ಹೆಂಡತಿ ಮಗುವನ್ನು ಹೊರಗೆ ಹಾಕಿ ಮೂರನೇ ಮದುವೆಯಾದ ಭೂಪ

Monday, October 4th, 2021
Raghavendra Kulakarni

ಮೂಡಬಿದ್ರೆ :  ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ 2017 ರ ಜೂನ್ 18 ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದ. ಮದುವೆ ಸಂದರ್ಭದಲ್ಲಿ ಒಂದು ಲಕ್ಷ ರೂಪಾಯಿ ವರದಕ್ಷಿಣೆ ಕೂಡ ಪಡೆದಿದ್ದ. ಮದುವೆಯಾದ […]

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪುತ್ರಿ ಮದುವೆಯಲ್ಲಿ ರಾಷ್ಟ್ರ, ರಾಜ್ಯ ನಾಯಕರು

Wednesday, September 1st, 2021
Prahlad Joshi

ಹುಬ್ಬಳ್ಳಿ:  ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪುತ್ರಿ ಅರ್ಪಿತಾ ಹಾಗೂ ಹೃಷಿಕೇಶ್ ಮದುವೆ ಇಲ್ಲಿನ ಡೆನಿಸನ್ಸ್ ಹೋಟೆಲ್‌ನಲ್ಲಿ ಬುಧವಾರ ಅದ್ಧೂರಿಯಾಗಿ ನಡೆಯಿತು.  ಸಮಾರಂಭದಲ್ಲಿ ರಾಷ್ಟ್ರ, ರಾಜ್ಯ ನಾಯಕ ರು ಭಾಗವಹಿಸಿ ಶುಭ ಹಾರೈಸಿದರು. ರಾಜ್ಯಪಾಲ ಥಾವರಚಂದ್‌ ಗೆಹಲೋತ್, ಕೇಂದ್ರ ಸಚಿವರಾದ ಡಿ.ರಾವ್‌ಸಾಹೇಬ್ ದಾದಾರಾವ್‌, ಅರ್ಜುನ್‌ ರಾಮಪಾಲ್‌ ಮೇಘ್ವಾಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್‌. ಅಶೋಕ್, ಹಾಲಪ್ಪ ಆಚಾರ್‌, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತ್ತಿತರರು ಪಾಲ್ಗೊಂಡಿದ್ದರು. ಗುರವಾರ […]

ಮಂಗಳಾದೇವಿ ದೇವಸ್ಥಾನದಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಾಲ್ಕು ಜೋಡಿಗಳ ಮದುವೆ, ಜಂಟಿ ದಾಳಿ

Sunday, June 20th, 2021
Mangaladevi

ಮಂಗಳೂರು : ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಾಲ್ಕು ಜೋಡಿಗಳ ಮದುವೆ ಅದ್ದೂರಿಯಾಗಿ ನಡೆಯುತ್ತಿತ್ತು. ಸ್ಥಳಕ್ಕೆ ಮಂಗಳೂರು ಮಹಾನಗರ ಪಾಲಿಕೆ ( ಮನಪಾ) ಸಹಾಯಕ ಆಯುಕ್ತ ಮತ್ತು ಕಂದಾಯ ಇಲಾಖೆಯ ಉಪ ಆಯುಕ್ತ ಜಂಟಿ ದಾಳಿ ನಡೆಸಿ ಮದುವೆ ನಿಲ್ಲಿಸಿದ್ದಾರೆ. ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ, ಎಕ್ಕೂರಿನ ಭಾಸ್ಕರಚಂದ್ರ ಶೆಟ್ಟಿಯವರ ಪುತ್ರಿಯ ವಿವಾಹ ಸೇರಿದಂತೆ ನಾಲ್ಕು ಜೋಡಿಗಳ ಮದುವೆಯನ್ನು ಏರ್ಪಡಿಸಲಾಗಿತ್ತು. ಮದುವೆ ಹಿನ್ನೆಲೆ ದೇವಸ್ಥಾನದ ಮುಂಭಾಗದಲ್ಲಿ 40ಕ್ಕೂ ಹೆಚ್ಚು ಕಾರು […]

ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಸಿವಿಲ್ ಎಂಜಿನಿಯರ್, ಮನನೊಂದ ಪತ್ನಿ ಆತ್ಮಹತ್ಯೆ

Thursday, June 10th, 2021
rachitha

ಕಲಬುರಗಿ : ಎರಡೂವರೆ ವರ್ಷದ ಹಿಂದೆ  ಮದುವೆಯಾಗಿದ್ದ ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿಯ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು 21 ವರ್ಷದ ರಚಿತಾ ಎಂದು ಗುರುತಿಸಲಾಗಿದೆ. ರಚಿತಾ ಅವರಿಗೆ  ಕಳೆದ ಎರಡೂವರೆ ವರ್ಷದ ಹಿಂದೆ ವೀರಣ್ಣ ಎಂಬವರ ಜೊತೆ ಮದುವೆಯಾಗಿತ್ತು. ಸಿವಿಲ್ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ ವೀರಣ್ಣ, ಮದುವೆಯಾದ ಬಳಿಕ ಹಣಕ್ಕಾಗಿ ಪತ್ನಿಯನ್ನು ಪೀಡಿಸಿ ತೊಂದರೆ ಕೊಡ್ತಿದ್ದ ಎಂದು ಹೇಳಲಾಗಿದೆ. ಮಂಗಳವಾರ  ತವರು ಮನೆಯಿಂದ ಹಣ ತೆಗೆದುಕೊಂಡು ಬರುವಂತೆ ಗಲಾಟೆ […]

