashwini

ಮಂಗಳೂರು  : ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬಳು ಇಲಿಪಾಷಾಣ ಸೇವಿಸಿ ಮೃತಪಟ್ಟ ಘಟನೆ ದೇವಚಳ್ಳ ಗ್ರಾಮದ ಮಾವಿನಕಟ್ಟೆಯಿಂದ ವರದಿಯಾಗಿದೆ. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯನ್ನು ಮಂಗಳೂರಿನ ಆಸ್ಪತ್ರೆ ಗೆ ಕರೆತರಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಳೆನ್ನಲಾಗಿದೆ. ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಈಶ್ವರ ಎಂಬವರ ಪುತ್ರಿ ಯಶಸ್ವಿನಿ (13 ) ಎಂಬಾಕೆ ಮೃತ ವಿದ್ಯಾರ್ಥಿನಿ. ಈಕೆ ವಾರದ ಹಿಂದೆ ಅಂಗಡಿಯೊಂದರಿಂದ ಇಲಿಪಾಷಾಣ ಖರೀದಿಸಿ, ಸೇವಿಸಿ ಶಾಲೆಗೆ ತೆರಳಿದ್ದಳೆನ್ನಲಾಗಿದೆ. ಶಾಲೆಯಲ್ಲಿ ಈಕೆ ಅಸ್ವಸ್ಥಗೊಂಡಾಗ […]

ಕುಂಪಲ ಬೈಪಾಸ್ ಅಫಘಾತ : ಬಾಲಕ ಸಾವು

Saturday, December 5th, 2020
Ayan

ಮಂಗಳೂರು :  ಕುಂಪಲ ಬೈಪಾಸ್‌ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬಾಲಕ ಡಿ.5ರ ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತಪಟ್ಟ ಬಾಲಕನನ್ನು ಬಶೀರ್‌‌‌‌‌ ಅಹ್ಮದ್‌ ಹಾಗೂ ರಿಯಾನ್‌ ದಂಪತಿಗಳ ಹಿರಿಯ ಪುತ್ರ ಐಯಾನ್‌ (16) ಎಂದು ಗುರುತಿಸಲಾಗಿದೆ. ಇವರು ಕುಂಪಲ ಬೈಪಾಸ್‌ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಡಿ..4ರ ಶುಕ್ರವಾರದಂದು ಸಂಜೆ ಐಯಾನ್‌‌ ತನ್ನ ಮನೆಯ ಮುಂದಿನ ರಸ್ತೆ ದಾಟುತ್ತಿದ್ದ ಸಂದರ್ಭ ತಲಪಾಡಿಯಿಂದ ಮಂಗಳೂರು ಕಡೆ  ಹೋಗುತ್ತಿದ್ದ ರಿಟ್ಜ್‌‌ ಕಾರು […]

ಮಗಳ ಪ್ರಯತ್ನಕ್ಕೆ ಸರ್ಕಾರ ಸ್ಪಂದಿಸಿ ದರೂ, ಕೊರೋನಾ ಆ ಶಿಕ್ಷಕಿಯ ಪ್ರಾಣವನ್ನೇ ಕಸಿದುಕೊಂಡಿತು

Friday, October 16th, 2020
Padamkshi

ಮೂಡಬಿದಿರೆ: ವಿವಿಧ ಸ್ಥಳಗಳಿಗೆ ಭೇಟಿ ನೀಡುವ ರಾಜ್ಯ ಸರ್ಕಾರದ ‘ವಿದ್ಯಾಗಮ’ ಯೋಜನೆಯಡಿ ಕರ್ತವ್ಯ ನಿರ್ವಹಿಸುತಿದ್ದ  ಪ್ರೌಢಶಾಲೆಯ  ಶಿಕ್ಷಕಿಯೊಬ್ಬರು  ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೂಡಬಿದಿರೆಯ ಜವಾಹರಲಾಲ್ ನೆಹರೂ ಅನುದಾನಿತ ಪ್ರೌಢಶಾಲೆಯ ಶಿಕ್ಷಕಿಯಾಗಿದ್ದ ಪದ್ಮಾಕ್ಷಿ ಎನ್ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ‘ವಿದ್ಯಾಗಮ’ ಯೋಜನೆಯಡಿ ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದರು. ಅಂತಹ ಭೇಟಿಗಳ ಸಮಯದಲ್ಲಿ ಶಿಕ್ಷಕಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಸೆಪ್ಟೆಂಬರ್ 29 ರಂದು ಅವರು ಕೋವಿಡ್ ಪಾಸಿಟಿವ್ ವರದಿ ಪಡೆದಿದ್ದರು. ಆಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ […]

ಮೊಬೈಲ್ ಬಳಸಬೇಡ ಎಂದು ಅಮ್ಮ ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ

Wednesday, October 14th, 2020
mobile addict

ಮಂಗಳೂರು : ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಅಮ್ಮ ಬುದ್ದಿವಾದ ಹೇಳಿದ್ದಕ್ಕೆ 10 ನೇ ತರಗತಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಳಾಯಿಯಲ್ಲಿ ನಡೆದಿದೆ. ಕುಳಾಯಿಯ ಗೋಕುಲನಗರದ ಸುಜೇತಾ (16 ) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈಕೆ ಸುರತ್ಕಲ್ನ ಖಾಸಗಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಮೊಬೈಲ್ನಲ್ಲೇ ಹೆಚ್ಚಿನ ಸಮಯ ಕಳೆಯುತ್ತಿದ್ದ ಸಜೇತಾಗೆ, ತಾಯಿ ಬುದ್ದಿವಾದ ಹೇಳಿದ್ದರು ಎನ್ನಲಾಗಿದೆ. ತಾಯಿಯ ಬುದ್ದಿಮಾತಿಗೆ ಬೇಸರಗೊಂಡ ಬಾಲಕಿ, ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿ ಮನೆಯ ಟೆರೆಸ್ […]

ವಿದ್ಯುತ್ ಪ್ರವಹಿಸಿ ಎಸೆಸೆಲ್ಸಿ ವಿದ್ಯಾರ್ಥಿ ಮೃತ್ಯು

Saturday, July 18th, 2020
Goutham

ಉಡುಪಿ : ಎಸೆಸೆಲ್ಸಿ ವಿದ್ಯಾರ್ಥಿಯೊಬ್ಬ ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಜು.17ರಂದು ರಾತ್ರಿ ವೇಳೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀನಗರ ಆರನೆ ಕ್ರಾಸ್‌ ನಲ್ಲಿ ನಡೆದಿದೆ. ಮೃತರನ್ನು ಲಕ್ಷ್ಮೀನಗರದ ಮಂಜುನಾಥ್ ನಾಯಕ್ ಎಂಬವರ ಮಗ ಗೌತಮ್(15) ಎಂದು ಗುರುತಿಸಲಾಗಿದೆ. ನೆರೆಮನೆಯವರು ತಮ್ಮ ಬಾವಿಯಿಂದ ಪಂಪ್‌ಸೆಟ್ ಮೇಲಕ್ಕೆತ್ತುವಾಗ ಅಲ್ಲೇ ಸಮೀಪದಲ್ಲಿ ಇದ್ದ ಗೌತಮ್ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯ ಪ್ರತಿಭಾವಂತ ಎಸೆಸೆಲ್ಸಿ ವಿದ್ಯಾರ್ಥಿಯಾಗಿರುವ ಗೌತಮ್, ಇತ್ತೀಚೆಗೆ ನಡೆದ ಎಸೆಸೆಲ್ಸಿ […]