Blog Archive

ಅಮಾಯಕ ಹಿಂದುಗಳಿಗೆ ಆಮಿಷ ಒಡ್ಡಿ ಮತಾಂತರ ಸಹಿಸಲು ಸಾಧ್ಯವಿಲ್ಲ : ಕಾರ್ಕಳ ಬಿಜೆಪಿ

Saturday, September 11th, 2021
Pragathi Center

ಕಾರ್ಕಳ   : ಹಿಂದೂ ಧರ್ಮೀಯರನ್ನು ಗುರಿಯಾಗಿಸಿಕೊಂಡು ಷಡ್ಯಂತ್ರ ನಡೆಸಿ ಮತಾಂತರ ಮಾಡುವ ಆರೋಪಗಳು ಕಾರ್ಕಳದ ವಿವಿಧೆಡೆ ಕಂಡು ಬರುತ್ತಿದೆ, ಇತ್ತೀಚೆಗೆ ಮಿಷನರಿಗಳ ಕುಕೃತ್ಯ ಮಿತಿಮೀರಿದ್ದು ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ನಡೆಸಿ ಹಿಂದೂಗಳ ಸಹನೆಯನ್ನ ಪರೀಕ್ಷೆಗೆ ಒಡ್ಡುತ್ತಿದ್ದಾರೆ. ಒಂದೆಡೆಯಲ್ಲಿ ಮತಾಂತರ ಮತ್ತೊಂದು ಕಡೆ ಗೋಕಳ್ಳತನ ಹಿಂದುಗಳ ಸಹನೆಯ ಕಟ್ಟೆ ಒಡೆಯುವಂತೆ ಮಾಡುತ್ತಿದೆ ಇದು ತಕ್ಷಣ ನಿಲ್ಲಬೇಕು ಇಲ್ಲವಾದಲ್ಲಿ, ಇಂತಹ ಕೃತ್ಯಗಳು ಮುಂದೆ ಸಾಮಾಜಿಕ ಅಶಾಂತಿಗೆ ಕಾರಣವಾಗುವುದರಲ್ಲಿ ಸಂದೇಹವಿಲ್ಲ. ಇಂತಹ ಕೃತ್ಯಗಳನ್ನು ಬಿಜೆಪಿ ತೀಕ್ಷ್ಣವಾಗಿ ಖಂಡಿಸುತ್ತದೆ. ಸಾಮಾಜಿಕ ಶಾಂತಿ ಕದಡುವ […]

ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನದೊಂದಿಗೆ ಮತ್ತೆ ಅಧಿಕ್ಕಾರಕ್ಕೆ ಬರುತ್ತದೆ : ನಳಿನ್ ಕುಮಾರ್ ಕಟೀಲು

Wednesday, September 8th, 2021
nalin kumar

ಬಂಟ್ವಾಳ  : ಮುಂದಿನ ಚುನಾವಣೆಯಲ್ಲಿ 150 ಸ್ಥಾನವನ್ನು ಬಿಜೆಪಿ ಪಡೆಯುವ ಮೂಲಕ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಅನಂತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ 3 ಬೂತ್ ಹಾಗೂ ನೆಟ್ಲಮುಡ್ನೂರು ಗ್ರಾ.ಪಂ.ವ್ಯಾಪ್ತಿಯ 2 ಬೂತ್ ಹಾಗೂ ವೀರಕಂಭ 4 ಬೂತ್ ಗಳ ಅಧ್ಯಕ್ಷ ರುಗಳ ಮನೆಗೆ ಶಾಸಕ ರಾಜೇಶ್ ನಾಯ್ಕ್ ಹಾಗೂ ಬಂಟ್ವಾಳ ಬಿಜೆಪಿ ಮಂಡಲ ಬೇಟಿ ನೀಡಿ ನಾಮಫಲಕ ಅನಾವರಣ 6 ನೇ ದಿನದ […]

ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಜಯ, ಇಲ್ಲಿದೆ ನೋಡಿ ಫಲಿತಾಂಶ

Tuesday, September 7th, 2021
Belagavi

ಬೆಂಗಳೂರು :  ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಕಲಬುರಗಿ ಮಹಾನಗರ ಪಾಲಿಕೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅತಂತ್ರವಾಗಿವೆ. ಬೆಳಗಾವಿ ಮಹಾನಗರ ಪಾಲಿಕೆ ಫಲಿತಾಂಶ (58 ವಾರ್ಡ್ ಗಳು) ಬಿಜೆಪಿ- 35, ಕಾಂಗ್ರೆಸ್-10, ಜೆಡಿಎಸ್-00, ಎಂಇಎಸ್-01, ಪಕ್ಷೇತರರು-12 ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ (55 ವಾರ್ಡ್ ಗಳು) ಬಿಜೆಪಿ-23, ಕಾಂಗ್ರೆಸ್-27, ಜೆಡಿಎಸ್-04, ಪಕ್ಷೇತರರು-01 ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ […]