ಉಡುಪಿ ಜಿಲ್ಲೆಯಲ್ಲಿ ಜೂ.7ರ ವರೆಗೆ ಮದುವೆಗೆ ಅನುಮತಿ ಇಲ್ಲ

Monday, May 24th, 2021
Udupi-DC

ಉಡುಪಿ :   ಮೇ 25ರಿಂದ ಜೂ.7ರ ವರೆಗೆ  ಉಡುಪಿ ಜಿಲ್ಲೆಯಲ್ಲಿ ಮದುವೆಗೆ ಅನುಮತಿ ನೀಡುವುದಿಲ್ಲ. ಈವರೆಗೆ ಅನುಮತಿ ನೀಡಿದ ಮದುವೆಗಳು ಮಾತ್ರ ನಡೆಯಲಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರೊಂದಿಗೆ ನಡೆಸಿದ ವೀಡಿಯೊ ಕಾನ್ಫರೆನ್ಸ್ ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮದುವೆಯಿಂದ ಕೊರೋನ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿಈ ನಿರ್ಧಾರ ಕೈಗೊಳ್ಳಲಾಗಿದೆ.  ಮದುವೆ ಆಗಲು ನಿರ್ಧಾರ ಮಾಡಿದವರು ಅದನ್ನು ಮುಂದೂಡಬೇಕು. ಸಾರ್ವಜನಿಕರು ಸಹಕಾರ ನೀಡಬೇಕು. ಈ […]

ಈ ಬಾರಿಯ ಕೋವಿಡ್ ಕರ್ಫ್ಯೂ ನಿಂದ ಕೊರೋನ ನಿಯಂತ್ರಣ ಕಷ್ಟ ಸಾಧ್ಯ : ಶೋಭಾ ಕರಂದ್ಲಾಜೆ

Thursday, May 6th, 2021
shobha karandlaje

ಉಡುಪಿ : ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಕೊರೋನ ಸೋಂಕು ನಿಯಂತ್ರಣಕ್ಕಾಗಿ ಕಳೆದ ಬಾರಿಯಂತೆ ಗಂಭೀರವಾಗಿ ಕರ್ಪ್ಯೂ ಮಾಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಉಡುಪಿ ಜಿಲ್ಲೆ ಯಲ್ಲಿ ಕೋವಿಡ್  ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ಬಾರಿಯ ಕೋವಿಡ್ ಕರ್ಫ್ಯೂ ನಿಂದ ನಿಯಂತ್ರಣ ಕಷ್ಟ ಸಾಧ್ಯ. ಕಳೆದ ಬಾರಿಯಂತೆ ಗಂಭೀರವಾಗಿ ಕರ್ಪ್ಯೂ ಮಾಡಬೇಕು. ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಬೇಕು. ಉಳಿದಂತೆ ಪೂರ್ಣ ಲಾಕ್ಡೌನ್ ಮಾಡಬೇಕು. ಜನ ಈಗಿನಂತೆ ಓಡಾಡಿದರೆ ಕೋವಿಡ್ ನಿಯಂತ್ರಣ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ14 ದಿನಗಳ ಲಾಕ್‌ಡೌನ್-ಕರ್ಫ್ಯೂನಲ್ಲಿ ಜನ ಹೇಗಿರಬೇಕು ಇಲ್ಲಿದೆ ನೋಡಿ ವಿವಿರ !

Tuesday, April 27th, 2021
DC

ಮಂಗಳೂರು : ರಾಜ್ಯಾದ್ಯಂತ ಏಪ್ರಿಲ್ 27 ರಿಂದ ಬೆಳಗ್ಗೆ 10 ರಿಂದ ಮರುದಿನ  ಮುಂಜಾನೆ 6 ಗಂಟೆಯವರೆಗೆ ಪ್ರತಿದಿನ 20 ಗಂಟೆ ಲಾಕ್‌ಡೌನ್-ಕರ್ಫ್ಯೂ ವಿಧಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10ರವರೆಗೆ ಅವಕಾಶ ಕಲ್ಪಿಸಲಾಗಿದೆ. ತುರ್ತು ಆರೋಗ್ಯ ಸೇವೆ, ಮದುವೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮತ್ತು ಪರೀಕ್ಷೆಗಳಲ್ಲಿ ಹಾಜರಾಗಲು ಪೂರಕ ದಾಖಲೆಪತ್ರಗಳೊಂದಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ದ.ಕ.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 14 ದಿನಗಳ ಕಾಲ ಕರ್ಪ್ಯೂ […]

