Blog Archive

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Friday, August 13th, 2021
Bommai-Udupi

ಉಡುಪಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ  ಪಲಿಮಾರು ಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಶ್ವೇಶ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಸಚಿವರಾದ ಡಾ: ಕೆ.ಸುಧಾಕರ್, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಳಿಕ ಉಡುಪಿಯಲ್ಲಿ ಜಿಲ್ಲಾಡಳಿತದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷ್ಣನ ದರ್ಶನಕ್ಕಾಗಿ ಸಣ್ಣವನಿದ್ದಾಗ ಉಡುಪಿಗೆ ಆಗಮಿಸುತ್ತಿದ್ದೆ. ಆದರೆ, ಕಳೆದ ಬಾರಿ ಎಲ್ಲರು ಸೇರಿ ಉಡುಪಿ ಜಿಲ್ಲೆಯ ಉಸ್ತುವಾರಿ […]

ಪುಷ್ಪ ಬೆಳೆಗಾರರ ಆದಾಯ ಕಿತ್ತುಕೊಂಡ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನಿಷೇಧವನ್ನು ಕೂಡಲೇ ಹಿಂಪಡೆಯಿರಿ

Thursday, August 12th, 2021
Flower Marchant

ಬೆಂಗಳೂರು :  ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ಬಳಸಬಾರದು ಎಂದಿರುವುದು ಮೊದಲೇ ಲಾಕ್ ಡೌನ್ ಮತ್ತು ಯಾವುದೇ ಸಮಾರಂಭಗಳಿಲ್ಲದೆ ಆರ್ಥಿಕ ಸಂಕಷ್ಟಕ್ಕೊಳಗಾದ ರಾಜ್ಯದ ಪುಷ್ಪ ಬೆಳೆಗಾರ ರೈತರ ಮೇಲೆ ಮಾಡಿದ ಗಧಾಪ್ರಹಾರ ಎಂದು  ಪುಷ್ಪ ಬೆಳೆಗಾರರು ಹಾಗೂ ಮಾರಾಟಗಾರರ ಸಂಘಟನೆಗಳು ಪ್ರತಿಭಟನೆಗೆ ಇಳಿದಿದೆ. ಕೆಲ ದಿನಗಳ ಹಿಂದೆ ವಿ.ಸುನಿಲ್ ಕುಮಾರ್ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ನೂತನ ಸಚಿವರು ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ವೆಸ್ಟ್, ಅದರ ಬದಲು […]

ಉರ್ವಸ್ಟೋರ್‌ನ ದೇರೆಬೈಲ್ ನಲ್ಲಿ ಅಂಬೇಡ್ಕರ್ ಭವನ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ

Thursday, August 12th, 2021
Ambedkar-Bhavana

ಮಂಗಳೂರು : ದ.ಕ. ಜಿಲ್ಲಾಡಳಿತ, ಜಿಪಂ, ಮಂಗಳೂರು ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ  ಉರ್ವಸ್ಟೋರ್‌ನ ದೇರೆಬೈಲ್ ಅಂಗಡಿಗುಡ್ಡೆಯಲ್ಲಿ ನಿರ್ಮಾಣಗೊಂಡ  ನೂತನ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಟ್ಟಡ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆ.12 ರ ಗುರುವಾರ ಲೋಕಾರ್ಪಣೆ ಮಾಡಿದರು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮೀನುಗಾರಿಕೆ ಹಾಗೂ ಬಂದರು ಸಚಿವ ಅಂಗಾರ ಎಸ್.   ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. […]