ದೇಶ ವಿರೋಧಿ ಕೃತ್ಯ ಸಹಿಸಲು ಸಾಧ್ಯವಿಲ್ಲ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್

Tuesday, August 17th, 2021
Nalin-Kumar Kateel

ಮಂಗಳೂರು : ಪುತ್ತೂರಿನ ಕಬಕದಲ್ಲಿ ಗ್ರಾಮ ಸ್ವರಾಜ್ಯ ರಥಕ್ಕೆ ಎಸ್‌ಡಿಪಿಐ ಕಾರ್ಯಕರ್ತರು ಅಡ್ಡಿ ಪಡಿಸಿರುವುದು ದೇಶ ವಿರೋಧಿ ಕೃತ್ಯವಾಗಿದೆ. ವೀರ ಸಾವರ್ಕರ್ ಅವರಿಗೆ ಅಪಮಾನ ಮಾಡುವವರನ್ನು ಸಹಿಸಲು ಸಾಧ್ಯವಿಲ್ಲ. ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಐಸಿಸ್ ಉಗ್ರರ ಜತೆ ಸಂಬಂಧ ಇರಿಸಿಕೊಂಡವರನ್ನು ಇತ್ತೀಚೆಗೆ ಉಳ್ಳಾಲದಲ್ಲಿ ಬಂಧಿಸಲಾಗಿದೆ. ಇದೀಗ ಕಬಕದಲ್ಲಿ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸುವ ಪ್ರಕರಣ ನಡೆದಿದೆ. ಕರಾವಳಿಯಲ್ಲಿ ಸಮಾಜ […]

ಹೊಸದಾಗಿ ಆಯ್ಕೆಯಾದ ಜಿಲ್ಲೆಯ 3 ಮಂತ್ರಿಗಳನ್ನು ಬಿಜೆಪಿ ಜಿಲ್ಲಾ ಸಮಿತಿಯು ಅಭಿನಂದಿಸಿದೆ

Saturday, August 7th, 2021
BJP

ಬಸವರಾಜ ಬೊಮ್ಮಾಯಿ ಜನತಾ ಪರಿವಾರದಿಂದ ಬಂದವರು, ಬಿಜೆಪಿಯ ಕೆಲವು ನಾಯಕರಿಗೆ ಒಳಗೊಳಗೇ ಅಸಮಾಧಾನ !

Sunday, August 1st, 2021
Basavaraja Bommai

ಬೆಂಗಳೂರು : ಜನತಾ ಪರಿವಾರದಿಂದ ಬಂದವರೇ ಹೆಚ್ಚು ಜನ ಮುಖ್ಯಮಂತ್ರಿಗಳಾಗಿರುವುದು ಎಂದು ಮಾಜಿ ಸಚಿವ ಹೆಚ್‌ಡಿ.ರೇವಣ್ಣ ಹೇಳಿದ ಬಳಿಕ ಸಂಘ ಪರಿವಾರದ ಹಿನ್ನೆಲೆ ಇರುವ ಕೆಲವು ಬಿಜೆಪಿ ಮುಖಂಡರಿಗೆ ಮುಜುಗರ ಉಂಟುಮಾಡಿದೆ. ಅಷ್ಟರವರೆಗೆ ಬಸವರಾಜ ಬೊಮ್ಮಾಯಿ ಹೊರಗಿನವರು ಎಂಬ ಭಾವನೆ ಇರಲಿಲ್ಲ. ಜೆಡಿಯಸ್ ನವರು ಈ ರೀತಿ ಹೇಳುತ್ತಿರುವುದರಿಂದ ಸಂಘ ಪರಿವಾರದವರಿಗೆ ‘ನಮ್ಮ ಕೈಗೆ ಬಂದ ಅಧಿಕಾರ ಜನತಾ ಪರಿವಾರದ ಮೂಲದವನ ಬಾಯಿಗೆ ಬಿತ್ತಲ್ಲಾ ಎಂಬ ಭಾವನೆ ಕಾಡತೊಡಗಿದೆ. ಬಸವರಾಜ ಬೊಮ್ಮಾಯಿ ಸಿಎಂ ಆದ ಮೇಲೆ ಮೊದಲ […]

ಮುಂದಿನ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೆಸರು

Monday, July 26th, 2021
Nalin-Kumar-Kateel

ಮಂಗಳೂರು: ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ನಿನ್ನೆ ರಾತ್ರೋ ರಾತ್ರಿ ಮಂಗಳೂರಿನಿಂದ ದೆಹಲಿಗೆ ತೆರಳಿದ್ದಾರೆ.  ಈ ಬೆಳವಣಿಗೆ ರಾಜಕೀಯದಲ್ಲಿ ಕುತೂಹಲ ಮೂಡಿಸಿದ್ದು, ರಾಜ್ಯದ ಮುಖ್ಯಮಂತ್ರಿಯಾಗುವ ಮುಖಂಡರ ಪಟ್ಟಿಯಲ್ಲಿ ನಳಿನ್ ಕುಮಾರ್ ಕಟೀಲ್ ಹೆಸರು ಇದೆ ಎನ್ನಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ ಬಳಿಕ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ಹೆಚ್ಚುತ್ತಿದ್ದಂತೆ, ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಮಹತ್ವ ಪಡೆದಿದೆ. ಹೈಕಮಾಂಡ್‌ ಬಳಿಯ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ನಳಿನ್‌ ಹೆಸರು ಸೇರ್ಪಡೆಯಾಗಿರುವುದು ಹೊಸ ಬೆಳವಣಿಗೆಯಾಗಿದೆ. ಪುತ್ತೂರಿನಲ್ಲಿರುವ […]