ಕುಳಾಯಿ ಕಾರು ಅಪಘಾತ ಮಹಿಳೆ ಸಾವು, ಮೂವರಿಗೆ ಗಂಭೀರ ಗಾಯ

Thursday, February 4th, 2021
Car Accident Kulai

ಮಂಗಳೂರು : ಕುಳಾಯಿ ಸಮೀಪ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಬುಧವಾರ ರಾತ್ರಿ  ನಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತ ಮಹಿಳೆಯನ್ನು ಬೋಂದೆಲ್‌ ನಿವಾಸಿ ಸುಹಾನಾ (26) ಎಂದು ಗುರುತಿಸಲಾಗಿದೆ‌. ಕಾರಿನಲ್ಲಿ‌ ಸುಹಾನಾರ ಸಹೋದರಿ ಫಾತಿಮಾ ಶೌರೀನ್, ಸಹೋದರರಾದ ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಗಂಭೀರ ಗಾಯಗಳಾಗಿವೆ, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮಕ್ಕೆ ತೆರಳಲು ಸಿದ್ಧತೆಯಲ್ಲಿತ್ತು,  ಕಾರು […]

ಈಶ್ವರಮಂಗಲದ ಮದುವೆಯ ಬಸ್ಸು ದುರಂತ ; ಮೃತರ ಸಂಖ್ಯೆ ಎಂಟಕ್ಕೇರಿಕೆ

Sunday, January 3rd, 2021
suraksha bus

ಕಾಸರಗೋಡು : ಸುಳ್ಯದ ಈಶ್ವರಮಂಗಲದಿಂದ  ಕಾಸರಗೋಡಿನ ಪಾಣತ್ತೂರು ಕರಿಕೆಗೆ ಮದುವೆಯ ದಿಬ್ಬಣ ಹೊರಟಿದ್ದ ಸುಮಾರು ಅರವತ್ತು ಜನರಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಮಕ್ಕಳು ಸೇರಿದಂತೆ 8 ಜನ ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಪಾಣತ್ತೂರು ಕಲ್ಲಪ್ಪಳ್ಳಿ ಬಳಿ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಮತ್ತು ಪುತ್ತೂರಿನ ನಿವಾಸಿಗಳಾದ ರಾಜೇಶ್, ರವಿ ಚಂದ್ರನ್, ಸುಮತಿ, ಜಯಲಕ್ಷ್ಮಿ, ಶ್ರೇಯಸ್ ಮತ್ತು ಆದರ್ಶ್  ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಕಾಞಂಗಾಡ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾದ 29 […]

ಮಂಗಳೂರು : ಮದುವೆ ಮನೆಗೆ ದಾರಿ ಕೇಳಿದ್ದಕ್ಕೆ ಹಲ್ಲೆ, ರೌಡಿಶೀಟರ್ ಮತ್ತು ಸಹಚರರ ಬಂಧನ

Wednesday, December 9th, 2020
Gowrish

ಮಂಗಳೂರು :  ಮದುವೆ ಮನೆಯಲ್ಲಿ ನಡೆದ ದಾಂಧಲೆಗೆ ಸಂಬಂಧಿಸಿ ರೌಡಿಶೀಟರ್ ಸಹಿತ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿ ರೌಡಿಶೀಟರ್ ಗೌರೀಶ್, ಆತನ ಸ್ನೇಹಿತರಾದ ತಲಪಾಡಿಯ ಸುಮಂತ್, ಬಜಾಲ್ ಸುಮಂತ್ ಮತ್ತು ಆಶಿತ್ ಬಂಧಿತ ಆರೋಪಿಗಳು. ಇವರು ಪಡೀಲ್ ಬಡ್ಲಗುಡ್ಡೆಯಲ್ಲಿ ಸೋಮವಾರ ರಾತ್ರಿ ಮದುವೆಗೆ ಬಂದವರಿಗೆ ಹಲ್ಲೆ ನಡೆಸಿದ್ದರು. ಮುಂಬೈಯಿಂದ ಮದುವೆ ಕಾರ್ಯಕ್ರಮಕ್ಕೆ ಬಂದ ಅತಿಥಿಗಳನ್ನು ಗೌರೀಶ್ ತನ್ನ ಗೆಳೆಯರನ್ನು ಕರೆಸಿ ಮಹಿಳೆಯರನ್ನು ಸಹಿತ ಎಳೆದಾಡಿ, ಹೆಲ್ಮೆಟ್‌ನಿಂದ ಹಲ್ಲೆ ಮಾಡಿದ್ದಾನೆ ಎಂದು ದೂರಲಾಗಿದೆ. ಗೌರೀಶ್ ಬಳಿ ಮದುವೆ  ಮನೆಗೆ ದಾರಿ […]