ಕೋವಿಡ್ ನಿಯಂತ್ರಣಕ್ಕೆ ಎಂಟು ಜಿಲ್ಲೆಗಳಲ್ಲಿ `ವೀಕೆಂಡ್ ಕರ್ಫ್ಯೂ’ವನ್ನು ಜಾರಿ

Friday, August 6th, 2021
Basavaraja Bommai

ಬೆಂಗಳೂರು : ಕರ್ನಾಟಕ ರಾಜ್ಯದ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದಲೇ `ವೀಕೆಂಡ್ ಕರ್ಫ್ಯೂ’ವನ್ನು ಜಾರಿಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 9ಗಂಟೆಯಿಂದಲೇ ಸೋಮವಾರ ಬೆಳಗ್ಗೆ 5ಗಂಟೆಯ ವರೆಗೆ ವಾರಂತ್ಯದ ಕರ್ಪ್ಯೂ ಜಾರಿಯಲ್ಲಿರಲಿದೆ. ಮಾರ್ಗಸೂಚಿ ಪಾಲಿಸಿ ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಸೇರಿದಂತೆ ಇತರೆ ಧಾರ್ಮಿಕ ಸ್ಥಳಗಳಲ್ಲಿ ಪೂಜೆ, […]

ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಮುಖ್ಯಮಂತ್ರಿಗಳ ಭೇಟಿ

Thursday, August 5th, 2021
Bjp office

ಬೆಂಗಳೂರು :  ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದರು. ಬಿಜೆಪಿ ಕಚೇರಿಯಲ್ಲಿನ ಭಾರತ ಮಾತೆಯ ಭಾವಚಿತ್ರ ಹಾಗೂ ಶ್ರೀ ಜಗನ್ನಾಥರಾವ್ ಜೋಶಿ ಅವರ ಪುತ್ಥಳಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಸಿಹಿ ತಿನ್ನಿಸಿ ಶುಭ ಕೋರಿದರು.

ಮುಖ್ಯಮಂತ್ರಿ ಭೇಟಿ ಮಾಡಿದ ಬ್ರಿಟಿಷ್ ಹೈ ಕಮಿಷನರ್- ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಕುರಿತು ಚರ್ಚೆ

Thursday, August 5th, 2021
British

ಬೆಂಗಳೂರು :  ಭಾರತದ ಬ್ರಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಬಲಪಡಿಸುವ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ಹೂಡಿಕೆದಾರ ಸ್ನೇಹಿ ವಾತಾವರಣದ ಸದುಪಯೋಗ ಪಡೆಯುವಂತೆ ಮುಖ್ಯಮಂತ್ರಿಗಳು ಬ್ರಿಟಿಷ್ ಹೈ ಕಮಿಷನರ್ ಅವರಿಗೆ ಸಲಹೆ ಮಾಡಿದರು. ಕರ್ನಾಟಕ ಅತ್ಯಂತ ಪ್ರಗತಿ ಪರ ರಾಜ್ಯವಾಗಿದ್ದು, ಹೂಡಿಕೆಗೆ ಅತ್ಯುತ್ತಮ ಪೂರಕ ವಾತಾವರಣ ಹೊಂದಿದೆ. ಕೈಗಾರಿಕೋದ್ಯಮಗಳ ಸ್ಥಾಪನೆಗೆ ತ್ವರಿತ ಅನುಮೋದನೆ ನೀಡುವ ವ್ಯವಸ್ಥೆ ಜಾರಿಯಲ್ಲಿದೆ.ತಂತ್ರಜ್ಞಾನ, ಶಿಕ್ಷಣದಲ್ಲಿ […]

ಬಸವರಾಜ ಬೊಮ್ಮಾಯಿ ಜನತಾ ಪರಿವಾರದಿಂದ ಬಂದವರು, ಬಿಜೆಪಿಯ ಕೆಲವು ನಾಯಕರಿಗೆ ಒಳಗೊಳಗೇ ಅಸಮಾಧಾನ !

