Blog Archive

ಸಾಲ ಹಿಂದಿರುಗಿಸದ್ದಕ್ಕೆ ಕೋಪಗೊಂಡ ಯುವಕನೊಬ್ಬ ಸ್ನೇಹಿತನ ತಲೆ ಕಡಿದು ಪೊಲೀಸ್‌ ಠಾಣೆಗೆ ಶರಣು

Wednesday, August 24th, 2016
Anjaneya

ದೇವನಹಳ್ಳಿ: 27 ಸಾವಿರ ರೂಪಾಯಿ ಸಾಲ ಹಿಂದಿರುಗಿಸದ್ದಕ್ಕೆ ಕೋಪಗೊಂಡ ಯುವಕನೊಬ್ಬ, ಸ್ನೇಹಿತನ ತಲೆ ಕಡಿದು ರುಂಡ ಸಮೇತ ಪೊಲೀಸ್‌ ಠಾಣೆಗೆ ಬಂದು ಶರಣಾಗಿರುವ ಘಟನೆ ತಾಲೂಕಿನ ವಿಶ್ವನಾಥಪುರ ಠಾಣೆಯಲ್ಲಿ ನಡೆದಿದೆ. ತಾಲೂಕಿನ ಕೆಂಪತಿಮ್ಮನಹಳ್ಳಿಯ ಮಂಜುನಾಥ್‌ (26) ಬರ್ಬರವಾಗಿ ಕೊಲೆಯಾದ ದುರ್ದೈವಿ. ಉಗನವಾಡಿ ಶಶಿಕುಮಾರ್‌ ಕೊಲೆ ಮಾಡಿ ಪೊಲೀಸರಿಗೆ ಶರಣಾದವ. ಈತ ಕನ್ನಮಂಗಲ ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣಸ್ವಾಮಿ ಅವರ ಪುತ್ರ ಎಂದು ಪೊಲೀಸರು ತಿಳಿಸಿದ್ದಾರೆ. ಶಶಿಕುಮಾರ್‌ ಮತ್ತು ಮಂಜುನಾಥ್‌ ಸ್ನೇಹಿತರಾಗಿದ್ದು ಶಶಿಕುಮಾರ್‌, ಮಂಜುನಾಥಗೆ 27 ಸಾವಿರ ರೂ. […]

ಹೂವಿನ ವ್ಯಾಪಾರಿಯ ಮೃತದೇಹ ಬಾವಿಯಲ್ಲಿ ಪತ್ತೆ

Thursday, August 18th, 2016
Jayaraj-Shetty

ಮಂಗಳೂರು: ನಗರದ ಹೂವಿನ ವ್ಯಾಪಾರಿ ಜಯರಾಜ್ ಶೆಟ್ಟಿ(42) ಎಂಬುವವರ ಮೃತದೇಹ ಅವರ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಶಂಕಿಸಲಾಗಿದೆ. ನಗರದ ಪಚ್ಚನಾಡಿ ನಿವಾಸಿಯಾಗಿರುವ ಅವರು, ಮನೆಯಲ್ಲಿ ಹಣಕಾಸಿನ ಸಮಸ್ಯೆಯಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಮೃತರು ನಗರದ ರಥಬೀದಿಯಲ್ಲಿ ಸಂಭ್ರಮ ಹೆಸರಿನ ಹೂವಿನ ಅಂಗಡಿ ಹೊಂದಿದ್ದು, ಹೂವಿನ ಆಲಂಕಾರದ ಕೆಲಸ ನಿರ್ವಹಿಸುತ್ತಿದ್ದರು. ಆ. 16ರ ಮಧ್ಯಾಹ್ನ ಮನೆಯಿಂದ ಹೊರ ಹೋದವರು ಕಾಣೆಯಾಗಿದ್ದರು. ಇಂದು ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಎರಡು ತಿಂಗಳ ಹಿಂದೆ ಪಚ್ಚನಾಡಿಯಲ್ಲಿ […]

ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುರುಪುರದ ಕೊಳಂಬೆ ನಿವಾಸಿ ಯೋಗಿಣಿ ಮೃತದೇಹ ಪತ್ತೆ

Friday, August 5th, 2016
Yogini

ಮಂಗಳೂರು: ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಮೃತದೇಹ ನಿನ್ನೆ ಪತ್ತೆಯಾಗಿದೆ. ಗುರುಪುರದ ಕೊಳಂಬೆ ನಿವಾಸಿ ಯೋಗಿಣಿ ಎಂಬಾಕೆ ಆತ್ಮಹತ್ಯೆಗೆ ಶರಣಾದ ಯುವತಿ. ಯೋಗಿಣಿ ಬೈಕಂಪಾಡಿಯಲ್ಲಿರುವ ಪ್ಲಾಸ್ಟಿಕ್ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದಳು. ಜುಲೈ ಮೂರರಂದು ಕೆಲಸಕ್ಕೆಂದು ಮನೆಬಿಟ್ಟವಳು ಅಂದು ಮಧ್ಯಾಹ್ನವೇ ರಜೆ ಕೇಳಿ ಬಂದಿದ್ದಳು. ಅಲ್ಲಿಂದ ಆಕೆ ಗುರುಪುರದ ಫಲ್ಗುಣಿ ನದಿ ಬಳಿ ತಲುಪಿದ್ದು, ತನ್ನ ಬ್ಯಾಗ್ ಹಾಗೂ ಮೊಬೈಲ್‌ನ್ನು ತಟದಲ್ಲಿಯೇ ಬಿಟ್ಟು ಅಲ್ಲಿಂದಲೇ ನದಿಗೆ ಹಾರಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ಹೇಳೀದ್ದರು. ವಿಷಯ ಮನೆಯವರಿಗೆ ತಿಳಿದು ಹುಡುಕಾಟ […]

ಬಿಜೆಪಿ ಮಂಜೇಶ್ವರ ಮಂಡಲ ಬೂತ್ ಮಟ್ಟ ಕಾರ್ಯಕರ್ತರ ತರಬೇತಿ ಶಿಬಿರ

Wednesday, January 6th, 2016
BJP Mandala

ಉಪ್ಪಳ: ಕೇರಳದಲ್ಲಿ ಕಳೆದ 10 ವರ್ಷಗಳಲ್ಲಿ ಜನರ ಆಶೋತ್ತರಗಳನ್ನು ರಕ್ಷಣೆ ಮಾಡದವರು ಇದೀಗ ಚುನಾವಣೆಯ ಸನಿಹದಲ್ಲಿ ಮತ್ತೆ ೫ ವರ್ಷ ಕಾಲ ಅಧಿಕಾರಕ್ಕಾಗಿ ಕೇರಳ ರಕ್ಷಾ ಯಾತ್ರೆಯನ್ನು ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯೆಂದು ಕೇರಳ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ , ರಾಜ್ಯ ಚುನಾವಣಾ ಉಸ್ತುವಾರಿಯ ವಿ.ಮುರಳೀಧರನ್ ಅಭಿಪ್ರಾಯಪಟ್ಟರು. ಮಂಗಲ್ಪಾಡಿ ಲಯನ್ಸ್ ಕ್ಲಬ್ ನಲ್ಲಿ ಮಂಗಳವಾರ ನಡೆದ ಬಿಜೆಪಿ ಮಂಜೆಶ್ವರ ಮಂಡಲ ಬೂತ್ ಕಾರ್ಯಕರ್ತರ ನಾಯಕತ್ವ ತರಬೇತಿ ಶಿಬಿರದಲ್ಲಿ ಅವರು ಮಾತನಾಡುತ್ತಿದ್ದರು. ಕೇರಳದ ಎಡ ಬಲ ರಂಗಗಳ ಆಡಳಿತ ವೈಫಲ್ಯ,ಅತಿಯಾದ […]