ಮುದ್ರಾಡಿ ಕಾಂಗ್ರೆಸ್ ಪ್ರಮುಖರು ಬಿಜೆಪಿ ಸೇರ್ಪಡೆ

Friday, July 16th, 2021
Karkala

ಕಾರ್ಕಳ : ಕಳೆದ ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ  ವಿವಿಧ ಪಕ್ಷಗಳಿಂದ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳುವವರ ಸರದಿ ಮುಂದುವರಿದಿದ್ದು ಮುದ್ರಾಡಿ ಗ್ರಾಮ ಪಂಚಾಯತ್‌ನ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ 4 ಬಾರಿ ಆಯ್ಕೆಯಾಗಿದ್ದ ಸಂತೋಷ್ ಕುಮಾರ್ ಶೆಟ್ಟಿ ಮತ್ತು ಕಳೆದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯಶೋಧ ಶೆಟ್ಟಿ ರವರು ಶಾಸಕರ ಕಛೇರಿ ವಿಕಾಸದಲ್ಲಿ ಶಾಸಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಮುದ್ರಾಡಿಯಲ್ಲಿ ಕಾಂಗ್ರೆಸ್‌ನವರ ದಬ್ಬಾಳಿಕೆಯನ್ನು ವಿರೋದಿಸಿ ಮತ್ತು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತು, ಶಾಸಕರ […]

ಬಹಿರಂಗ ಹೇಳಿಕೆ ಕೊಡವರ ವಿರುದ್ಧ ಕಠಿನ ಕ್ರಮ ನಾಯಕತ್ವ ಬದಲಾವಣೆ ಇಲ್ಲ

Friday, June 18th, 2021
R Ashoka

ಬೆಂಗಳೂರು : ಶುಕ್ರವಾರ  ಸಂಜೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸರ್ಕಾರದ ಇಮೇಜ್ ಹೆಚ್ಚಿಸಲು ಚರ್ಚೆ ನಡೆಸಲಾಗಿದೆ. ಎಂದು ಕಂದಾಯ ಸಚಿವರಾದ  ಆರ್ ಅಶೋಕ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ, ಜೂನ್ 25 ರಂದು ಕರಾಳ ದಿನ ಆಚರಣೆಗೆ ನಿರ್ಧರಿಸಲಾಗಿದೆ. ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿದ್ದನ್ನು ಖಂಡಿಸಿ ಕರಾಳದಿನ ಆಚರಿಸಲಾಗುವುದು ಎಂದು ಕಂದಾಯ ಸಚಿವರಾದ ಶ್ರೀ ಆರ್. ಅಶೋಕ್ ರವರು ತಿಳಿಸಿದ್ದಾರೆ. ಕೋರ್ ಕಮಿಟಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 21 ರಂದು ಕೊರೋನಾ ನಿಯಮ […]

ಭಿನ್ನಮತೀಯರಿಂದ, ಪಕ್ಷಕ್ಕೆ, ಸರಕಾರಕ್ಕೆ ಮುಜುಗರ ಉಂಟಾಗಿದೆ : ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

Thursday, June 17th, 2021
Arun-Singh

ಬೆಂಗಳೂರು : ಕೇವಲ ಇಬ್ಬರು ಅಥವಾ ಮೂವರು ಮಂದಿ ಲಕ್ಷಾಂತರ ಕಾರ್ಯಕರ್ತರಿಗೆ ನೋವುಂಟುಮಾಡುತ್ತಿದ್ದು, ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದಾರೆ. ನಾವು ಇದನ್ನು ಗಮನಿಸುತ್ತಿದ್ದೇವೆ, ಅವರೊಂದಿಗೆ ಮಾತನಾಡಲಿದ್ದೇವೆ, ಪರಿಸ್ಥಿತಿ ಮಿತಿ ಮೀರಿದರೆ ಏನು ಅಗತ್ಯವಿದೆಯೋ ಅದನ್ನು ಮಾಡುತ್ತೇವೆ” ಎಂದು  ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನುಡಿದಿದ್ದಾರೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಕೆಲವು ಶಾಸಕರು ಬೇಡಿಕೆ ಇಡುತ್ತಿರುವ ಪರಿಣಾಮ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸರ್ಕಾರ, ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವವರಿಗೆ ಎಚ್ಚರಿಕೆ ಸಂದೇಶ […]