Sunday, August 1st, 2021
Basavaraja Bommai

ಬೆಂಗಳೂರು : ಜನತಾ ಪರಿವಾರದಿಂದ ಬಂದವರೇ ಹೆಚ್ಚು ಜನ ಮುಖ್ಯಮಂತ್ರಿಗಳಾಗಿರುವುದು ಎಂದು ಮಾಜಿ ಸಚಿವ ಹೆಚ್‌ಡಿ.ರೇವಣ್ಣ ಹೇಳಿದ ಬಳಿಕ ಸಂಘ ಪರಿವಾರದ ಹಿನ್ನೆಲೆ ಇರುವ ಕೆಲವು ಬಿಜೆಪಿ ಮುಖಂಡರಿಗೆ ಮುಜುಗರ ಉಂಟುಮಾಡಿದೆ. ಅಷ್ಟರವರೆಗೆ ಬಸವರಾಜ ಬೊಮ್ಮಾಯಿ ಹೊರಗಿನವರು ಎಂಬ ಭಾವನೆ ಇರಲಿಲ್ಲ. ಜೆಡಿಯಸ್ ನವರು ಈ ರೀತಿ ಹೇಳುತ್ತಿರುವುದರಿಂದ ಸಂಘ ಪರಿವಾರದವರಿಗೆ ‘ನಮ್ಮ ಕೈಗೆ ಬಂದ ಅಧಿಕಾರ ಜನತಾ ಪರಿವಾರದ ಮೂಲದವನ ಬಾಯಿಗೆ ಬಿತ್ತಲ್ಲಾ ಎಂಬ ಭಾವನೆ ಕಾಡತೊಡಗಿದೆ. ಬಸವರಾಜ ಬೊಮ್ಮಾಯಿ ಸಿಎಂ ಆದ ಮೇಲೆ ಮೊದಲ […]

ಕೋವಿಡ್ ಸೋಂಕು ನಿಯಂತ್ರಿಸಲು ಕಠಿಣಾತಿ ಕಠಿಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳ ಸೂಚನೆ

Sunday, August 1st, 2021
Basavaraaja Bommai

ಮಂಗಳೂರು : ಕೋವಿಡ್-19 ಸೋಂಕು ನಿರ್ವಹಣೆಯಲ್ಲಿ ಜಿಲ್ಲಾಡಳಿತ ಕೈಗೊಂಡ ಉಪಯುಕ್ತ ಕ್ರಮಗಳಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರನ್ನು ಅಭಿನಂದಿಸಿದರು. ಕೋವಿಡ್‍ಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಅತ್ಯಂತ ಅಗತ್ಯವಿರುವ ಪ್ರಾಣವಾಯು ವೈದ್ಯಕೀಯ ಆಮ್ಲಜನಕದ 17 ಘಟಕಗಳು ಜಿಲ್ಲೆಯಲ್ಲಿ ಅನುಷ್ಠಾನವಾಗುತ್ತಿದ್ದು, ಅವುಗಳಲ್ಲಿ ಈಗಾಗಲೇ 8 ಆಮ್ಲಜನಕ ಘಟಕಗಳ ಅನುಷ್ಠಾನ ಕಾರ್ಯ ಪೂರ್ಣಗೊಂಡಿದೆ, ಉಳಿದ ಘಟಕಗಳನ್ನು ಮುಂದಿನ 2 ವಾರಗಳಲ್ಲಿ ಪೂರ್ತಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಯವರಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಡಿಸಿ ಡಾ.ರಾಜೇಂದ್ರ ಅವರ ಕೆಲಸಕ್ಕೆ ಅತೀವ […]

ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ ನೆರವು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Saturday, July 31st, 2021
Bommai-meets-Health-minister

ನವದೆಹಲಿ  : ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಶ್ರೀ ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. […]

ಹಣಕಾಸು ಸಚಿವೆ ಭೇಟಿ ಮಾಡಿದ ಮುಖ್ಯಮಂತ್ರಿ: ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ

Saturday, July 31st, 2021
Bommai-Meets-Nirmala-Seetharaman

ನವದೆಹಲಿ :  ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ ಮಾಡುವುದಾಗಿ ಕೇಂದ್ರ […]